ರೋಣ: ಪಟ್ಟಣ ಸೇರಿದಂತೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ. ಅದರಲ್ಲಿಯೂ ಹೋಟೆಲ್ ಹಾಗೂ ದಾಬಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಹನಮಂತ ಚಲವಾದಿ ಆರೋಪಿಸಿದರು.

ಪಟ್ಟಣದಲ್ಲಿ ಸೋಮವಾರ ಅಬಕಾರಿ ಇಲಾಖೆ ಕಾರ್ಯಾಲಯದ ಎದುರು ಪ್ರತಿಭಟನೆ ವೇಳೆ ಅವರು ಮಾತನಾಡಿ, ಈಗಾಗಲೇ ಅಕ್ರಮ ನಡೆಯುತ್ತಿದ್ದಾಗಲೂ ಅಬಕಾರಿ ಇಲಾಖೆ ಅಧಿಕಾರಿಗಳು ಹೊಟೆಲ್ ಹಾಗೂ ದಾಬಾ ಮಾಲೀಕರಿಂದ ಹಣ ಪಡೆದು ಅಕ್ರಮ ನಡೆದಿರುವುದು ಗೊತ್ತಿದ್ದು ಗೊತ್ತಿಲ್ಲದಂತೆ ಇದ್ದಾರೆ. ಬೆಳವಣಕಿ, ಅಬ್ಬಿಗೇರಿ ಗ್ರಾಮಗಳಲ್ಲಿಯೂ ಕೂಡ ಅಕ್ರಮ ಸಾರಾಯಿ ಮಾರಾಟ ಜೋರಾಇದೆ. ಆದರೆ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಕಿಡಿಕಾರಿದ್ರು.

ಈ ವೇಳೆ ಪ್ರತಿಭಟನಾಕಾರರ ಮನವಿ ಸ್ವೀಕರಿಸಲು ಅಬಕಾರಿ ಇಲಾಖೆ ಸಿಬ್ಬಂದಿ ಬಸವರಾಜ್ ನಿಡಗುಂದಿ ಮುಂದಾದಾಗ ಅಕ್ರಮ ಸಾರಾಯಿ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಿ ಕ್ರಮ ಕೈಗೊಳ್ಳಲು ಪಟ್ಟುಹಿಡಿದರು. ಹೀಗಾಗಿ ಇಲಾಖೆ ಇಬ್ಬರು ಸಿಬ್ಬಂದಿಗಳನ್ನು ಕಳುಹಿಸಿ ಅಕ್ರಮ ಸಾರಾಯಿ ಮಾರಾಟ ಮಾಡುವ ಬಗ್ಗೆ ಪರಿಶೀಲಿಸಲಾಯಿತು.

ಈ ಸಂದರ್ಭದಲ್ಲಿ ದುರ್ಗೇಶ್ ಮುಗಳಿ, ಸಂತೋಷ ಛಲವಾದಿ, ನಾಗರಾಜ ದೊಡಮನಿ, ಮೈಲಾರಪ್ಪ ದೊಡ್ಡಮನಿ, ಹುಲಗಪ್ಪ ದೊಡ್ಡಮನಿ, ಮಂಜುನಾಥ್ ಹಾದಿಮನಿ, ಅಶೋಕ ತಳದವರು ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಗುಡುಗಿದ ತೇಜಸ್ವಿ ಯಾದವ್!

ಪಾಟ್ನಾ : ಸಿಎಂ ಯೋಗಿ ಆದಿತ್ಯನಾಥ್ ಅವರ ಭಾಷಣದ ವಿರುದ್ಧ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿಂದು 239 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 239 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5452…

ಪತ್ರಕರ್ತನ ಮೇಲೆ ದರ್ಪ: ತಪ್ಪೊಪ್ಪಿಕೊಂಡ ಗಜೇಂದ್ರಗಡ ತಹಶೀಲ್ದಾರ

ಈ ಘಟನೆ ನಡೆಯಬಾರದಿತ್ತು. ಘಟನೆಗೆ ಸಂಬಂಧಿಸಿದಂತೆ ಈ ರೀತಿ ಮುಂದೆ ಆಗದಂತೆ ಎಚ್ಚರಿಕೆ ವಹಿಸುತ್ತೇನೆ. ನನ್ನಿಂದ ತಪ್ಪಾಗಿದೆ ಎಂದು ಗಜೇಂದ್ರಗಡ ತಹಶೀಲ್ದಾರ್ ಅಶೋಕ್ ಕಲಘಟಗಿ ಉತ್ತರಪ್ರಭಕ್ಕೆ ತಪ್ಪೊಪ್ಪಿಕೊಂಡಿದ್ದಾರೆ.

ಮೋದಿಗೆ ಮಾಸ್ಕ್ ಕೊಟ್ಟ ರಾಜ್ಯದಲ್ಲಿನ ಕುಟುಂಬ! ಮೋದಿ ಏನು ಹೇಳಿದರು?

ದಾವಣಗೆರೆ : ಕೊರೊನಾದಿಂದಾಗಿ ಇಡೀ ವಿಶ್ವವೇ ನಲುಗುತ್ತಿದೆ. ಹೀಗಾಗಿ ಮಾಸ್ಕ್ ಪ್ರತಿಯೊಬ್ಬರ ಸಂಗಾತಿಯಂತಾಗಿದೆ. ಮಾಸ್ಕ್ ಧರಿಸುವಂತೆ ಪ್ರಧಾನಿ ಮೋದಿ ಕೂಡ ದೇಶದ ಜನರಿಗೆ ಕರೆ ನೀಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯ ಕುಟುಂವೊಂದು ಖಾದಿಯ ಮಾಸ್ಕ್ ಕಳುಹಿಸಿದೆ. ಅದಕ್ಕಾಗಿ ಮೋದಿ ಅವರಿಂದ ಪ್ರಶಂಸನೀಯ ಪತ್ರ ಕೂಡ ಬಂದಿದೆ.