Month: November 2020
193 posts
ಇನ್ಮುಂದೆ ಕನ್ನಡದಲ್ಲೂ ಇಂಜನೀಯರಿಂಗ್ ಕಲಿಬಹುದಂತೆ!
ಅದೆಷ್ಟೋ ವಿದ್ಯಾರ್ಥಿಗಳಿಗೆ ನಾನು ಡಾಕ್ಟರ್ ಆಗಬೇಕು. ಇಂಜನೀಯರ್ ಆಗಬೇಕು ಎನ್ನುವ ಕನಸಿರುತ್ತೆ. ಆದರೆ ಅದರಲ್ಲಿನ ಇಂಗ್ಲೀಷ ಜ್ಞಾನದ ಕೊರತೆಯಿಂದ ಜನೀಯರಿಂಗ್ ಕಲಿಯಲು ಹಿಂದೇಟು ಹಾಕುವವರೇ ಬಹಳಷ್ಟು ಜನರಿದ್ದರು. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತಿತ್ತು. ಆದರೆ ಇದೀಗ ಇದೊಕ್ಕೊಂದು ಪರಿಹಾರ ಸಿಕ್ಕಿದೆ. ಮಾತೃಭಾಷೆಯಲ್ಲಿಯೂ ಇಂಜನೀಯರಿಂಗ್ ಮಾಡಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.
ದೇಸೀ ಹುಡಗಿಯ ನಿರ್ಗಮನಕೆ ಭಾವಪೂರ್ಣ ಶ್ರದ್ಧಾಂಜಲಿ
ಪ್ರಸ್ತುತದಲ್ಲಿ ಜೀವಿಸುತ್ತಿರುವ ನಾವು ಅತ್ಯಾಧುನಿಕ ತಂತ್ರಜ್ಞಾನವನ್ನು ಅನುಭವಿಸುತ್ತಿರುವ ಅದೃಷ್ಟವಂತರು. ಆ ಕಾರಣದಿಂದಲೆ ಗೂಗಲ್ ಗೆ ಹೋಗಿ ‘ದೇಶಾಂಶ ಹುಡುಗಿ’ ಎಂದು ಟೈಪ್ ಮಾಡಿದರೆ ಸಾಕು, ಅನೇಕ ವೆಬ್ ಸೈಟ್ ಗಳು ಓಪನ್ ಆಗುತ್ತವೆ. ಕಣಜ ಡಾಟ್ ಇನ್, ನಾನುಗೌರಿ ಡಾಟ್ ಕಾಮ್, ಬುಕ್ ಬ್ರಹ್ಮ ಡಾಟ್ ಕಾಮ್, ಯಾವುದೇ ಇರಬಹುದು, ಎಲ್ಲದರಲ್ಲೂ ಈ ಹಿರಿಯ ಜೀವಿಯ ಸಾಹಿತ್ಯ, ಸಾಧನೆ ಅಪ್ ಲೋಡ್ ಆಗಿದೆ. ಬೆಳೆದು ನಿಂತ ಈ ಪೈರು ನೀಡಿದ ಫಸಲು ಅಪಾರ, ಅನನ್ಯ, ಅದ್ಭುತ.
ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಆಗ್ರಹ: ಕುರುಬ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ಒತ್ತಾಯ
ಕುರುಬರು ಮೂಲತ: ಬುಡಕಟ್ಟು ಜನಾಂಗದವರಾಗಿದ್ದು, ರಾಜ್ಯದಲ್ಲಿ ಈಗಾಗಲೇ ಜೇನು ಕುರುಬ, ಕಾಡು ಕುರುಬರು, ಗೊಂಡ, ರಾಜಗೊಂಡ, ಕುರುಬ, ಕುರುಮನ್ಸ್ ಜಾತಿಗಳು ಪರಿಶಿಷ್ಟ ಪಂಗಡದಲ್ಲಿವೆ. ಆದರೆ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಕುರುಬರಿಗೂ ಎಸ್.ಟಿ.ಮೀಸಲಾತಿ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮೀತಿ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.