ವಿಷಕಾರಿ ಹಾವು ಕಚ್ಚಿ ವ್ಯಕ್ತಿ ಸಾವು

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಚ್ಚಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಹೂವಿನಹಡಗಲಿ ಉಪ ಕಾರಾಗೃಹದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ: ರಾಷ್ಟ್ರೀಯ ಐಕ್ಯತೆಗೆ ಭಾಷಾ ಸೌಹಾರ್ದತೆ ಸಹಕಾರಿ

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶದ ಐಕ್ಯತೆಗೆ ಭಾಷಾ ಸೌಹಾರ್ಧತೆಯೇ ಸಹಕಾರಿಯಾಗಿದೆ ಎಂದು ಜಿಬಿಆರ್ ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಎಂ.ಗುರುಬಸವರಾಜಯ್ಯ ಹೇಳಿದರು.

ಹಸಿರು ಮತ್ತು ಕೆಂಪು ವರ್ಣಗಳು ಸಿಡಿದ್ದೆದ್ದರೆ ಸರ್ಕಾರಕ್ಕೆ ಉಳಿಗಾಲವಿಲ್ಲ: ಪೀರು ರಾಠೋಡ್

ರೈತರು ಮತ್ತು ಕಾರ್ಮಿಕರ ಶಕ್ತಿಯನ್ನು ಈ ಸರ್ಕಾರಕ್ಕೆ ತೋರಿಸಬೇಕಾಗುತ್ತದೆ. ಹಸಿರು ಬಣ್ಣದ ಸಂಕೇತ ಹೊಂದಿರುವ ರೈತರು, ಕೆಂಪು ಬಣ್ಣದ ಸಂಕೇತ ಹೊಂದಿರುವ ಕಾರ್ಮಿಕರ ಶಕ್ತಿ ಒಂದಾದರೆ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕಾರ್ಮಿಕ ಮುಖಂಡ ಪೀರು ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.

ಮುಂಡರಗಿ: ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು

ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಮುಂಡರಗಿ-ಬೂದಿಹಾಳ ರಸ್ತೆ ಮದ್ಯೆದಲ್ಲಿ ಅಪಘಾತ ಸಂಭವಿಸಿದ್ದು ರಾಮಚಂದ್ರ ಕಮ್ಮಾರ(36) ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ. ಮುಂಡರಗಿ ಪೊಲೀಸ್ ಟಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.

ಮನೆ ಬಾಗಿಲಿಗೆ ಬರಲಿದೆ ಅಯ್ಯಪ್ಪಸ್ವಾಮಿ ಪ್ರಸಾದ

450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಈ ಬಗ್ಗೆ ಒಪ್ಪಂದ ಮಾಡಿಕೊಂಡಿದೆ.

ವಿದ್ಯಾರ್ಥಿಗಲಿಗೆ ಈ ವರ್ಷ ಸೈಕಲ್ ಸಿಗೋದು ಡೌಟ್!

ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ ಎನ್ನಲಾಗಿದೆ.

ಗಂಗಾಪುರ ಸಕ್ಕರೆ ಕಾರ್ಖಾನೆಯಲ್ಲಿ ಕೊಲೆ ಪ್ರಕರಣ: ಆರೋಪಿ ಬಂಧನ!

ಇತ್ತಿಚೆಗೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪುರದ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಸೆಕ್ಯೂರಿಟಿ ಗಾರ್ಡ್ ಕೊಲೆ ಪ್ರಕರಣವನ್ನು ಕೊನೆಗೂ ಮುಂಡರಗಿ ಪೊಲೀಸರು ಭೇದಿಸಿದ್ದಾರೆ.

ಇನ್ಮುಂದೆ ಕನ್ನಡದಲ್ಲೂ ಇಂಜನೀಯರಿಂಗ್ ಕಲಿಬಹುದಂತೆ!

ಅದೆಷ್ಟೋ ವಿದ್ಯಾರ್ಥಿಗಳಿಗೆ ನಾನು ಡಾಕ್ಟರ್ ಆಗಬೇಕು. ಇಂಜನೀಯರ್ ಆಗಬೇಕು ಎನ್ನುವ ಕನಸಿರುತ್ತೆ. ಆದರೆ ಅದರಲ್ಲಿನ ಇಂಗ್ಲೀಷ ಜ್ಞಾನದ ಕೊರತೆಯಿಂದ ಜನೀಯರಿಂಗ್ ಕಲಿಯಲು ಹಿಂದೇಟು ಹಾಕುವವರೇ ಬಹಳಷ್ಟು ಜನರಿದ್ದರು. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತಿತ್ತು. ಆದರೆ ಇದೀಗ ಇದೊಕ್ಕೊಂದು ಪರಿಹಾರ ಸಿಕ್ಕಿದೆ. ಮಾತೃಭಾಷೆಯಲ್ಲಿಯೂ ಇಂಜನೀಯರಿಂಗ್ ಮಾಡಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.

ದೇಸೀ ಹುಡಗಿಯ ನಿರ್ಗಮನಕೆ ಭಾವಪೂರ್ಣ ಶ್ರದ್ಧಾಂಜಲಿ

ಪ್ರಸ್ತುತದಲ್ಲಿ ಜೀವಿಸುತ್ತಿರುವ ನಾವು ಅತ್ಯಾಧುನಿಕ ತಂತ್ರಜ್ಞಾನವನ್ನು ಅನುಭವಿಸುತ್ತಿರುವ ಅದೃಷ್ಟವಂತರು. ಆ ಕಾರಣದಿಂದಲೆ ಗೂಗಲ್ ಗೆ ಹೋಗಿ ‘ದೇಶಾಂಶ ಹುಡುಗಿ’ ಎಂದು ಟೈಪ್ ಮಾಡಿದರೆ ಸಾಕು, ಅನೇಕ ವೆಬ್ ಸೈಟ್ ಗಳು ಓಪನ್ ಆಗುತ್ತವೆ. ಕಣಜ ಡಾಟ್ ಇನ್, ನಾನುಗೌರಿ ಡಾಟ್ ಕಾಮ್, ಬುಕ್ ಬ್ರಹ್ಮ ಡಾಟ್ ಕಾಮ್, ಯಾವುದೇ ಇರಬಹುದು, ಎಲ್ಲದರಲ್ಲೂ ಈ ಹಿರಿಯ ಜೀವಿಯ ಸಾಹಿತ್ಯ, ಸಾಧನೆ ಅಪ್ ಲೋಡ್ ಆಗಿದೆ. ಬೆಳೆದು ನಿಂತ ಈ ಪೈರು ನೀಡಿದ ಫಸಲು ಅಪಾರ, ಅನನ್ಯ, ಅದ್ಭುತ.

ಗೋವಿಂದಗೌಡ್ರ ಬೇಸರ: ಪ್ರಚಾರಕ್ಕಾಗಿ ಸಣ್ಣತನದ ರಾಜಕೀಯ ಮಾಡಬಾರದು

ಬಿಜೆಪಿ ಮುಖಂಡ ಅನೀಲ್ ಮೆಣಸಿನಕಾಯಿ ಅವರು ಸಣ್ಣತನದ ರಾಜಕಾರಣ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬಾರದು ಎಂದು ಎಚ್.ಕೆ.ಪಾಟೀಲ್ ಅಭಿಮಾನಿ ಬಳಗದ ವೆಂಕನಗೌಡ ಗೋವಿಂದಗೌಡ್ರ ಕಿಡಿಕಾರಿದ್ರು.

ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಆಕ್ರೋಶ: ಸರ್ಕಾರದ ಕೆಟ್ಟ ಧೋರಣೆ ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲದು

ಸರ್ಕಾರದ ಕೆಟ್ಟ ಧೋರಣೆಗಳು ಎಲ್ಲಿಯವರೆಗೆ ನಡೆಯುತ್ತವೇಯೋ ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವದಿಲ್ಲ ನಮ್ಮ ಕಾರ್ಮಿಕ ವರ್ಗದವರು ಅನುಭವಿಸುವ ನೋವು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಸರ್ಕಾರದ ವಿರುದ್ಧ ಕಿಡಿಕಾರಿದರು.

ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಆಗ್ರಹ: ಕುರುಬ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ಒತ್ತಾಯ

ಕುರುಬರು ಮೂಲತ: ಬುಡಕಟ್ಟು ಜನಾಂಗದವರಾಗಿದ್ದು, ರಾಜ್ಯದಲ್ಲಿ ಈಗಾಗಲೇ ಜೇನು ಕುರುಬ, ಕಾಡು ಕುರುಬರು, ಗೊಂಡ, ರಾಜಗೊಂಡ, ಕುರುಬ, ಕುರುಮನ್ಸ್ ಜಾತಿಗಳು ಪರಿಶಿಷ್ಟ ಪಂಗಡದಲ್ಲಿವೆ. ಆದರೆ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಕುರುಬರಿಗೂ ಎಸ್.ಟಿ.ಮೀಸಲಾತಿ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮೀತಿ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.