ಗಜೇಂದ್ರಗಡ: ದಿನದಿಂದ ದಿನಕ್ಕೆ ಅಡುಗೆ ಅನಿಲ ಬೆಲೆ ಏಕಾಏಕಿ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗ್ರಾಹಕರನ್ನು ತತ್ತರಿಸುವಂತೆ ಮಾಡುತ್ತಿದೆ. ಕೇಂದ್ರದ ಆಡಳಿತ ಬಡವರ ಮೇಲಿನ ಗಧಾಪ್ರಹಾರದ ಆಡಳಿತವಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲಿ ಸಾಗಿದ್ದು, ಇದೀಗ ಎಲ್‌ಪಿಜಿ ದರ ಮತ್ತೊಮ್ಮೆ 50 ರೂಪಾಯಿ ಏರಿಕೆ ಕಂಡಿದೆ. ಈ ಹೊಸ ದರ ನಿನ್ನೆ ರಾತ್ರಿಯಿಂದಲೇ ಜಾರಿಗೆ ಬಂದಿದ್ದು, ಇದರಿಂದ ಸಾಮಾನ್ಯ ವರ್ಗದವರ ಮೇಲೆ, ತೀವೃತರವಾದ ಪರಿಣಾಮ ಬೀರುತ್ತಿದೆ. ಒಂದೆಡೆ ಹೊಗೆ ಮುಕ್ತ ಸಮಾಜ ಮಾಡುವ ಹೆಸರಿನಲ್ಲಿ ಉಚಿತ ಗ್ಯಾಸ ನೀಡಿ, ಇನ್ನೊಂದೆಡೆ ಅಡುಗೆ ಅನಿಲ ಬೆಲೆ ದುಪ್ಪಟ್ಟು ಮಾಡುವ ಮೂಲಕ ಬಡ ಹಾಗೂ ಮಧ್ಯಮ ವರ್ಗದವರನ್ನು ಕೊಳ್ಳೆ ಹೊಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಿಡಿಕಾರಿದರು.

ಇತ್ತೀಚೆಗೆ ಕೇಂದ್ರ ಸರ್ಕಾರ ಬಡವರ ಹೊಟ್ಟೆ ಮೇಲೆ ಬರೆ ಎಳೆಯವಂತಹ ಕಾಯ್ದೆಗಳನ್ನು ಜಾರಿಗೆ ತರುತ್ತಿರುವುದು ಒಂದೆಡೆಯಾದರೆ, ರಾತ್ರೋರಾತ್ರಿ ಎಲ್‌ಪಿಜಿ ಸಬ್ಸಿಡಿ ದರ ಕಡಿತದೊಂದಿಗೆ ಹೆಚ್ಚುವರಿಯಾಗಿ 50 ರೂಪಾಯಿ ಏರಿಕೆ ಮಾಡಿದ್ದು, ಬಿಜೆಪಿ ಸರ್ಕಾರದ ಈ ದಿಡೀರ ನಿರ್ಧಾರ ದೇಶದ ಜನರ ಮೇಲೆ ಮಾರಕವಾಗಿದೆ ಎಂದು ಆರೋಪಿಸಿದರು.

ರೂ. 621 ನೆಲೆ ಇದ್ದ ಗ್ಯಾಸ್, ಇದೀಗ ಏಕಾಏಕಿ ರು 681ಕ್ಕೆ ಏರಿಕೆಯಾಗಿದೆ. ಅಡುಗೆ ಅನಿಲಕ್ಕೆ ನೀಡುತ್ತಿದ್ದ ಸಬ್ಸೀಡಿ ಸಹ ಕೇಂದ್ರ ಸರ್ಕಾರ ಸದ್ದಿಲ್ಲದೇ, ರದ್ದುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಬಣ್ಣದ ಮಾತುಗಳಿಗೆ ಮರುಳಾದ ದೇಶದ ಜನರಿಗೆ ಕೇಂದ್ರ ನೀಡುತ್ತಿರುವ ಬಂಪರ್ ಕೊಡುಗೆಗಳಾಗಿವೆ. ಕೂಡಲೇ ಇಂತಹ ಬೆಲೆ ಏರಿಕೆಯ ನಿರ್ಧಾರಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪರಿಹಾರ ಸಿಗಬಹುದೇ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ.!

ಸಮಸ್ಯೆಗಳ ಸಾಗರವನ್ನೆ ಹೊತ್ತುಕೊಂಡು ನಿಂತ ರಣತೂರು ಗ್ರಾಮಕ್ಕೆ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳ ನಿವಾರಣೆಯಾಗಬಹುದೇ ಎಂಬ ತವಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.

ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…!

ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ…

ಬಿಪಿಎಲ್ ಕಾರ್ಡ್ ದಾರರು, ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಸರ್ಕಾರದ ಬೆಂಬಲ ಬೆಲೆಯೊಂದಿಗೆ ರಾಗಿ, ಭತ್ತ ಜೋಳ ಖರೀದಿಗೆ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅಗತ್ಯವರುವ ಕಡೆಗಳಲ್ಲಿ ಹೆಚ್ಚಿನ ಖರೀದಿ ಕೇಂದ್ರಗಳನ್ನು ತೆರದು ಈ ಬಗ್ಗೆ ಪ್ರಚಾರಗೊಳಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ಡಾ. ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ನಿತ್ಯ ಉಪಹಾರ ವ್ಯವಸ್ಥೆಗೆ ಚಾಲನೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್ ಅವರು ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ನಿತ್ಯ ಮದ್ಯಾಹ್ನದ ಲಘು ಉಪಹಾರ ವ್ಯವಸ್ಥೆಗೆ ಚಾಲನೆ ನೀಡಿದರು. ಈ ವೇಳೆ ಚಾಲನೆ ನೀಡಿ ಮಾತನಾಡಿದ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದ ಈ ಕಾರ್ಯ ಸಂಕಷ್ಟದಲ್ಲಿರುವ ನಿರ್ಗತಿಕರಿಗೆ ಸಹಾಯವಾಗಲಿದೆ ಎಂದರು.