ಸುರೇಶ್ ಲಮಾಣಿ
ಲಕ್ಷ್ಮೇಶ್ವರ: ರಸ್ತೆಗಳು ನಿರ್ಮಾಣ ಮಾಡಿದ ಮೇಲೆ ನಿರ್ಮಿಸಿದ ರಸ್ತೆಗಳ ಮೇಲೆ ಇಷ್ಟೆ ಸಾಮಾರ್ಥ್ಯದ ವಾಹನಗಳು ಓಡಾಡಬೇಕು ಎನ್ನುವ ನಿಯಮವಿದೆ. ಆದರೆ ಅದ್ಯಾವ ನಿಉಮವನ್ನು ಪಾಲಿಸದೇ ಇರುವ ಕಾರಣಕ್ಕೆ ರಸ್ತೆಯೊಂದು ಹಳ್ಳ ಹಿಡಿದಿದೆ.

ತಾಲೂಕಿನ ಆದರಹಳ್ಳಿ ಗ್ರಾಮದಿಂದ ದೇವಿಹಾಳ ಗ್ರಾಮದವರೆಗೆ ಹೋಗುವ ರಸ್ತೆ ಡಾಂಬರೀಕರಣ ಸಂಪೂರ್ಣ ಕಿತ್ತು ಹೋಗಿದ್ದು, ಇದಕ್ಕೆ ಅಲ್ಲಿಯ ಕಲ್ಲಿನ ಕ್ವಾರಿಗಳು ಹಾಗೂ ಓವರಲೋಡ ತುಂಬಿ ರಸ್ತೆ ಎಲ್ಲಾ ಹಾಳು ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರಹಳ್ಳಿಯಿಂದ ದೇವಿಹಾಳ ಗ್ರಾಮದ ರಸ್ತೆ ಸಂಪೂರ್ಣ ಕಿತ್ತು ಹೋಗಿದ್ದು ರೈತರಿಗೆ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಆದರಹಳ್ಳಿ ಹಾಗೂ ದೇವಿಹಾಳ ರಸ್ತೆಯೂ ಸಂಪೂರ್ಣ ಹಾಳಾಗಲು ಅಲ್ಲಿಯ ಕಲ್ಲುಗಣಿಗಾರಿಕೆಯೇ ಕಾರಣ ದಿನನಿತ್ಯವೂ ಓವರಲೋಡ ಹಾಕಿದರಿಂದ ಡಾಂಬರ್ ಕಿತ್ತು ಹೋಗಿದೆ.

ನೋಟಿಸ್ ಕೊಡಲಾಗುವುದು

ರಸ್ತೆಯೂ ಹಾಳಾಗಿ ದೊಡ್ಡ ದೊಡ್ಡ ಗುಂಡಿಗಳಾಗಿ ಮಾರ್ಪಟ್ಟಿರುವುದು ನನ್ನ ಗಮನಕ್ಕೆ ಬಂದಿದೆ. ಕಲ್ಲುಗಣಿಗಾರಿಕೆಯವರು ಓವರಲೋಡ ಹಾಕಿ ಟಿಪ್ಪರ್ ಚಲಾಯಿಸುತ್ತಿದ್ದರಿಂದ ರಸ್ತೆಯ ಸ್ಥಿತಿ ಈ ರೀತಿಯಾಗಿದೆ. ಈ ಬಗ್ಗೆ ಓವರ್ ಲೋಡ್ ಹಾಕಿ ವಾಹನ ಚಲಾಯಿಸುತ್ತಿರುವವರಿಗೆ ನೋಟಿಸ್ ನೀಡಲಾಗುವುದು.

-ನರೇಂದ್ರ ಡಿ.ಬಿ ಲೋಕೋಪಯೋಗಿ ಇಲಾಖೆ ಅಧಿಕಾರಿ

ಈ ರಸ್ತೆಯನ್ನು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಶಾಸಕರಾಗಿದ್ದ ಅವಧಿಯಲ್ಲಿ ಮಾಡಲಾಗಿತ್ತು. ಈಗ ಈ ರಸ್ತೆ ಆದರಹಳ್ಳಿಯಿಂದ ದೇವಿಹಾಳವರೆಗೂ ಕಿತ್ತು, ದೊಡ್ಡ ದೊಡ್ಡ ಗುಂಡಿಗಳಾಗಿ ಮಾರ್ಪಟಿದೆ. ರಸ್ತೆಯಲ್ಲಿ ತಗ್ಗು ಗುಂಡಿಗಳು ಬಿದ್ದಿದ್ದರಿಂದ ಬೈಕ್ ಸವಾರರು, ರೈತರಿಗೆ ಸಮಸ್ಯೆಯಾಗಿದೆ. ರಸ್ತೆಯಲ್ಲಿನ ಡಾಂಬರ್ ಕಿತ್ತು ಹೋಗಿದೆ. ಇದರಿಂದ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ರಸ್ತೆಯ ಮೇಲೆ ಹಾಕಿದ ಡಾಂಬರ್ ಹುಡುಕಿದರೂ ಕಾಣದಾಗಿದೆ.

ರಸ್ತೆ ಅವ್ಯವಸ್ಥೆ ಕುರಿತು ಸಂಬAಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸಿದ್ದಾರೆ. ತಕ್ಷಣ ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ರಸ್ತೆ ದುರಸ್ಥಿಗೆ ಮುಂದಾಗಬೇಕು ಎನ್ನುವುದು ಸಾರ್ವಜನಿಕರ ಒತ್ತಾಯ.


Leave a Reply

Your email address will not be published. Required fields are marked *

You May Also Like

ಅರಣ್ಯಾಧಿಕಾರಿ ವರ್ಗಾವಣೆಯಲ್ಲಿ ರಾಜಕೀಯ?

ಜಿಲ್ಲೆಯಲ್ಲೀಗ ಮತ್ತೆ ಮರಗಳ್ಳ ಮಾಫಿಯಾಕ್ಕೆ ರೆಕ್ಕೆ ಪುಕ್ಕ ಬರಲಿದೆಯಾ? ಎಂಬ ಅನುಮಾನ ಉಡುಪಿ ಜಿಲ್ಲೆಯ ಜನರಲ್ಲಿ ಶುರುವಾಗಿದೆ. ಇದರ ಹಿಂರುವುದು ರಾಜಕೀಯ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.

ಕೊರೊನಾ ಕಂಟಕದಲ್ಲಿ ಗದಗ ಜಿಲ್ಲೆ: ಇಂದು 30 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 585 ಕ್ಕೆ…

ಕಪ್ಪತ್ತಗುಡ್ಡ ವನ್ಯಜೀವಿಧಾಮ: ಕೈಬಿಡಲು ಒತ್ತಾಯಿಸಿ ಮನವಿ

ಸರ್ಕಾರ ಅವೈಜ್ಞಾನಿಕವಾಗಿ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮ ಎಂದು ಘೋಷಿಸಿದ್ದು, ಶಿರಹಟ್ಟಿ ತಾಲೂಕಿನ‌ ಬ್ಲಾಕ್ ನಂ 3 ಮತ್ತು 4 ರ ಅರಣ್ಯ ಕ್ಷೇತ್ರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅಹಿಂದ್ ಸಂಘ ಹಾಗೂ‌ ಕ್ರಷರ್ ಮತ್ತು‌ ಕಲ್ಲು ಗಣಿಗಾರಿಕೆ ಕಾರ್ಮಿಕ ಒಕ್ಕೂಟ ಸಂಘದ ವತಿಯಿಂದ ಬುಧವಾರ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ‌ ಸಲ್ಲಿಸಲಾಯಿತು.

ಹೊಳೆ ಇಟಗಿಯಲ್ಲಿ ರಸ್ತೆ ಹುಡುಕಿ ಕೊಡ್ತಿರಾ ಪ್ಲೀಸ್!

ನೀರಿನಿಂದ ತುಂಬಿಕೊಂಡ ಗುಂಡಿಗಳನ್ನು ನೋಡಿದರೆ ಅವು ಪಕ್ಕಾ ಮೀನಿನ ಗುಂಡಿಗಳಂತೆ ಕಾಣುತ್ತವೆ. ಆದ್ರೆ ಅವು ಗುಂಡಿಗಳಲ್ಲ. ಅರೇ ಇದೇನಿದು ಗುಂಡಿಗಳು ಅಂತಿರಾ, ಮತ್ತೆ ಗುಂಡಿಗಳಲ್ಲ ಅಂತಿರಾ ಅಂತ ಕನ್ಫ್ಯೂಸ್ ಆಗಬೇಡಿ ಇದು ಗ್ರಾಮವೊಂದ ರಸ್ತೆಯ ಕಥೆ.