ಶಿರಹಟ್ಟಿ: ಪುಣ್ಯಾಶ್ರಮದ ಗುರುಬಂಧುಗಳಾದ ಸಾಸರವಾಡ ಗ್ರಾಮದ ಮಲ್ಲನಗೌಡ ಪಾಟೀಲರು ಉತ್ತಮ ಸಂಗೀತ ಕಲಾವಿದರಾಗಿದ್ದರು. ಜೊತೆಗೆ ಸಾತ್ವಿಕ ಗುಣವುಳ್ಳವರಾಗಿದ್ದರು. ಅವರು ಸರಳತೆ ಹಾಗೂ ಆದರ್ಶಪ್ರಾಯ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಪುಣ್ಯಸ್ಮರಣೆಯ ನಿಮಿತ್ಯವಾಗಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧೀಪತಿ ಪೂಜ್ಯ ಕಲ್ಲಯ್ಯಜ್ಜನವರು ಹೇಳಿದರು.

ಅವರು ತಾಲೂಕಿನ ಸಾಸರವಾಡ ಗ್ರಾಮದಲ್ಲಿ ದಿ. ಮಲ್ಲನಗೌಡ ಫ ಪಾಟೀಲ ಅವರ ದ್ವೀತಿಯ ಪುಣ್ಯಸ್ಮರಣೆ ಹಾಗೂ ಪೂಜ್ಯ ಕಲ್ಲಯ್ಯಜ್ಜನವರ, ತುಲಾಭಾರ ಕಾರ್ಯಕ್ರಮದ ಸಾಣಿಧ್ಯ ವಹಿಸಿ ಆಶಿರ್ವಚನ ನೀಡಿದರು.

ತಂದೆಯವರ ಪುಣ್ಯಸ್ಮರಣೆ ನೆಪದಲ್ಲಿ ಸಾಧಕರಿಗೆ ಪ್ರೋತ್ಸಾಹ ನೀಡುವ ಮೂಲಕ ಜನಪರ ಹಾಗೂ ಸೇವಾಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರ್ಥಪೂರ್ಣವಾಗಿ ಪುಣ್ಯಸ್ಮರಣೆ ಆಚರಿಸಲಾಗುತ್ತಿದೆ ಎಂದರು.

ತಂದೆಗೆ ತಕ್ಕ ಮಕ್ಕಳಾದ ಫಕ್ಕೀರಗೌಡ ಮತ್ತು ನೀಲನಗೌಡ ಪಾಟೀಲ ಹಾಗೂ ಮನೆತನದ ಈ ಕಾರ್ಯ ಇತರರಿಗೆ ಮಾದರಿಯಾಗಿದೆ. ತುಂಗಭದ್ರಾ ನದಿ ಹರಿದು ಶ್ರೀ ಗಡ್ಡಿಬಸವೇಶ್ವರ ದೇವರು ನೆಲೆಸಿರುವ ಸಾಸರವಾಡ ಗ್ರಾಮವು ಮುಂದೆ ದೊಡ್ಡ ಸುಕ್ಷೇತ್ರವಾಗುತ್ತದೆ. ಶ್ರೀ ಗಡ್ಡಿಬಸವೇಶ್ವರ ಭಕ್ತಿ ಗೀತೆಗಳನ್ನು ಅದ್ಬುತವಾದ ಸಾಹಿತ್ಯದೊಂದಿಗೆ ರಚಿಸಿ ನಾಡಿನಾದ್ಯಂತ ಕ್ಷೇತ್ರದ ಮಹಿಮೆಯನ್ನು ತಿಳಿಸಿಕೊಡುತ್ತಿರುವ ಮಲ್ಲನಗೌಡರ ಪುತ್ರ ನೀಲನಗೌಡ ಪಾಟೀಲರ ಸಾಹಿತ್ಯ ಸೇವೆ ಮೆಚ್ಚುವಂತದ್ದು ಎಂದರು.

ಈ ವೇಳೆ ಗಡ್ಡಿಬಸವೇಶ್ವರ ಭಕ್ತಿ ಗೀತೆಗಳ ಧ್ವನಿ ಸುರುಳಿಯನ್ನು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಬಿಡುಗಡೆಗೊಳಿಸಿದರು. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಗೀತ ಕಲಾವಿದರಾದ ಶರಣಪ್ಪ ಕುಬಸದ, ಮಂಜುಳಾ ಫ ಕೊಪ್ಪದ, ಶಿವಬಸವ ಬಣಕಾರ, ಗೌರಮ್ಮ ಮರಡಿ  ನುಡಿ ನಮನ ಗೀತೆ ಪ್ರಸ್ತುತಪಡಿಸಿದರು. ಗ್ರಾಮದ ಯುವಕರಿಂದ ಸಮಾಳ‌ನಂದಿಕೋಲು ಸೇವೆ ನಡೆಯಿತು.

ಕಾರ್ಯಕ್ರಮದಲ್ಲಿ ಅಂದಾನಗೌಡ ತಿ ಪಾಟೀಲ, ಚನ್ನವೀರಶಾಸ್ತ್ರಿ ಕುಲಕರ್ಣಿ, ಬಸವಲಿಂಗಶಾಸ್ತ್ರಿ ಹಾಲಗಿ ಮರೋಳ, ಎಂ.ಸಿ.ಸೂರಣಗಿಮಠ, ಶಾಂತಪ್ಪ ಬಳ್ಳಾರಿ, ಚನವೀರಯ್ಯ ಮುದಗಲ್ ಮಠ,ಶಿವಪುತ್ರಯ್ಯ ದಿವಾನ, ಗುಡ್ಡಪ್ಪ ಬಾರಕೇರ, ಶಂಕ್ರಪ್ಪ ಕಮ್ಮಾರ, ಅಡಿವೆಪ್ಪ ತಳ್ಳಳ್ಳಿ, ಬಸವರಾಜ ಚ ಬಂಡಿ, ಬಸವರಾಜ ಹಾಲಗಿ, ಭಾಗ್ಯಶ್ರೀ ಬಾಬಣ್ಣ ಮುಂತಾದವರಿದ್ದರು.

ಪ್ರಾಸ್ತಾವಿಕ ನುಡಿಯನ್ನು ಎಸ್.ಎಸ್.ಪಾಟೀಲ ಮಾತನಾಡಿದರು. ನಿರೂಪಣೆಯನ್ನು ಡಿ.ಎಸ್.ರಿತ್ತಿ, ಶ್ರೀಧರಗೌಡ ಎಸ್ ಪಾಟೀಲ ನೆರವೇರಿಸಿದರು.

Leave a Reply

Your email address will not be published. Required fields are marked *

You May Also Like

ವರ್ತಮಾನ, ಇತಿಹಾಸ ಯಡಿಯೂರಪ್ಪರನ್ನು ಕ್ಷಮಿಸಲಾರದು: ಸಿದ್ದು

ರೈತ ವಿರೋಧಿ @BSYBJP ಅವರೇ, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

ಸರಳ ಗಣರಾಜ್ಯೋತ್ಸವ ಆಲಮಟ್ಟಿ ಪ್ರವಾಸಿ ತಾಣ ಉತ್ತೇಜನಕ್ಕೆ ಸಂಕಲ್ಪ- ಎಚ್.ಸುರೇಶ್

ಆಲಮಟ್ಟಿ: ಈ ಭಾಗದ ಪ್ರವಾಸಿ ತಾಣವಾಗಿ ಖ್ಯಾತಿ ಪಡೆಯುತ್ತಿರುವ ಆಲಮಟ್ಟಿಯನ್ನು ಇನ್ನಷ್ಟು ಪ್ರವಾಸಿಗರನ್ನು ಇತ್ತ ಆಕಷಿ೯ಸಿ…

ಮಾಜಿ ಸಿಎಂ ವಿರುದ್ಧ ಮತ್ತೊಮ್ಮೆ ಮುಗಿ ಬಿದ್ದ ಬಿಜೆಪಿ ನಾಯಕರು!

ಬೆಂಗಳೂರು : ಮೊದಲು ನೀವು ನಿಮ್ಮ ಪಕ್ಷದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟಾಂಗ್ ನೀಡಿದ್ದಾರೆ.

ಪ್ರಬುದ್ಧ ಜಾಣತನದ ನಿಲುವು ಪ್ರಕಟಿಸಲು ಪ್ರಧಾನಿಗೆ ಪತ್ರ

ಲಾಕ್ ಡೌನ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖಂಡ ಟಿ.ಈಶ್ವರ ಬಹಿರಂಗ ಪತ್ರ ಬರೆದಿದ್ದಾರೆ.