ಬೆಂಗಳೂರು: ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಕೂಡಲೇ ಮುಷ್ಕರ ಕೈಬಿಟ್ಟು ಸಾರಿಗೆ ಸಚಿವರ ಜೊತೆ ಚರ್ಚೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾರಿಗೆ ನೌಕರರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಮುಷ್ಕರದಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರಿಗೆ ಸಲಹೆ ಸೂಚನೆಗಳನ್ನು ನೀಡಿದ್ದೇನೆ.

ಸಾರಿಗೆ ಸಚಿವರು ಸಹ, ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ರೈತ ಸಂಘದ ಮಖಂಡರಾದ ಕೋಡಿಹಳ್ಳಿ ಚಂದ್ರಶೇಖರ ಅವರು ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಮತ್ತು ರಾಜ್ಯದ ವಿವಿದೆಡೆ ಕೆಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿ ಸಾರ್ವಜನಿಕ ಸ್ತಿಪಾಸ್ತಿಗೆ ನಷ್ಟ ಉಂಟಾಗಲು ಕಾರಣಿ ಕರ್ತರಾಗಿರುತ್ತಾರೆ. ಅಲ್ಲದೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ ಅವರು ಅತ್ಯಂತ ಲಘುವಾಗಿ ಮಾತನಾಡಿರುವುದು ಕೂಡ ಖಂಡನೀಯವಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ ಕರ್ತವ್ಯಕ್ಕೆ ಮರಳಿ ನಂತರ ಸಾರಿಗೆ ಸಚಿವರ ಜೊತೆ ಚರ್ಚೆಗೆ ಬರಲು ಮತ್ತೊಮ್ಮೆ ಮನವಿ ಮಾಡುತ್ತೇನೆ.

Leave a Reply

Your email address will not be published. Required fields are marked *

You May Also Like

ಸಾವನ್ನು ಗೆದ್ದು ಬಂದ 8 ತಿಂಗಳ ಮಗು

ಪಾಸಿಟೀವ್ ಒಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ತಿಂಗಳ ಹೆಣ್ಣು ಮಗು ಗುಣಮುಖವಾಗಿದ್ದು ಸಾವನ್ನೆ ಗೆದ್ದು ಬಂದಿದೆ.

ಸಮಸ್ಯೆಗಳ ಕುರಿತು ಪ್ರತ್ಯೇಕ ಸಾರಿಗೆ ಇಲಾಖೆಯ ಸಹಾಯವಾಣಿ : ಲಕ್ಷ್ಮಣ ಸವದಿ

ಬೆಂಗಳೂರು: ಕೋವಿಡ್ ತಡೆಯುವ ಉದ್ದೇಶದಿಂದ ಸಾರಿಗೆ ಸೇವೆ, ಆಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸಾರಿಗೆ ಇಲಾಖೆ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಆಲಮಟ್ಟಿ ಹಳಕಟ್ಟಿ ಶಾಲೆಯಲ್ಲಿ ಅಮೃತ ಮಹೋತ್ಸವ ಸಂಭ್ರಮ ದೇಶಪ್ರೇಮ ಯುವಜನತೆಯಲ್ಲಿ ಚಿರಾಯುವಾಗಲಿ – ಜಿ.ಎಂ.ಕೋಟ್ಯಾಳ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಜಾತಿ, ಮಥ, ಪಂಥ, ಧರ್ಮಕ್ಕಿಂತ ದೇಶ ದೊಡ್ಡದು. ಆ ಅಭಿಮಾನ,ಗೌರವಯುಳ್ಳ ದೇಶ…

ಹೊಸ ಶಿಕ್ಷಣ ನೀತಿ ಸಾಕಾರಕ್ಕೆ ಸಹಕಾರ ಅಗತ್ಯ- ಅರುಣ ಶಹಾಪುರ

ವರದಿ: ಗುಲಾಬಚಂದ ಜಾಧವ ಉತ್ತರಪ್ರಭಆಲಮಟ್ಟಿ: ಮೂವತ್ತು ನಾಲ್ಕು ವಸಂತಗಳ ಬಳಿಕ 21 ನೇ ಶತಮಾನ ಕಂಡ…