ಲಕ್ಷ್ಮೇಶ್ವರ: ತಾಲ್ಲೂಕಿನಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣಾ ಕಣ ರಂಗೇರುತ್ತಿದೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

ಒಟ್ಟು 13 ಗ್ರಾಮ ಪಂಚಾಯ್ತಿಗಳಿಗಾಗಿ 174 ಸದಸ್ಯರನ್ನು ಆಯ್ಕೆ ಮಾಡಬೇಕಾಗಿದೆ. ಇದಕ್ಕಾಗಿ 512 ಜನ ಸ್ಪರ್ಧಾಳುಗಳು ಕಣದಲ್ಲಿ ಉಳಿದು ಕೊಂಡಿದ್ದಾರೆ.

ಅವಿರೋಧ ಆಯ್ಕೆ: ಅಡರಕಟ್ಟಿ ಪಂಚಾಯ್ತಿಯಿಂದ 1, ಪುಟಗಾಂವ್‍ ಬಡ್ನಿಯಿಂದ 1, ಹುಲ್ಲೂರು ಪಂಚಾಯ್ತಿಯಿಂದ ಇಬ್ಬರು, ಮಾಡಳ್ಳಿ ಪಂಚಾಯ್ತಿಯಿಂದ ಮೂವರು ಸೇರಿ ಒಟ್ಟು ಏಳು ಜನ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಅಂದರೆ 174 ಸದಸ್ಯರ ಪೈಕಿ ಉಳಿದ 167 ಸದಸ್ಯರ ಆಯ್ಕೆಗೆ ಮತದಾರರು ಮತ ಚಲಾಯಿಸಬೇಕಾಗಿದೆ.

ಮತದಾರರು: ತಾಲ್ಲೂಕಿನಲ್ಲಿ ಒಟ್ಟು 55,482 ಮತದಾರರು ಇದ್ದು, ಅವರಲ್ಲಿ 28,100 ಪುರುಷ ಮತ್ತು 27,382 ಮಹಿಳಾ ಮತದಾರರು ಇದ್ದಾರೆ. ಪ್ರಚಾರ ಪತ್ರಿಕೆಗಳಿಗಾಗಿ ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ಮುದ್ರಣಾಲಯಕ್ಕೆ ಮುಗಿ ಬಿದ್ದಿದ್ದು, ಪಟ್ಟಣದ ಎಲ್ಲ ಮುದ್ರಣಾಲಯಗಳು ಜನರಿಂದ ತುಂಬಿದ್ದವು.

ಪ್ರಚಾರ ಶುರು: ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಕೆಲ ಅಭ್ಯರ್ಥಿಗಳು ತಮ್ಮ ಗುಂಪಿನವರೊಂದಿಗೆ ಪ್ರಚಾರ ಆರಂಭಿಸಿದ್ದಾರೆ. ವಾರ್ಡ್‍ನ ಪ್ರತಿ ಮನೆಗೂ ಭೇಟಿ ನೀಡಿ ಮತ ಬೇಟೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರೋಣ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಧರಣಿ; ಐಷಾರಾಮಿ ವಾಹನದಲ್ಲಿ ಓಡಾಡುವವರಿಗೆ ನಮ್ಮ ಕಷ್ಟ ಗೊತ್ತಾಗೋದು ಹೇಗೆ?

ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿರುವಾಗ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಐಷಾರಾಮಿ ವಾಹನದಲ್ಲಿ ಅಡ್ಡಾಡುತ್ತಿರುವಾಗ ನಮ್ಮಂತವರ ಕಷ್ಟ ನಿಮಗೆ ಹೇಗೆ ಗೊತ್ತಾಗುತ್ತದೆ ಎಂದು ತಾಲೂಕು ದಲಿತ ಸಂಘಟನೆಯ ಮುಖಂಡ ವೀರಪ್ಪ ತೆಗ್ಗಿನಮನಿ ಆಕ್ರೋಶ ವ್ಯಕ್ತಪಡಿಸಿದರು.

ಆಲಮಟ್ಟಿ: ಬಸವಭೂಮಿ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತಾತೀಥ್ಯ

ಆಲಮಟ್ಟಿ : ಆಲಮಟ್ಟಿಗೆ ಆಗಮಿಸಿದ್ದ ಬಸವಭೂಮಿ ಯಾತ್ರೆಯ ಸಹಸ್ರಾರು ಬಸವಭಕ್ತ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತದೊಂದಿಗೆ ಬರಮಾಡಿಕೊಂಡು…

ತಾಂಡಾ ಅಭಿವೃದ್ಧಿ ನಿಗಮದ ಉಪಯೋಗ ಪಡೆದುಕೊಳ್ಳಿ: ಶಾಸಕ ರಾಮಣ್ಣ ಲಮಾಣಿ

ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಯಶಶ್ವಿನಿ ಯೋಜನೆ ರೈತರಿಗೆ ಮಾಸಿಕ ವೇತನ ಜಾರಿಗೊಳಿಸಿ

ಲಕ್ಷ್ಮೇಶ್ವರ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಕರವೇ ಸ್ವಾಭಿಮಾನಿ ಬಣದಿಂದ ಉಪ ತಹಸೀಲ್ದಾರ್ ಮಂಜುನಾಥ ದಾಸಪ್ಪನವರಿಗೆ ಮನವಿ…