ಗಜೇಂದ್ರಗಡ: ತೀವೃ ಕುತೂಹಲ ಕೆರಳಿಸುವುದಲ್ಲದೇ, ಪೈಪೋಟಿಗೆ ಕಾರಣವಾಗಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ ಮಂಗಳವಾರ ರಾತ್ರಿ ಪ್ರಕಟವಾಗಿದೆ.

ಗಜೇಂದ್ರಗಡ ತಾಲೂಕಾ ಸಂಘದ ಒಟ್ಟು 10 ಸ್ಥಾನಗಳಿಗೆ 18 ಜನರು ಸ್ಪರ್ಧಿಸಿದ್ದರು. ಗ್ರಾಮ ಪಂಚಾಯತ್ ಚುನಾವನೆ ಮದ್ಯೆಯೂ ಕಳೆದೊಂದು ವಾರಗಳಿಂದ ಶಿಕ್ಷಕರು ಶಾಲೆಗಳಿಗೆ ತೆರಳುವ ಮೂಲಕ ಭರ್ಜರಿ ಪ್ರಚಾರ ನಡೆಸಿದ್ದರು.

ಐದು ವರ್ಷಗಳ ಅಧಿಕಾರವಧಿಗೆ ಶಿಕ್ಷಕರ ವಲಯದಲ್ಲಿ ಪೈಪೋಟಿಗಳು ಏರ್ಪಟ್ಟಿದ್ದವು. ಆದರೆ ಅಂತಿಮವಾಗಿ ಮತದಾರು ಶಿಕ್ಷಕರು 7 ಪುರುಷ 3 ಮಹಿಳಾ ಶಿಕ್ಷಕರನ್ನು ಆಯ್ಕೆ ಮಾಡುವ ಮೂಲಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ನಾಂದಿ ಹಾಡಿದ್ದಾರೆ.

466 ಮತದಾರರಲ್ಲಿ ೩೮೪ ಮತಗಳು ಚಲಾವಣೆಯಾಗಿದ್ದವು. ಅಂತಿಮವಾಗಿ ಬಿ.ಎಸ್. ಅಣ್ಣಿಗೇರಿ, ಎ.ಕೆ. ಒಂಟಿ, ವಿ.ಎ. ಹಾದಿಮನಿ, ಎಸ್.ಕೆ. ಸರಗಣಾಚಾರಿ, ಮಹಮ್ಮದರಫಿ ಹುನಗುಂದ, ಬಸವರಾಜ ಹಿರೇಮಠ, ಎಸ್.ಎಚ್. ಪರಸಣ್ಣವರ, ಎಸ್.ಆರ್. ಅಂಗಡಿ, ಎಫ್.ಎಫ್. ದೊಡ್ಡಮನಿ, ಸುಧಾ ಜಾಡರ ಅವರು ಚುನಾವಣೆಯಲ್ಲಿ ಹೆಚ್ಚು ಮತ ಪಡೆದು ವಿಜಯ ಸಾಧಿಸಿದರು.

ಫಲಿತಾಂಶ ಹೊರಬೀಳುತ್ತಿದ್ದಂತೆ ಮತಗಟ್ಟೆ ಕೇಂದ್ರದ ಮುಂದೆ ಜಮಾಮಿಸಿದ್ದ ಶಿಕ್ಷಕರು ಸ್ಪರ್ಧೆಯಲ್ಲಿ ಜಯಗಳಿಗೆ ಶಿಕ್ಷಕರಿಗೆ ಹೂಮಾಲೆ ಹಾಕುವ ಮೂಲಕ ಅಭಿನಂದಿಸಿ, ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಎಸ್.ಎ. ಜಿಗಳೂರ, ಎಸ್.ಎಸ್. ಕೊಪ್ಪರದ, ಆರ್.ಜಿ. ಮ್ಯಾಕಲ್, ಕೆ.ಜಿ. ಸಂಗಟಿ ಸೇರಿದಂತೆ ಹಲವಾರು ಶಿಕ್ಷಕರು ಪಾಲ್ಗೊಂಡಿದ್ದರು. ಚುನಾವಣಾ ಅಧಿಕಾರಿಯಾಗಿ ಎಸ್.ಎಂ. ಬದಾಮಿ ಮತ್ತು ಸಹಾಯಕ ಚುನಾವಣಾ ಅಧಿಕಾರಿ ಸಿ.ಎ¸ಸ್. ಹರಗಬಾಳ, ಮತದಾನ ಅಧಿಕಾರಿ, ಎಸ್.ಎಂ ಅಗಸಿಬಾಗಿಲ, ಐ.ಕೆ. ಹಂಸನೂರ, ಎಸ್.ಪಿ. ಕುರಿ ಸೇರಿದಂತೆ ಇತರರು ಕಾರ್ಯ ನಿರ್ವಹಿಸಿದರು.

Leave a Reply

Your email address will not be published. Required fields are marked *

You May Also Like

ಎಸ್.ಎಸ್.ಎಲ್.ಸಿ-ಪಿಯುಸಿ ಪರೀಕ್ಷೆ ವೇಳಾಪಟ್ಟಿ: ಪಾಲಕ, ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ..

ರಾಜ್ಯದಲ್ಲಿ ಜೂನ್ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಗೂ ಜೂನ್ 18 ಕ್ಕೆ ಪಿಯುಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಗೊಜನೂರು ಎರೆಬೂದಿಹಾಳ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಎರೆ ಬೂದಿಹಾಳ ರಸ್ತೆ ಕಾಮಗಾರಿಗೆ ರವಿವಾರ ಶಾಸಕ ರಾಮಣ್ಣ ಲಮಾಣಿ ಭೂಮಿಪೂಜೆ ನೆರವೇರಿಸಿದರು.

ಕೇಲೂರ ಗ್ರಾಮಕ್ಕೆ ಜಿಲ್ಲಾಧಿಕಾರಿಗಳ ಬೇಟಿ: ಸಮಾಜ ಕಲ್ಯಾಣ ಇಲಾಖೆಯಿಂದ 4ಲಕ್ಷದ ಚೆಕ್ ವಿತರಣೆ

ಉತ್ತರಪ್ರಭ ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು…

ಮಕ್ಕಳಿಗೆ ಸೇವಾ ಮನೋಭಾವ ನೀಡಿ ; ಲಮಾಣಿ

ಸ್ಕೌಟ್ಸ್ ಮತ್ತು ಗೈಡ್ಸ್ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಕೆ.ಆರ್.ಲಮಾಣಿ ಹೇಳಿದರು.