ಶಿರಹಟ್ಟಿ: ಪ್ರಸ್ತುತ ನಡೆಯುತ್ತಿರುವ ಗ್ರಾಪಂ ಚುನಾವಣೆ ಕುರಿತಂತೆ ಪಿ.ಆರ್.ಓ(ಮತಗಟ್ಟೆ ಅಧಿಕಾರಿ) ಹಾಗೂ ಎ.ಪಿ.ಆರ್.ಓ( ಸಹಾಯಕ ಮತಗಟ್ಟೆ ಅಧಿಕಾರಿ)ಗಳಿಗೆ ಬುಧವಾರ ಸ್ಥಳೀಯ ಎಫ್ ಎಂ.ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.

ಈ ಕುರಿತು ಉತ್ತರಪ್ರಭದೊಂದಿಗೆ ಮಾತನಾಡಿದ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಕೊವಿಡ್ ನಿಯಮಾನುಸಾರ ಮತಗಟ್ಟೆಗಳನ್ನು ಸ್ಯಾನಿಟೈಸ್ ಮಾಡುವುದು, ಮತಗಟ್ಟೆ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್ ಹಾಗೂ ಕೈಗಬಸು ಧರಿಸಬೇಕು. ಥರ್ಮಲ್ ಗನ್ ಸಹಾಯದಿಂದ ಮತದಾರರ ದೇಹದ ಉಷ್ಣತೆಯನ್ನು ಪರೀಕ್ಷಿಸಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳವಂತೆ ಸೂಚನೆ ನೀಡಬೇಕು.

ಚುನಾವಣೆಯ ಪೂರ್ವ ದಿನದಂದು ಮತಗಟ್ಟೆಗಳಲ್ಲಿ ಮತದಾನಕ್ಕೆ ಬೇಕಾಗುವ ಸಾಮಗ್ರಿಗಳ ಬಗ್ಗೆ ಗಮನ ಹರಿಸಬೇಕು. ಶಾಂತಿಯುತ, ಸುಗಮ ಮತ್ತು ನಿಷ್ಪಕ್ಷಪಾತ ಮತದಾನಕ್ಕೆ ಅವಕಾಶ ನೀಡಬೇಕು. ಅಲ್ಲದೆ ಮಾದರಿ ಮತಗಟ್ಟೆ ಮುಖಾಂತರ ಮತಗಟ್ಟೆಗಳ ಸಿದ್ದತೆಯ ಬಗ್ಗೆ ವಿವರಣೆ ನೀಡಲಾಯಿತು.

ಮತದಾನ ಮುಗಿದ ನಂತರ ಮತಪೆಟ್ಟಿಗೆಗಳನ್ನು ನಿಯಮಾನುಸಾರ ಮೊಹರು ಮಾಡಿ ಅಡ್ರೆಸ್ ಟ್ಯಾಗ್ ಭದ್ರವಾಗಿ ಅಳವಡಿಸುವುದರ ಜೊತೆಗೆ ಅಚ್ಚುಕಟ್ಟಾಗಿ ಮತದಾನ ನಡೆಸುವುದರ ಬಗ್ಗೆ ತರಬೇತಿ ನೀಡಲಾಯಿತು ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಕೆಪಿಎಸ್ಇ ಪರೀಕ್ಷೆ ಬರೆಯುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈಗಾಗಲೇ ಜನೇವರಿ ತಿಂಗಳಲ್ಲೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯ (ಕೆಪಿಎಸ್ಇ) ಪರೀಕ್ಷೆಯನ್ನು ಫೆ.28ಕ್ಕೆ ನಿಗಧಿ ಪಡಿಸಲಾಗಿದೆ.

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ ಇಂದು ನಿಧನ

ಹಿರಿಯ ಸಾಹಿತಿ, ಖ್ಯಾತ ಕವಿ ಎನ್.ಎಸ್.ಲಕ್ಷ್ಮಿನಾರಾಯಣ ಭಟ್ (85) ಶನಿವಾರ ನಿಧನರಾಗಿದ್ದಾರೆ.

ಇಂದು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಆಲಮಟ್ಟಿ ಹಳಕಟ್ಟಿ ಶಾಲೆಯಲ್ಲಿ ಅಮೃತ ಮಹೋತ್ಸವ ಸಂಭ್ರಮ ದೇಶಪ್ರೇಮ ಯುವಜನತೆಯಲ್ಲಿ ಚಿರಾಯುವಾಗಲಿ – ಜಿ.ಎಂ.ಕೋಟ್ಯಾಳ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಜಾತಿ, ಮಥ, ಪಂಥ, ಧರ್ಮಕ್ಕಿಂತ ದೇಶ ದೊಡ್ಡದು. ಆ ಅಭಿಮಾನ,ಗೌರವಯುಳ್ಳ ದೇಶ…