ಗಜೇಂದ್ರಗಡ: ಸ್ಥಳೀಯ ಪೊಲೀಸ್ ಇಲಾಖೆಯಿಂದ ಶ್ರೀ ಕಾಲಕಾಲೇಶ್ವರ ವೃತ್ತದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಕರಪತ್ರ ನೀಡುವ ಮೂಲಕ ಕಡ್ಡಾಯವಾಗಿ ಹೆಲ್ಮೇಟ್ ಧರಿಸಿ ವಾಹನ ಚಲಾವಣೆ ಮಾಡಬೇಕು ಎಂದು ಶುಕ್ರವಾರ ಜಾಗೃತಿ ಮೂಡಿಸಿದರು.

ಈ ವೇಳೆ ಠಾಣೆ ಪಿಎಸ್‌ಐ ಗುರುಶಾಂತ್ ದಾಶ್ಯಾಳ ಮಾತನಾಡಿ, ಹೆಲ್ಮೆಟ್ ಧರಿಸದವರನ್ನು ಹಿಡಿದು ದಂಡ ವಿಧಿಸುವುದು ಪೊಲೀಸರ ಉದ್ದೇಶವಲ್ಲ. ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ತಮ್ಮ ಅಮೂಲ್ಯ ಜೀವ ಕಾಪಾಡಲಿ ಎಂಬ ಸದುದ್ದೇಶ ಇಲಾಖೆಯದ್ದಾಗಿದೆ. ಭಾರತದಲ್ಲಿ ಪ್ರತಿ ವರ್ಷ ರೋಗ, ರುಜಿನಗಳಿಗೆ ಬಲಿಯಾಗುವವರಿಗಿಂತ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಯಾವುದೇ ಜನಹಿತಾಸಕ್ತಿಯ ಯೋಜನೆ ಸಾಕಾರವಾಗಲು ಜನರ ಸಹಭಾಗಿತ್ವ ಅತಿಮುಖ್ಯ. ಆದ್ದರಿಂದ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಕೈ ಜೋಡಿಸಬೇಕು. ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವವರನ್ನು ಎಚ್ಚರಿಸುವುದು ಯುವಕರ ಕರ್ತವ್ಯ. ಮುಖ್ಯವಾಗಿ ಯುವಕರು ಮೊದಲು ಹೆಲ್ಮೆಟ್ ಧರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಬೇಕು ಈ ದೆಸೆಯಲ್ಲಿ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ತಮ್ಮ ಪ್ರಾಣ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದರು.

ಕಾಲಕಾಲೇಶ್ವರ ವೃತ್ತದಲ್ಲಿ ಸಂಚರಿಸುವ ಪ್ರತಿಯೊಬ್ಬ ಬೈಕ್ ಸವಾರನಿಗೂ ಕರೆದು, ಕರಪತ್ರ ನೀಡಿ, ಹೆಲ್ಮೇಟ್‌ನ ಮಹತ್ವವನ್ನು ಪೊಲೀಸ್ ಸಿಬ್ಬಂದಿಗಳು ಸಾರಿದರು. ಎಎಸ್‌ಐ ಎಸ್.ಬಿ. ದಾಡಿಬಾವಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು.

Leave a Reply

Your email address will not be published. Required fields are marked *

You May Also Like

ನಾಳೆಯಿಂದ ರಾಜ್ಯದಲ್ಲಿ ಬಸ್ ಸಂಚಾರ?: ನಿಯಮಗಳೇನು ಗೊತ್ತಾ?

ಬೆಂಗಳೂರು: ಲಾಕ್ ಡೌನ್ ನಿಂದ ಬಸ್ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ನಾಳೆಯಿಂದ ಮತ್ತೆ ಬಸ್…

ಅಮೇರಿಕ ಶ್ವೇತ ಭವನಕ್ಕೂ ಎಂಟ್ರಿ ಕೊಟ್ಟ ಸೋಂಕು!

ಅಮೇರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಮಾಧ್ಯಮ ಕಾರ್ಯದರ್ಶಿಗೆ ಕೊರೋನಾ ವೈರಸ್ ತಗಲಿದೆ. ಶ್ವೇತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕು ತಗಲಿಸಿಕೊಂಡಿರುವ ಎರಡನೇ ವ್ಯಕ್ತಿ ಇವರಾಗಿದ್ದಾರೆ.

ಸದನಕ್ಕೆ ಅಷ್ಟೇ ಅಲ್ಲ ರಾಜ್ಯಕ್ಕೆ ಮಾಡಿದ ಅವಮಾನವಿದು

ಸಿದ್ದರಾಮಯ್ಯ ಅವರೇ, ನಿಮ್ಮ ಈ ಸಾಧನೆಯನ್ನು ರಾಜ್ಯದ ಜನತೆ ಮರೆತಿಲ್ಲ. ಕಲಾಪ ಬಹಿಷ್ಕಾರ ನಿಮ್ಮ ದುರಹಂಕಾರ ಮತ್ತು ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ.

ಗದಗನಲ್ಲಿ ಮತ್ತೆ ನಾಲ್ಕು ಕೊರೋನಾ ಪಾಸಿಟಿವ್

ಕೊರೋನಾ ಸೋಂಕು ಮುಕ್ತವಾಗಿದ್ದ ಗದಗ ಜಿಲ್ಲೆಯಲ್ಲಿ ಕಳೆದೆರಡು ದಿನಗಳ ಹಿಂದಷ್ಟೆ ಮೂರು ಕೊರೋನಾ ಪಾಸಿಟ್ ಕೇಸ್ ಪತ್ತೆಯಾಗಿದ್ದವು. ಇದರ ಬೆನ್ನಲ್ಲೆ ಇದೀಗ ಇಂದು ಮತ್ತೆ ನಾಲ್ಕು ಪಾಸಿಟಿವ್ ಕೇಸ್ ದೃಢಪಟ್ಟಿವೆ.