ಗಜೇಂದ್ರಗಡ: ಸ್ಥಳೀಯ ಪೊಲೀಸ್ ಇಲಾಖೆಯಿಂದ ಶ್ರೀ ಕಾಲಕಾಲೇಶ್ವರ ವೃತ್ತದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಕರಪತ್ರ ನೀಡುವ ಮೂಲಕ ಕಡ್ಡಾಯವಾಗಿ ಹೆಲ್ಮೇಟ್ ಧರಿಸಿ ವಾಹನ ಚಲಾವಣೆ ಮಾಡಬೇಕು ಎಂದು ಶುಕ್ರವಾರ ಜಾಗೃತಿ ಮೂಡಿಸಿದರು.

ಈ ವೇಳೆ ಠಾಣೆ ಪಿಎಸ್‌ಐ ಗುರುಶಾಂತ್ ದಾಶ್ಯಾಳ ಮಾತನಾಡಿ, ಹೆಲ್ಮೆಟ್ ಧರಿಸದವರನ್ನು ಹಿಡಿದು ದಂಡ ವಿಧಿಸುವುದು ಪೊಲೀಸರ ಉದ್ದೇಶವಲ್ಲ. ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ತಮ್ಮ ಅಮೂಲ್ಯ ಜೀವ ಕಾಪಾಡಲಿ ಎಂಬ ಸದುದ್ದೇಶ ಇಲಾಖೆಯದ್ದಾಗಿದೆ. ಭಾರತದಲ್ಲಿ ಪ್ರತಿ ವರ್ಷ ರೋಗ, ರುಜಿನಗಳಿಗೆ ಬಲಿಯಾಗುವವರಿಗಿಂತ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಯಾವುದೇ ಜನಹಿತಾಸಕ್ತಿಯ ಯೋಜನೆ ಸಾಕಾರವಾಗಲು ಜನರ ಸಹಭಾಗಿತ್ವ ಅತಿಮುಖ್ಯ. ಆದ್ದರಿಂದ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಕೈ ಜೋಡಿಸಬೇಕು. ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವವರನ್ನು ಎಚ್ಚರಿಸುವುದು ಯುವಕರ ಕರ್ತವ್ಯ. ಮುಖ್ಯವಾಗಿ ಯುವಕರು ಮೊದಲು ಹೆಲ್ಮೆಟ್ ಧರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಬೇಕು ಈ ದೆಸೆಯಲ್ಲಿ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ತಮ್ಮ ಪ್ರಾಣ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದರು.

ಕಾಲಕಾಲೇಶ್ವರ ವೃತ್ತದಲ್ಲಿ ಸಂಚರಿಸುವ ಪ್ರತಿಯೊಬ್ಬ ಬೈಕ್ ಸವಾರನಿಗೂ ಕರೆದು, ಕರಪತ್ರ ನೀಡಿ, ಹೆಲ್ಮೇಟ್‌ನ ಮಹತ್ವವನ್ನು ಪೊಲೀಸ್ ಸಿಬ್ಬಂದಿಗಳು ಸಾರಿದರು. ಎಎಸ್‌ಐ ಎಸ್.ಬಿ. ದಾಡಿಬಾವಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು.

Leave a Reply

Your email address will not be published. Required fields are marked *

You May Also Like

ಪೆಟ್ರೋಲ್ ಟ್ಯಾಕ್ಸ ಇಳಿಸಿದ ಸರ್ಕಾರ

ಪೆಟ್ರೋಲ್ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡು ಪ್ರತಿ ಲೀ. ದರ 100 ರು ಗಡಿ ದಾಟಿದ್ದು, ವಾಹನ ಸವಾರರ ಆಕ್ರೋಶಕ್ಕೆ ಮಣಿದ ರಾಜಸ್ಥಾನ ಸರ್ಕಾರವು ತೆರಿಗೆ ಇಳಿಕೆ ಮಾಡಿದೆ.

ಸೋಂಕಿತರ ಸಂಖ್ಯೆಯಲ್ಲಿ 4 ನೆ ಸ್ಥಾನದಲ್ಲಿ ಕರ್ನಾಟಕ : ರಿಕವರಿಗಿಂತ ಆಕ್ಟಿವ್ ಕೇಸ್ ಹೆಚ್ಚು

ಸೋಂಕಿತರ ಸಂಖ್ಯೆ (ಕೇಸ್ ಲೋಡ್) ಆಧಾರದ ಪಟ್ಟಿಯಲ್ಲಿ ಕರ್ನಾಟಕ ಈಗ ಗುಜರಾತ್ ದಾಟಿ 4ನೆ ಸ್ಥಾನಕ್ಕೆ…

ಇಂದು ಸಚಿವ ಸಂಪುಟ ಸಭೆಯಲ್ಲೆ ಚರ್ಚಿತ ವಿಷಯಗಳೇನು?

ರಾಜ್ಯದಲ್ಲಿ ಈಗಾಗಲೇ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸದನಕ್ಕೆ ಅಷ್ಟೇ ಅಲ್ಲ ರಾಜ್ಯಕ್ಕೆ ಮಾಡಿದ ಅವಮಾನವಿದು

ಸಿದ್ದರಾಮಯ್ಯ ಅವರೇ, ನಿಮ್ಮ ಈ ಸಾಧನೆಯನ್ನು ರಾಜ್ಯದ ಜನತೆ ಮರೆತಿಲ್ಲ. ಕಲಾಪ ಬಹಿಷ್ಕಾರ ನಿಮ್ಮ ದುರಹಂಕಾರ ಮತ್ತು ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ.