ನರೇಗಲ್: ಉಪಕಾರ ಸ್ಮರಣಯೇ ಜನ್ಮದಿನವಾಗಿರುತ್ತದೆ. ಅಭಿನವ ಡಾ.ಅನ್ನದಾನ ಮಹಾಸ್ವಾಮಿಗಳ ಮೇಲಿನ ಭಕ್ತರ ಪ್ರೀತಿಗೆ ಬೆಲೆಯನ್ನು ಕಟ್ಟುವುದು ಅಸಾಧ್ಯವಾದ ಮಾತಾಗಿದೆ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮಿಗಳು ಹೇಳಿದರು.

ಅವರು ಶನಿವಾರ ಹಾಲಕೆರೆ ಸಂಸ್ಥಾನಮಠದ ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳ 84ನೇ ಹುಟ್ಟು ಹಬ್ಬದ ಪ್ರಯುಕ್ತ ಅನ್ನದಾನೇಶ್ವರ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಆರ್ಶಿವಚನ ನೀಡಿದರು.

ನನಗೆ ಕಾವಿ ಬಟ್ಟೆ ಹಾಕಿಸಿದ ಹಾಲಕೆರೆ ಪರಮಪೂಜ್ಯರ ಬಗ್ಗೆ  ನನಗೆ ಅಪಾರ ಗೌರವವಿದೆ. ತಮ್ಮ ಅಪಾರ ಜ್ಞಾನದ ಮೂಲಕ ಈ ಭಾಗದ ಜನರಿಗೆ ಬೆಳಕನ್ನು ನೀಡುತ್ತಿದ್ದಾರೆ. ಜನತೆಯಲ್ಲಿ ಶಾಂತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ  ಮಠಾಧೀಶರನ್ನು ಪಡೆದ ನಾವೇ ಧನ್ಯರು ಎಂದು ಹೇಳಿದರು.

ಕೊರೊನಾದ ಸಂಕಷ್ಟದಲ್ಲಿ ಸಾಕಷ್ಟು ಜನರು ಜನರ ನೆಮ್ಮದಿಗಾಗಿ ಹೋರಾಡಿದರು. ಆರೋಗ್ಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಯೋಧರಂತೆ ಹೋರಾಡಿದ ಪ್ರತಿಯೊಬ್ಬರು ಜನರನ್ನು ಕಾಯುವ ಯೋಧರಿಗೆ ಸಮಾನರು ಎಂದು ಹೇಳಿದರು.

ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ವೈ.ಸಿ.ಪಾಟೀಲ ಮಾತನಾಡಿ, ಕೋವಿಡ್– 19 ಮಹಾಮಾರಿಯಿಂದ ಜಗತ್ತಿನಲ್ಲಿ ಸಾಕಷ್ಟು ಸಾವು ನೋವುಗಳು ಜರುಗಿವೆ. ಜಗತ್ತಿನ ಮುಂದುವರೆದ ರಾಷ್ಟ್ರಗಳು ಕೊರೊನಾ ವಿರುದ್ಧ ಹೋರಾಡಲು ಪರದಾಡಿದ ಸಂದರ್ಭದಲ್ಲಿ ಆರ್ಥಿಕವಾಗಿ ನಮ್ಮ ದೇಶ ಹಿಂದುಳಿದಿದ್ದರೂ ಸಹ ಕೊರೊನಾದ ವಿರುದ್ಧ ಜಯ ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ಇಂತಹ ಮಠ ಮಾನ್ಯರ ಆಶೀರ್ವಾದ, ಕೊರೊನಾ ವಾರಿಯರ್ಸಗಳ ಮಾರ್ಗದರ್ಶನ ನಮಗೆ ಸಹಕಾರಿಯಾಗಿದೆ. ಪ್ರತಿ ಕೊರೊನಾ ವಾರಿಯರ್ಸ್‌ಗೆ ಧನ್ಯವಾದ ಹೇಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಹಾಲಕೆರೆ ಮಠದ ನಿಯೋಜಿತ ಉತ್ತರಾಧಿಕಾರಿ ಮುಪ್ಪಿನ ಬಸವಲಿಂಗ ದೇವರು, ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಎಂ.ಜಿ.ಸೋಮನಕಟ್ಟಿ, ಆಡಳಿತಾಧಿಕಾರಿ ಎಸ್.ಜಿ.ಹಿರೇಮಠ, ಪದವಿ ಪ್ರಾಚಾರ್ಯ ಎಸ್.ಎಸ್.ಜಿ.ಕೇಶಣ್ಣವರ, ಸಿಬ್ಬಂದಿಗಳು ಹಾಗೂ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ: ಕಾಮಗಾರಿ ಮುಗಿದರೂ ಹಸ್ತಾಂತರವಾಗದ ಅಂಗನವಾಡಿ

ಬಡ ಮಕ್ಕಳ ಬದುಕಿನಲ್ಲಿ ಶಿಕ್ಷಣ ದಿವಿಗೆಯನ್ನು ಹಚ್ಚಬೇಕಾದ ಅಂಗನವಾಡಿ ಕೇಂದ್ರ ಇದ್ದು ಇಲ್ಲದಂತಾಗಿ ತಾಲೂಕಿನ ಆದರಹಳ್ಳಿ ಗ್ರಾಮದ 2ನೇ ವಾರ್ಡಿನ ಅಂಗನವಾಡಿ ಕೇಂದ್ರ ಇಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದೆ. ಹಲವು ವರ್ಷಗಳಿಂದ ಮಕ್ಕಳಿಗೆ ಶಿಕ್ಷಣ ಕೊಡುತ್ತಾ ಬಂದಿದ್ದಾರೆ. ಹೊಸ ಅಂಗನವಾಡಿ ಕೇಂದ್ರ ನಿರ್ಮಾಣವಾಗಿ ಸುಮಾರು ವರ್ಷಗಳು ಕಳೆದರೂ ಇದುವರೆಗೆ ಅಂಗನವಾಡಿ ಕೇಂದ್ರವನ್ನು ಗುತ್ತಿಗೆದಾರರು ಹಸ್ತಾಂತರ ಮಾಡಿಲ್ಲ ಹಾಗೂ ಗ್ರಾ.ಪಂ.ಚುನಾವಣೆ ನಡೆದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೂ ಆಗಿದೆ. ಆದರೆ ಅಂಗನವಾಡಿ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ ಎಂದು 2 ವಾರ್ಡಿನ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೋರ ಹಾಕುತ್ತಿದ್ದಾರೆ.

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೃಷ್ಣಾ ನದಿತೀರದ ಪ್ರವಾಹಪೀಡಿತ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ ಆಲಟ್೯ರಾಗಿರಲು ಸೂಚನೆ

ಉತ್ತರಪ್ರಭಆಲಮಟ್ಟ: ಕೃಷ್ಣಾ ನದಿ ತೀರದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಧಾರಾಕಾರ ಮಳೆ ಸುರಿಯುತ್ತಿದ್ದು ಆಲಮಟ್ಟಿ ಜಲಾಶಯಕ್ಕೆ…

ಬೀದಿಗೆ ಬಂದ ಕಾರ್ಮಿಕರು…!

ಲಾಕ್ ಡೌನ್ ನಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಸಕ್ಕರೆ ಕಾರ್ಖಾನೆಯೊಂದರ 350ಕ್ಕೂ ಹೆಚ್ಚು ಕಾರ್ಮಿಕರು ಸದ್ಯ ಇದರಿಂದಾಗಿ ಬೀದಿಗೆ ಬಂದಿದ್ದಾರೆ.