ಶಿರಹಟ್ಟಿ: ತಾಲೂಕಿನ ಮಾಗಡಿ ಗ್ರಾಪಂ ವ್ಯಾಪ್ತಿಯ ಪರಸಾಪೂರ (ವಾರ್ಡ ನಂ:6) ಗ್ರಾಮದಲ್ಲಿ ಶೇಂಗಾ ಬಣವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಮಾಜಿ ಗ್ರಾಪಂ ಸದಸ್ಯ ಬಸಪ್ಪ ಬೇರಗಣ್ಣವರ ಸದ್ಯ ನಡೆಯುತ್ತಿರುವ ಚುನಾವಣೆಗೆ ಅವರ ಮಗ‌ನನ್ನು ಕಣಕ್ಕೆ ಇಳಿಸಿದ್ದರು.

ಅವಘಡದಿಂದ ಅಂದಾಜು 1.50 ಲಕ್ಷ ರೂ ಬೆಲೆಬಾಳುವ ಶೇಂಗಾ ಹಾಗೂ ಹೊಟ್ಟು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆಗೆ ರಾಜಕೀಯ ವೈಷಮ್ಯವೇ ಕಾರಣವಿರಬಹುದು ಎನ್ನುವ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಆದರಹಳ್ಳಿಗೆ ಹಾದಿ ಯಾವುದು..? ದೇವಿಹಾಳಕ್ಕೆ ಹೋಗುವ ದಾರಿ ಎಲ್ಲಿ?

ರಸ್ತೆಗಳು ನಿರ್ಮಾಣ ಮಾಡಿದ ಮೇಲೆ ನಿರ್ಮಿಸಿದ ರಸ್ತೆಗಳ ಮೇಲೆ ಇಷ್ಟೆ ಸಾಮಾರ್ಥ್ಯದ ವಾಹನಗಳು ಓಡಾಡಬೇಕು ಎನ್ನುವ ನಿಯಮವಿದೆ. ಆದರೆ ಅದ್ಯಾವ ನಿಉಮವನ್ನು ಪಾಲಿಸದೇ ಇರುವ ಕಾರಣಕ್ಕೆ ರಸ್ತೆಯೊಂದು ಹಳ್ಳ ಹಿಡಿದಿದೆ.

ವೆಂಟಿಲೇಟರ್ ಸಮಸ್ಯೆಗೆ ಶಾಸಕ ಎಚ್.ಕೆ.ಪಾಟೀಲ್ ಸ್ಪಂದನೆ, ಕೊಲ್ಹಾಪುರದಿಂದ ಗದಗ ಜಿಲ್ಲೆಗೆ 25 ವೆಂಟಿಲೇಟರ್

ಗದಗ: ನಮ್ಮ ಜನ ನಮ್ಮ ಕಣ್ಣೆದುರಿಗೆಯೇ ವೆಂಟಿಲೇಟರ್ ಸಮಸ್ಯೆಯಿಂದ ಜೀವ ಕಳೆದುಕೊಳ್ಳವ ಸ್ಥಿತಿ ಬಂದಿರುವುದನ್ನು ಗಮನಿಸಿ ಸಾಲದ ಆಧಾರದ ಮೇಲೆ ಕೊಲ್ಹಾಪುರದ ಡಿ.ವೈ.ಪಾಟೀಲ್ ಟ್ರಸ್ಟ್ 25 ವೆಂಟಿಲೇಟರ್ ಕೊಡಮಾಡುತ್ತಿರುವುದು ಸಂತಸದ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.

ಗ್ರಾಪಂ ಚುನಾವಣೆ ನಾಳೆ ಚಿಹ್ನೆ ಹಂಚಿಕೆ : ಅಭ್ಯರ್ಥಿಗಳಿಗೆ ಚಿನ್ಹೆ ಹಂಚಿಕೆ ಕ್ರಮ ಹೇಗಿರುತ್ತೆ ಇಲ್ಲಿದೆ ಮಾಹಿತಿ

ಗ್ರಾಮ ಪಂಚಾಯತ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಉಮೇದುವಾರಿಕೆ ಹಿಂಪಡೆಯಲು ನೀಡಿದ ಸಮಯಾವಕಾಶ ಮುಗಿದ ನಂತರ ಸ್ಪರ್ಧೆ ಇರುವ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಗೆ ಅವರ ಸಮ್ಮುಖದಲ್ಲಿ ಚುನಾವನಾ ಆಯೋಗದ ನಿಯಮಾನುಸಾರ ಡಿ.14 ರಂದು ಚುನಾವಣಾಧಿಕಾರಿಗಳು ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ತಿಳಿಸಿದ್ದಾರೆ.

ಹುಲಕೋಟಿ ಬಳಿ ಕಾರು-ಲಾರಿ ಡಿಕ್ಕಿ

ಕಾರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೆ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಸಮೀಪದ ಹುಲಕೋಟಿ ಹೊರವಲಯದ ರೂರಲ್ ಇಂಜನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ.