ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ

ಎಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 867 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. ಎಲೆಸ್ಟ್‌ ಪ್ರೈ. ಲಿ. ಹುಬ್ಬಳ್ಳಿ-ಧಾರವಾಡದಲ್ಲಿ 6339 ಕೋಟಿ ರೂ. ಹೂಡಿಕೆಯೊಂದಿಗೆ ಎಲೆಕ್ಟ್ರಿಕ್‌ ವಾಹನ ತಯಾರಿಕೆಗೆ ಅಗತ್ಯ ಇರುವ ಲಿಥಿಯಂ ಅಯಾನ್‌ ಸೆಲ್‌ ಮತ್ತು ಬ್ಯಾಟರಿ ಉತ್ಪಾದನೆ ಘಟಕ ಸ್ಥಾಪಿಸಲಿದ್ದು, ಇದರಿಂದ 1804 ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಹ್ಯುನೆಟ್‌ ಪ್ರೈ. ಲಿ, ಚಿಕ್ಕಬಳ್ಳಾಪುರದಲ್ಲಿ ಎಲೆಕ್ಟ್ರಿಕ್‌ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಕ್ಕೆ 1825 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2210 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆ

ಮಿರಾಕ್ಯುಲಮ್‌ ಗ್ರೀನ್‌ ಪವರ್‌ ಪ್ರೈ.ಲಿ, ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 1290 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2820 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. ಸನಾಲಿ ಪವರ್‌ ಪ್ರೈ.ಲಿ. ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 2,950 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 5640 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಹೆಚ್‌.ಎಂ.ರೇವಣ್ಣಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಎಸ್.ಎಸ್.ಎಲ್ಸಿ ವಿದ್ಯಾರ್ಥಿಗೆ ಕೊರೊನಾ ಶಂಕೆ..!

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಾಳೆ‌ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಗಂಗಾಪುರ ಸಕ್ಕರೆ ಕಾರ್ಖಾನೆಯಲ್ಲಿ ಕೊಲೆ ಪ್ರಕರಣ: ಆರೋಪಿ ಬಂಧನ!

ಇತ್ತಿಚೆಗೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪುರದ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಸೆಕ್ಯೂರಿಟಿ ಗಾರ್ಡ್ ಕೊಲೆ ಪ್ರಕರಣವನ್ನು ಕೊನೆಗೂ ಮುಂಡರಗಿ ಪೊಲೀಸರು ಭೇದಿಸಿದ್ದಾರೆ.

ಕಸಾಪ ಜಿಲ್ಲಾಧ್ಯಕ್ಷ ಶರಣು ಹೇಳಿಕೆ: ಸಾಹಿತ್ಯ ಭವನಗಳ ಕಾಮಗಾರಿ ಪೂರ್ಣಗೊಳಿಸಿದ ಹೆಮ್ಮೆ ಇದೆ

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ

ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಶಾಸಕರು ಹೇಳಿದರೆ ಅಕ್ರಮ ಮರಳು ಗಣಿಗಾರಿಕೆಗೆ ಅನುಮತಿ ಕೊಡ್ತಾರಾ ಅಧಿಕಾರಿಗಳು?

ಮರಳು ನೀತಿ ಅನ್ವಯ ಮರಳು ಗಣಿಗಾರಿಕೆಗೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ನೀಡಲಾಗಿದೆ. ಆದರೆ ಮರಳು ಗುತ್ತಿಗೆ ಪಡೆದ ಗುತ್ತಿಗೆದಾರರು ಎಗ್ಗಿಲ್ಲದೇ ಸಕ್ರಮದ ಹೆಸರಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದಕ್ಕೆ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಅವರ ಪೋಷಣೆಯೂ ಇದೆ ಎನ್ನುವ ಮಾತುಗಳು ಕೇಳಲಾರಂಭಿಸಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೊಕ್ಕರಗುಂದಿ ಬೂದಿಹಾಳ ಗ್ರಾಮದಲ್ಲಿರುವ ಕಲ್ಪವೃಕ್ಷ ಮರಳು ಗುತ್ತಿಗೆ ಪಾಯಿಂಟ್ ಇದಕ್ಕೆ ತಾಜಾ ಉದಾಹರಣೆಯಾಗಿದೆ.