ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ

ಎಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 867 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. ಎಲೆಸ್ಟ್‌ ಪ್ರೈ. ಲಿ. ಹುಬ್ಬಳ್ಳಿ-ಧಾರವಾಡದಲ್ಲಿ 6339 ಕೋಟಿ ರೂ. ಹೂಡಿಕೆಯೊಂದಿಗೆ ಎಲೆಕ್ಟ್ರಿಕ್‌ ವಾಹನ ತಯಾರಿಕೆಗೆ ಅಗತ್ಯ ಇರುವ ಲಿಥಿಯಂ ಅಯಾನ್‌ ಸೆಲ್‌ ಮತ್ತು ಬ್ಯಾಟರಿ ಉತ್ಪಾದನೆ ಘಟಕ ಸ್ಥಾಪಿಸಲಿದ್ದು, ಇದರಿಂದ 1804 ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಹ್ಯುನೆಟ್‌ ಪ್ರೈ. ಲಿ, ಚಿಕ್ಕಬಳ್ಳಾಪುರದಲ್ಲಿ ಎಲೆಕ್ಟ್ರಿಕ್‌ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಕ್ಕೆ 1825 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2210 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆ

ಮಿರಾಕ್ಯುಲಮ್‌ ಗ್ರೀನ್‌ ಪವರ್‌ ಪ್ರೈ.ಲಿ, ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 1290 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2820 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. ಸನಾಲಿ ಪವರ್‌ ಪ್ರೈ.ಲಿ. ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 2,950 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 5640 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಹೆಚ್‌.ಎಂ.ರೇವಣ್ಣಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಅಕ್ರಮ ಅಕ್ಕಿ ಸಂಗ್ರಹ ಮನೆಯ ಮೇಲೆ ದಾಳಿ : ಗದಗ ಜಿಲ್ಲೆಯಲ್ಲಿ ಅಕ್ರಮ ಅಕ್ಕಿ ದಂಧೆಗೆ ಕಡಿವಾಣ ಯಾವಾಗ?

ಅಕ್ರಮ ಅಕ್ಕಿ ದಾಸ್ತಾನು ಮಾಡಿದ ಮನೆಯ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಗರದ ಟ್ಯಾಗೋರ್ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ 50 ಕೆಜಿಯ ಅಂದಾಜು ನೂರು ಪ್ಯಾಕೇಟ್ ಅನ್ನ ಭಾಗ್ಯ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

ಗ್ರಾಪಂ ಚುನಾವಣೆ: ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ಗ್ರಾಪಂ ಚುನಾವಣೆ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಗಳಿಗೆ ಸ್ಥಳೀಯ ಎಫ್ ಎಂ.ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.

ಕೊವಿಡ್-19 ಸೋಂಕು: ಉಸಿರಾಟದ ಸಮಸ್ಯೆ ಸ್ಥಳದಲ್ಲೇ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ಗದಗ : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲ 9…

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.