ಬೆಂಗಳೂರು: ಕೋವಿಡ್‌ ರೂಪಾಂತರಿ ಸೋಂಕಿಗೆ ಇದು ಶೇ.70 ರಷ್ಟು ಹರಡುವ ಗುಣವಿದೆ. ಆದರೆ ಈ ಸೋಂಕಿನ ತೀವ್ರತೆ ಕಡಿಮೆ ಇದೆ. ಹೀಗಿದ್ದರೂ ಇದನ್ನು ನಿಯಂತ್ರಣಕ್ಕೆ ತರಲು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುದಾಕರ್‌ ತಿಳಿಸಿದರು.

ಅವರು ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿ, ದೇಶದಲ್ಲಿ ಯುಕೆಯಿಂದ ಹಿಂತಿರುಗಿದ ಪ್ರಯಾಣಿಕರ ಪೈಕಿ ಒಟ್ಟು 107 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಈ ಪೈಕಿ 20 ಜನರಲ್ಲಿ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ. ದೆಹಲಿಯಲ್ಲಿ 8 ಹಾಗೂ ಕರ್ನಾಟಕದಲ್ಲಿ ಏಳು ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ಏಳು ಮಂದಿಯ ಪೈಕಿ ಮೂವರು ಬಿಬಿಎಂಪಿ ವ್ಯಾಪ್ತಿ ನಿವಾಸಿಗಳು ಹಾಗೂ ನಾಲ್ವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಏಳು ಜನರಲ್ಲಿ ಕೋವಿಡ್‌ ರೂಪಾಂತರಿ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬ್ರಿಟನ್‌ ನಲ್ಲಿ ಕಾಣಿಸಿಕೊಂಡಿರುವ ಕೋವಿಡ್‌ ರೂಪಾಂತರಿ ಸೋಂಕು ಪ್ರಕರಣಗಳ ಸಂಖ್ಯೆ ದೇಶದಲ್ಲಿ ಒಟ್ಟು ಶೇ.20 ರಷ್ಟಿವೆ. ಇದರಲ್ಲಿ 7 ಪ್ರಕರಣಗಳು ರಾಜ್ಯದಲ್ಲಿ ದೃಢಪಟ್ಟಿವೆ. ಇನ್ನು ಇವರ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.  

ಬೆಂಗಳೂರಿನಲ್ಲಿ 39 ಜನರನ್ನು ತಪಾಸಣೆ ಮಾಡಲಾಗಿದೆ. ಆದರೆ ಅವರಲ್ಲಿ ಸೋಂಕು ಪತ್ತೆಯಾಗಿಲ್ಲ. ಶಿವಮೊಗ್ಗ ಕೋವಿಡ್‌ ರೂಪಾಂತರಿ ಸೋಂಕು ತಗುಲಿದವರ ಜೊತೆಗೆ ಸಂಪರ್ಕದಲ್ಲಿದ್ದ ಒಟ್ಟು 7 ಜನರ ಪೈಕಿ ಮತ್ತೆ ಮೂವರಿಗೆ ಕೋವಿಡ್‌ ಪಾಸಿಟಿವ್ ಇದೆ. ಆದರೆ ಈ ಮೂವರಿಗೆ ಕೋವಿಡ್‌ ರೂಪಾಂತರಿ ಸೋಂಕು ಇದೆಯಾ? ಎಂದು ತಪಾಸಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದರು.

ಇನ್ನು ಕೋವಿಡ್‌ ರೂಪಾಂತರಿ ಸೋಂಕಿಗೆ ತುತ್ತಾಗಿರುವವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿ ಇದ್ದವರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗುತ್ತಿದೆ. ಈ ವಿಚಾರವಾಗಿ ಈ ವೈರಾಣುಗೆ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಎಲ್ಲರು ಪಾಲನೆ ಮಾಡಬೇಕು ಎಂದು ಸುಧಾಕರ್‌ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಖರ್ಗೆ ಫಿಕ್ಸ್..!

ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ.

1xbet Bankrot Elan Edildi: Məhkəmə Qərarı Şirkət Uduşları Ödəmir Yeni Çağ Media

1xbеt Аzеrbаyсаn Bukmеykеr Kоntоrunun Iсmаlı 1xbеt Idmаn Mərсləri Content “1xbet” Bankrot Elan…

ಉತ್ತರದಲ್ಲಿ ಇನ್ನೂ ನಿಂತಿಲ್ಲ ಪ್ರವಾಹ ಭೀತಿ!

ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದ್ದರೂ ಪ್ರವಾಹ ಭೀತಿ ಇನ್ನೂ ಕಡಿಮೆಯಾಗಿಲ್ಲ.

ವಿರೋಧದ ನಡುವೆಯೇ ಕೃಷಿ ಉತ್ಪನ್ನ ಮಾರುಕಟ್ಟೆ ವಿಧೇಯಕ ಅಂಗೀಕಾರ!

ಬೆಂಗಳೂರು : ವಿಪಕ್ಷಗಳ ವಿರೋಧದ ನಡುವೆಯೂ ವಿವಾದಿತ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ…