ಬೆಂಗಳೂರು: ನಮ್ಮಲ್ಲಿ ಸಂಶೋಧನೆಗಳು ಕಡಿಮೆಯಾಗಿವೆ. ಎಲ್ಲವನ್ನೂ ಬೇರೆ ದೇಶಗಳಿಂದ ತರಿಸಿಕೊಳ್ಳುವಂತಾಗಿದೆ. ಕೊರೊನಾ ನಿಯಂತ್ರಣಕ್ಕೆ ತರಲು ಆರ್ಸೆನಿಕ್ ಆಲ್ಬಂ ಎಂಬ ಹೋಮಿಯೋಪತಿ ಔಷಧಿ ಬಳಕೆಯಲ್ಲಿದೆ. ಆದರೆ ಕೊರೊನಾ ನಿವಾರಣೆಗೆ ಬೇರೆ ಸಂಸ್ಥೆಗಳು ಔಷಧಿ ತಯಾರಿಸುತ್ತಿರುವಂತೆ ಹೋಮಿಯೋಪತಿಯಲ್ಲೂ ಔಷಧಿ ಕಂಡು ಹಿಡಿಯಬೇಕು ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಹೋಮಿಯೋಪತಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೊರೊನಾ ನಿವಾರಣೆಗೆ ಹೋಮಿಯೋಪತಿ ಪದ್ಧತಿಯಲ್ಲೂ ಔಷಧಿ ಆವಿಷ್ಕಾರ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.

ಹೋಮಿಯೋಪತಿ ಪದ್ಧತಿ ಮುಳ್ಳನ್ನು ಮುಳ್ಳಿಂದಲೇ ತೆಗೆಯಬೇಕು ಎಂಬ ತತ್ವವನ್ನು ಆಧರಿಸಿದೆ. ಟೈಫಾಯಿಡ್ ಬಂದಾಗಲೂ ಹೋಮಿಯೋಪತಿ ಬಳಕೆಯಾಗಿತ್ತು. ಇಂತಹ ಪದ್ಧತಿಗೆ ಉತ್ತೇಜನ ನೀಡಬೇಕು. ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ ಗೆ ವಿಶೇಷ ಒತ್ತು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಬ್ಬ ಆಯುಷ್ ವೈದ್ಯರನ್ನು ನಿಯೋಜಿಸಲು ತೀರ್ಮಾನಿಸಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

7 ದಿನಗಳಿಂದ ಗ್ರಾ.ಪಂ ನೌಕರರ ಕಾರ್ಯ ಸ್ಥಗಿತ ; ಸಾರ್ವಜನಿಕರಿಗೆ ಪರದಾಟ ; ಧರಣಿ ‘ಕೈ’ ಬಿಡದ ಗ್ರಾ.ಪಂ ಒಕ್ಕೂಟ..!

ಉತ್ತರಪ್ರಭ ಗದಗ :ಕಳೆದ 7 ದಿನಗಳಿಂದ ರಾಜ್ಯಾದ್ಯಂತ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತನ…

ತೋಳದ ದಾಳಿಗೆ 15 ಕುರಿಗಳು ಬಲಿ

ಶಿರಹಟ್ಟಿ: ತಾಲೂಕಿನ ಮಾಚೇನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಕುರಿ ಹಿಂಡಿಗೆ ಶನಿವಾರ ರಾತ್ರಿ ತೋಳವೊಂದು ದಾಳಿ ಮಾಡಿದ…

ಮತಾಂತರ ನಿಷೇಧ ಕಾಯ್ದೆ ವಿಧೆಯಕ ಮಂಡನೆ

ಬೆಳಗಾವಿ: ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ…

ಪ್ರಾಥಮಿಕ ಶಾಲೆ ಶಿಕ್ಷಕರು ಪ್ರೌಢಶಾಲೆ ಸಹ ಶಿಕ್ಷಕ ಹುದ್ದೆಗೆ ಅರ್ಹರಲ್ವಂತೆ..!

ಬೆಂಗಳೂರು: 1 -5 ನೇ ತರಗತಿಗೆ ಪಾಠ ಮಾಡುವ ಪ್ರಾಥಮಿಕ ಶಾಲೆ ಶಿಕ್ಷಕರು, ಪ್ರೌಢಶಾಲೆ ಸಹ ಶಿಕ್ಷಕ ಗ್ರೇಡ್- 2 ಹುದ್ದೆಗಳಿಗೆ ಬಡ್ತಿ ಪಡೆಯಲು ಅರ್ಹರಲ್ಲ ಎಂದು ಆದೇಶಿಸಲಾಗಿದೆ. ಪ್ರಾಥಮಿಕ ಶಾಲೆ ಶಿಕ್ಷಕರುಗಳಿಗೆ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೀಡಿದ್ದಲ್ಲಿ ಅದನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ ಆದೇಶಿಸಿದೆ.