ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ನಡೆದಿದೆ. ಪ್ರಕಾಶ ಬನ್ನಿಮಟ್ಟಿ (40) ಮತ್ತು ಸಿದ್ದನಗೌಡ ಬಿಷ್ಟನಗೌಡರ (45) ಮೃತರು. ಮೃತರು ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿಗಳು. ಗ್ರಾಮ ಪಂಚಾಯತಿ ಮತ ಎಣಿಕೆ ಹಿನ್ನೆಲೆಯಲ್ಲಿ ಹಾವೇರಿಗೆ ಬರುತ್ತಿದ್ದ ಇಬ್ಬರು. ಇದರಲ್ಲಿ ಪ್ರಕಾಶ್, ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದರು. ನಿಯಂತ್ರಣ ತಪ್ಪಿ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಕಾರ್ ಉರುಳಿ ಬಿದ್ದಿದ್ದರಿಂದ ದುರ್ಘಟನೆ ಸಂಭವಿಸಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
You May Also Like
ಮಾಧ್ಯಮ ಪ್ರತಿನಿಧಿ ಮೇಲೆ ತಹಶೀಲ್ದಾರ ದರ್ಪ ಖಂಡಿಸಿ ರೋಣದಲ್ಲಿ ಮನವಿ
ಗಜೇಂದ್ರಗಡ ತಹಶೀಲ್ದಾರ್ ತೋರಿದ ಪತ್ರಿಕಾ ಪ್ರತಿನಿಧಿ ಮೇಲೆ ತೋರಿದ ದರ್ಪ ಖಂಡಿಸಿ ರೋಣ ತಾಲೂಕ ಕಾರ್ಯ ನಿರತ ಪತ್ರಕರ್ತ ಸಂಘದಿಂದ ಮನವಿ ಸಲ್ಲಿಸಲಾಯಿತು.
- ಉತ್ತರಪ್ರಭ
- January 29, 2021
ಗಡಿಬಿಡಿಯ ಲಾಕ್ ಡೌನ್ ಜಾರಿ: ಗಲಿಬಿಲಿಯಲ್ಲಿ ಉತ್ಪಾದನಾ ಫ್ಯಾಕ್ಟರಿ
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಹಲವು ಜಿಲ್ಲೆ ಮತ್ತು ನಗರಗಳಲ್ಲಿ ದಿಢೀರ್ ಲಾಕ್ ಡೌನ್ ಹೇರಿದ್ದರಿಂದ ಕೈಗಾರಿಕಾ ಉತ್ಪಾದನಾ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬಿದ್ದಿದೆ.
- ಉತ್ತರಪ್ರಭ
- July 18, 2020
ಮುಶಿಗೇರಿ: ನಾಗನಗೌಡ ಗೌಡರ ರಾಜ್ಯಕ್ಕೆ 2ನೇ ರ್ಯಾಂ ಕ್ ಪಡೆದು ಸೈಂಟಿಫಿಕ್ ಆಪೀಸರ್ ಹುದ್ದೆಗೆ ಆಯ್ಕೆ
ಗದಗ: ಪೊಲೀಸ್ ಇಲಾಖೆ ವತಿಯಿಂದ ಕಳೆದ ವರ್ಷ 28.05.2021 ರಂದು ವಿಧಿವಿಜ್ಞಾನ ಪ್ರಯೋಗಾಲಯ ವಿಭಾಗದಲ್ಲಿ 84…
- ಉತ್ತರಪ್ರಭ
- January 21, 2022
ಹಳ್ಳಿ ಹಕ್ಕಿಯನ್ನು ತಬ್ಬಲಿ ಮಾಡಿತೆ ಬಿಜೆಪಿ..?
ಬೆಂಗಳೂರು: ಮೇಲ್ಮನೆಗೆ ನಡೆಯುವ ಚುನಾವಣೆಗೆ ಬಿಜೆಪಿ ತಡರಾತ್ರಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇಂದು ನಾಲ್ವರು…
- ಉತ್ತರಪ್ರಭ
- June 18, 2020