ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ನಡೆದಿದೆ. ಪ್ರಕಾಶ ಬನ್ನಿಮಟ್ಟಿ (40) ಮತ್ತು ಸಿದ್ದನಗೌಡ ಬಿಷ್ಟನಗೌಡರ (45) ಮೃತರು. ಮೃತರು ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿಗಳು. ಗ್ರಾಮ ಪಂಚಾಯತಿ ಮತ ಎಣಿಕೆ ಹಿನ್ನೆಲೆಯಲ್ಲಿ ಹಾವೇರಿಗೆ ಬರುತ್ತಿದ್ದ ಇಬ್ಬರು. ಇದರಲ್ಲಿ ಪ್ರಕಾಶ್, ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದರು. ನಿಯಂತ್ರಣ ತಪ್ಪಿ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಕಾರ್ ಉರುಳಿ ಬಿದ್ದಿದ್ದರಿಂದ ದುರ್ಘಟನೆ ಸಂಭವಿಸಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಗೂಗಲ್ ನಿಂದ ನೀವು ಹಣ ಸಂಪಾದನೆ ಮಾಡಬಹುದು

ಗೂಗಲ್​ ಕಂಪನಿ ಟಾಸ್ಕ್​ ಮೇಟ್​ ಎಂಬ ಅಪ್ಲಿಕೇಶನ್​ ಒಂದರ ಟೆಸ್ಟಿಂಗ್​ ನಡೆಸುತ್ತಿದೆ. ಇದರ ಸಹಾಯದಿಂದ ಬಳಕೆದಾರರು ಹಣ ಸಂಪಾದನೆ ಮಾಡಬಹುದಾಗಿದೆ.

ಸಾರಿಗೆ ನೌಕರರಲ್ಲಿ ಸಿಎಂ ಮಾಡಿದ ಮನವಿ ಏನು ಗೊತ್ತಾ?

ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಕೂಡಲೇ ಮುಷ್ಕರ ಕೈಬಿಟ್ಟು ಸಾರಿಗೆ ಸಚಿವರ ಜೊತೆ ಚರ್ಚೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾರಿಗೆ ನೌಕರರಿಗೆ ಮನವಿ ಮಾಡಿದ್ದಾರೆ.

ಭಾರತ ಮನು ಕುಲದ ಒಳಿತಿಗಾಗಿ ಶ್ರಮಿಸುತ್ತಿದೆ – ಮೋದಿ

ಇಂದು ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.

ಕೊರೊನಾದಿಂದಾಗಿ ಸಪ್ತಪದಿ ಸಮಯ ಬದಲಿಸಿದ ಸರ್ಕಾರ!

ಬೆಂಗಳೂರು : ಕೊರೊನಾದ ಹಾವಳಿಯ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ಸಪ್ತಪದಿ ಯೋಜನೆಗೆ ಮುಂದೂಡಿದೆ.