ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ನಡೆದಿದೆ. ಪ್ರಕಾಶ ಬನ್ನಿಮಟ್ಟಿ (40) ಮತ್ತು ಸಿದ್ದನಗೌಡ ಬಿಷ್ಟನಗೌಡರ (45) ಮೃತರು. ಮೃತರು ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿಗಳು. ಗ್ರಾಮ ಪಂಚಾಯತಿ ಮತ ಎಣಿಕೆ ಹಿನ್ನೆಲೆಯಲ್ಲಿ ಹಾವೇರಿಗೆ ಬರುತ್ತಿದ್ದ ಇಬ್ಬರು. ಇದರಲ್ಲಿ ಪ್ರಕಾಶ್, ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದರು. ನಿಯಂತ್ರಣ ತಪ್ಪಿ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಕಾರ್ ಉರುಳಿ ಬಿದ್ದಿದ್ದರಿಂದ ದುರ್ಘಟನೆ ಸಂಭವಿಸಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
You May Also Like
ಅಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಫಲಿತಾಂಶ
ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.
- ಉತ್ತರಪ್ರಭ
- July 20, 2020
ಶಿಕ್ಷಣ ಸಚಿವರ ಫೇಸ್ ಬುಕ್ ಲೈವ್: ಎಸ್.ಎಸ್.ಎಲ್.ಸಿ ಪರೀಕ್ಷೆ ಗೊಂದಲ ನಿವಾರಣೆ
ಲಾಕ್ ಡೌನ್ ಹಿನ್ನೆಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಹತ್ತು ಹಲವು ಚರ್ಚೆಗಳು ನಡೆದಿದ್ದವು. ಇದಕ್ಕೆ ಸ್ವತ: ಶಿಕ್ಷಣ ಸಚಿವರೇ ಫೇಸ್ ಬುಕ್ ಲೈವ್ ಬರುವ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ.
- ಉತ್ತರಪ್ರಭ
- May 5, 2020