ದೆಹಲಿ: ಮತ್ತೆ ಬ್ರಿಟನ್‌ ವಿಮಾನಗಳಿಗೆ ಜನವರಿ 7ರ ವರೆಗೆ ಭಾರತ ನಿರ್ಬಂಧ ಹೇರಿದೆ. ಬ್ರಿಟನ್‌ ನಲ್ಲಿ ಹೊಸ ರೂಪಾಂತರಿ ವೈರಸ್‌ ಪತ್ತೆ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈಗಾಗಲೇ ಭಾರತದಲ್ಲೂ 20 ಜನರಲ್ಲಿ ಹೊಸ ರೂಪಾಂತರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಆತಂಕಗೊಂಡಿದ್ದು, ಬ್ರಿಟನ್‌ ವಿಮಾನಗಳಿಗೆ ಬ್ರೇಕ್‌ ಹಾಕಿದೆ. ಭಾರತ ಒಂದೇ ಅಲ್ಲದೇ, ಎಲ್ಲಾ ದೇಶಗಳು ಬ್ರಿಟನ್‌ ವಿಮಾನಗಳಿಗೆ ತಡೆ ಒಡ್ಡಿದೆ. ಈ ಹಿಂದೆ ಡಿ.23ರಿಂದ ಡಿ.31ರ ವರೆಗೂ ವಿಮಾನ ಸಂಚಾರವನ್ನು ತಡೆ ಹಿಡಿಯಲಾಗಿತ್ತು. ಇದೀಗ ಮತ್ತೆ 7 ದಿನಗಳ ಕಾಲ ನಿರ್ಬಂಧಿಸಲಾಗಿದೆ.

ಭಾರತದಲ್ಲಿ ಬ್ರಿಟನ್‌ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ 6 ಮಂದಿಯಲ್ಲಿ ಕಾಣಿಸಿಕೊಂಡಿದ್ದ ಸೋಂಕು, ಇಂದು ಹೊಸದಾಗಿ 14 ಮಂದಿಯಲ್ಲಿ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆ ಕಂಡಿದೆ. ಇವರೆಲ್ಲರನ್ನೂ  ಆಯಾ ರಾಜ್ಯದಲ್ಲಿ ಐಸೋಲೇಷನ್ ನಲ್ಲಿ ಇಡಲಾಗಿದೆ. ಇನ್ನು ಬ್ರಿಟನ್‌ ನಿಂದ ಬಂದವರು ಮತ್ತು ಅವರ ಸಂಪರ್ಕದಲ್ಲಿರುವವರನ್ನು ಕೇಂದ್ರ ಸರ್ಕಾರ ಪತ್ತೆ ಹಚ್ಚಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ವರ್ಷದ ಹಿಂದೆ ಮದುವೆಯಾಗಿದ್ದ ಯೋಧ ಹುತಾತ್ಮ – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ನವದೆಹಲಿ : ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಯೋಧ ಉಗ್ರರನ್ನು ಸೆದೆಬಡಯುವ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬುಧವಾರ ಭಾರತಕ್ಕೆ ಬರಲಿವೆ ರಫೇಲ್ ಯುದ್ಧ ವಿಮಾನ: ಸದ್ಯ ಫ್ರಾನ್ಸ್ ಬಿಟ್ಟಿವೆ ಫೈಟರ್ ಜೆಟ್ಸ್

ಸೋಮವಾರ ಫ್ರಾನ್ಸ್ ನಿಂದ ಹೊರಟಿರುವ ಮೊದಲ ಬ್ಯಾಚಿನ ರಫೇಲ್ ಯುದ್ಧ ಫ್ರಾನ್ಸ್ ಬಿಟ್ಟಿರುವ 5 ರಫೇಲ್ ಯುದ್ಧ ವಿಮಾನಗಳು 7 ಸಾವಿರ ಕಿಮೀ ದೂರ ಕ್ರಮಿಸಿ ಬುಧವಾರ ಭಾರತವನ್ನು ತಲುಪಲಿವೆ. ಯುಎಇನಲ್ಲಿರುವ ಫ್ರಾನ್ಸ್ ಏರ್ ಬೇಸ್ ನಲ್ಲಿ ಇಳಿದು ನಂತರ ಭಾರತ ತಲುಪಲಿವೆ. ಎವಿಯೇಷನ್ ಕಂಪನಿ ಡಸಾಲ್ಟ್ ನಿರ್ಮಿಸಿರುವ ಈ ಅತ್ಯಾಧುನಿಕ ಫೈಟರ್ ಜೆಟ್ಸ್ ದಕ್ಷಿಣ ಫ್ರಾನ್ಸಿನ ಬ್ರೊಡಾಕ್ಸ್ ನಗರದಿಂದ ಪ್ರಯಾಣ ಬೆಳೆಸಿವೆ. 2016ರಲ್ಲಿ ಭಾರತವು ಫ್ರಾನ್ಸ್ ಕಂಪನಿ ಡಸಾಲ್ಟ್ ಕಂಪನಿಯಿಂದ ಇಂತಹ 36 ವಿಮಾನಗಳನ್ನು ಖರೀದಿಸಲು 59 ಸಾವಿರ ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿತ್ತು. ಅದರ ಮೊದಲ ಭಾಗವಾಗಿ ಈಗ 5 ವಿಮಾನಗಳು ದೇಶದ ಸೇನೆಯ ಭಾಗವಾಗಲಿವೆ.

ಭಾರತ ಸೈನಿಕರ ಮೇಲೆ ನಿಗಾ: ಪಾಕ್ ಕುತಂತ್ರ ಬುದ್ದಿ

ಭಾರತದ ಸೈನಿಕರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಪಾಕ್ ಕುತಂತ್ರ ಬುದ್ಧಿ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.

ನಟ ಸಲ್ಮಾನ್ ಖಾನ್ ಈ ರೀತಿ ಮಾಡಿದ್ದು ಸತ್ಯವೇ? ಸರಿಯೇ?

ಮುಂಬಯಿ : ಕೊರೊನಾದ ಅಬ್ಬರದ ನಡುವೆ ಬಾಲಿವುಡ್ ನ ಒಂದೊಂದೆ ಮುಖಗಳು ಅನಾವರಣಕ್ಕೆ ಬರುತ್ತಿವೆ. ಯುವ ನಟ ಸುಶಾಂತ್‌ ಸಿಂಗ್‌ ರಜಪೂತ್‌ ನಿಧನದ ನಂತರ ಅನೇಕ ಸತ್ಯಗಳು ಹೊರ ಬರುತ್ತಿವೆ. ಪಕ್ಷಪಾತ, ಗುಂಪುಗಾರಿಕೆ, ಕೀಳು ರಾಜಕೀಯದ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.