ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೋಗಿಹಾಳ ಗ್ರಾಮದಲ್ಲಿ ನಡೆಯುತ್ತಿರುವ ವನಶ್ರೀ ಸ್ಟೋನ್ ಕ್ರಷರ್‌ನಿಂದ ಸುತ್ತಮುತ್ತಲಿನ ರೈತರಿಗೆ ತೊಂದರೆ ಆಗುತ್ತಿದೆ ಎಂದು ರೈತರು ಆರೋಪಿಸಿದರು.

ಈ ಕುರಿತು ತಹಶೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದ ಲಕ್ಷ್ಮಣ ಲಮಾಣಿ, ಶಿವಪ್ಪ ಲಮಾಣಿ, ಬಸವರಾಜ ವಡ್ಡರ, ಆರ್.ಟಿ. ಲಮಾಣಿ, ಉಮಲೆಪ್ಪ ಲಮಾಣಿ, ಯಲ್ಲಪ್ಪ ಸಂಕದಾಳ, ಖೇಮಪ್ಪ ಲಮಾಣಿ, ಕ್ರಷರ್‌ನಿಂದ ಹೊರಡುವ ಧೂಳು ಮತ್ತು ರಾಸಾಯನಿಕ ಪದಾರ್ಥಗಳಿಂದ ನಮ್ಮ ಆರೋಗ್ಯ ಹದಗೆಡುತ್ತಿದೆ ಎಂದು ತಿಳಿಸಿದ್ದಾರೆ.

ರೈತರು ಕೊಳವೆ ಬಾವಿಗಳು ಬಂದ್ ಆಗಿವೆ. ಕಲ್ಲಿನ ಗುಡ್ಡಗಳನ್ನು ಸಿಡಿಸಿದಾಗ ಅಪಾರ ಪ್ರಮಾಣದ ರಾಸಾಯನಿಕಯುಕ್ತ ಹೊಗೆ ಬರುತ್ತದೆ. ಸಹಿಸಲಸಾಧ್ಯ ಶಬ್ದ ಬರುತ್ತದೆ. ಇದು ನಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಸುತ್ತಮುತ್ತಲಿನ ಹೊಲಗಳಲ್ಲಿ ಕಲ್ಲಿನ ತುಂಡುಗಳು ಸಿಡಿದು ಬೀಳುತ್ತವೆ ಎಂದು ಮನವಿಯಲ್ಲಿ ದೂರಿದ್ದಾರೆ.

ಸಮಸ್ಯೆ ಹೇಳಿಕೊಳ್ಳಲು ಅಧಿಕಾರಿಗಳ ಬಳಿ ಹೋದರೆ
ನಮ್ಮನ್ನೇ ಬೈದು ಕಳುಹಿಸುತ್ತಿದ್ದಾರೆ. ಒಂದು ವಾರದೊಳಗೆ ಪರಿಹಾರ ದೊರಕಿಸುವುದರೊಂದಿಗೆ ಹಾಳಾದ ಕೊಳವೆ ಬಾವಿಗಳಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು. ಇಲ್ಲದಿದ್ದರೆ ಸ್ಥಳದಲ್ಲೇ ಉಪವಾಸ ಸತ್ಯಾಗ್ರಹ ಕೈಗೊಂಡು ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸುತ್ತೇವೆ ಎಂದು ರೈತರು ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸೂರಣಗಿಯ ಬಾಲಕರಿಬ್ಬರು ತುಂಗಭದ್ರಾ ನದಿಯಲ್ಲಿ ಮುಳಗಿ ಸಾವು

ಶಿರಹಟ್ಟಿ : ಸಂಕ್ರಾಂತಿ ಹಬ್ಬ ದಂದು ಸೂರಣಗಿ ಗ್ರಾಮದ ಬಾಲಕರ ಪಾಲಿಗೆ ಕರಾಳ ಅಷ್ಟೇ ಅಲ್ಲದೇ…

ಮುಳಗುಂದ : ಮರುಜೀವ ಪಡೆದ ಪಟ್ಟಣಶೆಟ್ಟಿ ಕೆರೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊಂಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಧರ್ಮಸ್ಥಳ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕಕ್ಕೆ ಪ್ರತಿಯೊಂದು ರಂಗದಲ್ಲಿಯೂ ಅನ್ಯಾಯವಾಗುತ್ತಿದೆ – ಹೊರಟ್ಟಿ!

ಬೆಂಗಳೂರು : ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.