ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೋಗಿಹಾಳ ಗ್ರಾಮದಲ್ಲಿ ನಡೆಯುತ್ತಿರುವ ವನಶ್ರೀ ಸ್ಟೋನ್ ಕ್ರಷರ್‌ನಿಂದ ಸುತ್ತಮುತ್ತಲಿನ ರೈತರಿಗೆ ತೊಂದರೆ ಆಗುತ್ತಿದೆ ಎಂದು ರೈತರು ಆರೋಪಿಸಿದರು.

ಈ ಕುರಿತು ತಹಶೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದ ಲಕ್ಷ್ಮಣ ಲಮಾಣಿ, ಶಿವಪ್ಪ ಲಮಾಣಿ, ಬಸವರಾಜ ವಡ್ಡರ, ಆರ್.ಟಿ. ಲಮಾಣಿ, ಉಮಲೆಪ್ಪ ಲಮಾಣಿ, ಯಲ್ಲಪ್ಪ ಸಂಕದಾಳ, ಖೇಮಪ್ಪ ಲಮಾಣಿ, ಕ್ರಷರ್‌ನಿಂದ ಹೊರಡುವ ಧೂಳು ಮತ್ತು ರಾಸಾಯನಿಕ ಪದಾರ್ಥಗಳಿಂದ ನಮ್ಮ ಆರೋಗ್ಯ ಹದಗೆಡುತ್ತಿದೆ ಎಂದು ತಿಳಿಸಿದ್ದಾರೆ.

ರೈತರು ಕೊಳವೆ ಬಾವಿಗಳು ಬಂದ್ ಆಗಿವೆ. ಕಲ್ಲಿನ ಗುಡ್ಡಗಳನ್ನು ಸಿಡಿಸಿದಾಗ ಅಪಾರ ಪ್ರಮಾಣದ ರಾಸಾಯನಿಕಯುಕ್ತ ಹೊಗೆ ಬರುತ್ತದೆ. ಸಹಿಸಲಸಾಧ್ಯ ಶಬ್ದ ಬರುತ್ತದೆ. ಇದು ನಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಸುತ್ತಮುತ್ತಲಿನ ಹೊಲಗಳಲ್ಲಿ ಕಲ್ಲಿನ ತುಂಡುಗಳು ಸಿಡಿದು ಬೀಳುತ್ತವೆ ಎಂದು ಮನವಿಯಲ್ಲಿ ದೂರಿದ್ದಾರೆ.

ಸಮಸ್ಯೆ ಹೇಳಿಕೊಳ್ಳಲು ಅಧಿಕಾರಿಗಳ ಬಳಿ ಹೋದರೆ
ನಮ್ಮನ್ನೇ ಬೈದು ಕಳುಹಿಸುತ್ತಿದ್ದಾರೆ. ಒಂದು ವಾರದೊಳಗೆ ಪರಿಹಾರ ದೊರಕಿಸುವುದರೊಂದಿಗೆ ಹಾಳಾದ ಕೊಳವೆ ಬಾವಿಗಳಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು. ಇಲ್ಲದಿದ್ದರೆ ಸ್ಥಳದಲ್ಲೇ ಉಪವಾಸ ಸತ್ಯಾಗ್ರಹ ಕೈಗೊಂಡು ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸುತ್ತೇವೆ ಎಂದು ರೈತರು ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹೊಳೆ ಆಲೂರು: ಮಲಪ್ರಭ ನದಿ ದಡದಲ್ಲಿ ಮೊಸಳೆ ಶವ ಪತ್ತೆ

ಇಲ್ಲಿನ ಮಲಪ್ರಭ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆ ಹೊಳೆಯಾಲೂರು ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿದ್ದರು. ನದಿ ದಡಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗುರ ಸಾರಲಾಗಿತ್ತು. ಆದರೆ ಇಂದು ಅದೇ ಸ್ಥಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಬುಧುವಾರ ಇಲ್ಲಿ ಕಾಣಿಸಿಕೊಂಡ ಮೊಸಳೆ ಸಾವನ್ನಪ್ಪಿದಾಗಿರಬಹುದು ಎನ್ನಲಾಗಿದೆ.

ಬಿಜೆಪಿ ಅಸ್ಪೃಶ್ಯತೆಯನ್ನು ಮರುಸ್ಥಾಪಿಸುತ್ತಿದೆ

ಬಿಜೆಪಿ ತನ್ನ ಮನುವಾದಿ ಸಿದ್ಧಾಂತವನ್ನು ಸಮಾಜದೊಳಗೆ ವ್ಯವಸ್ಥಿತವಾಗಿ ಮತ್ತೆ ಸ್ಥಾಪಿಸುತ್ತಿದೆ.

ಪಾಸಿಟಿವ್ ಗರ್ಭಿಣಿಗೆ ಸಿಸೇರಿನ್: ಗದಗ ಜಿಮ್ಸ್ ನ ಅಪರೂಪದ ಸಾಧನೆ

ಗದಗ: ಇದು ಗದಗಿನ ಜಿಮ್ಸ್ ವೈದ್ಯರು ನಡೆಸಿದ ‘ಆಪರೇಷನ್ ಪಾಸಿಟಿವ್’ ಕಾರ್ಯಾಚರಣೆ. ಶುಕ್ರವಾರವಷ್ಟೇ ಪಾಸಿಟಿವ್ ದೃಢಪಟ್ಟಿದ್ದ…

ಯುವ ಕಾಂಗ್ರೆಸ್ ಅಧ್ಯಕ್ಷ ಸರ್ಫರಾಜ್ ಅವರಿಗೆ ಅಭಿನಂದನೆ

ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸರ್ಫರಾಜ್ ಸೂರಣಗಿಯವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಗಡ್ಡದೇವರಮಠ ಅಭಿನಂದಿಸಿದರು.