ಬೆಂಗಳೂರು: ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಕೋವಿಡ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವುದರಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.

ಸರ್ಕಾರದ ಈ ಆದೇಶವು ಸರ್ಕಾರದಿಂದ ಸಹಾಯಾನುದಾನ / ಅನುದಾನ ಪಡೆಯುವ ಅಥವಾ ಪಡೆಯದಿರುವ ಎಲ್ಲಾ ಕರ್ನಾಟಕ ಸರ್ಕಾರದ ಎಲ್ಲಾ ಉದ್ಯಮಗಳ ಸಂಸ್ಥೆಗಳ ನೌಕರರಿಗೂ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

2021 ರ ಜನವರಿ ತಿಂಗಳಿಂದ ಡಿಸೆಂಬರ್ ಅಂತ್ಯದ ಅವಧಿಯಲ್ಲಿ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು / ಅಧಿಕಾರಿಗಳು, ಅವರು ನಿವೃತ್ತಿ ಹೊಂದುವ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದೇಶದ ಪ್ರಕಾರ 2021ನೇ ಸಾಲಿನ 01-01-2021 ರಿಂದ 31-12-2021 ರವರೆಗಿನ ಅವಧಿಯಲ್ಲಿ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಜೂನ್ 15 ರಿಂದ ಶೈಕ್ಷಣಿಕ ವರ್ಷ ಆರಂಭ

ಬೆಂಗಳೂರು: ಶಾಲೆಗಳಿಗೆ ರಜೆ ಮುಗಿದು ಇನ್ನೇನು ಶಾಲೆಗಳು ಆರಂಭವಾಗುವಷ್ಟರಲ್ಲಿ ಮತ್ತೆ ಸರ್ಕಾರ ಜೂನ್ 14 ರವರೆಗೆ ಬೇಸಿಗೆ ರಜೆ ವಿಸ್ತರಿಸಿದೆ. ಆದರೆ ಜೂನ್ 15 ರಿಂದ 8, 9, 10ನೆ ತರಗತಿಗಳಿಗೆ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಇನ್ನು,ಪ್ರಾಥಮಿಕ ಶಾಲೆಗಳ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ.

ಮದ್ಯದ ಅಮಲಿನಲ್ಲಿ ಮಡದಿಯ ಕೊಲೆ!

ಮದ್ಯದ ಮತ್ತಿನಲ್ಲಿ ಪತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.

ರಾಜ್ಯದಲ್ಲಿ ಕೊವೀಡ್ ಕರ್ಫ್ಯೂ : ಏನಿರುತ್ತೆ…? ಏನಿರಲ್ಲ…?

ನಾಳೆ ಸಂಜೆಯಿಂದ 14 ದಿನಗಳ ಕಾಲ ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.

ವಿಶ್ವ ಜಾನಪದ ದಿನ ಆಚರಣೆ: ಜಾನಪದ ಸಂರಕ್ಷಣೆ ಹಾಗೂ ಸಂವರ್ಧನೆ ಅಗತ್ಯ.

ಬೀದರ: ಜಾನಪದ ಜನ ಕೇಂದ್ರಿತ ಮೌಲ್ಯಗಳ ನಿದಿಯಾಗಿದ್ದು ಇದನ್ನು ಬಗೆದಷ್ಟು ದೇಶಿಯತೆ ಅನಾವರಣಗೊಳ್ಳುವುದು ಎಂದು ಕರ್ನಾಟಕ…