ಗದಗ: ಸಮಾಜ ಕಲ್ಯಾಣಾಧಿಕಾರಿ ಖಾಜಾಹುಸೇನ್ ಮುಧೋಳ್ ಬುಧವಾರ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.
ಮೂಲತ: ಗದಗ ನಗರದವರಾದ ಖಾಜಾಹುಸೇನ್ ಜಿಲ್ಲೆಯ ಸಮಾಜ ಕಲ್ಯಾಣಾಧಿಕಾರಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಸದ್ಯ ಬೆಂಗಳೂರು ಗ್ರಾಮೀಣ ವಿಭಾಗದ ಸಮಾಜ ಕಲ್ಯಾಣಾಧಿಕಾರಿಯಾಗಿದ್ದರು. ಸದಾ ಲವಲವಿಕೆ, ಸ್ನೇಹಪರವಾಗಿದ್ದ ಖಾಜಾಹುಸೇನ ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು. ಪತ್ನಿ ಮೂವರು ಪುತ್ರರು ಹಾಗೂ ತಂದೆ-ತಾಯಿ ಸೇರಿ ಸಹೋದರ-ಸಹೋದರಿಯರು ಮತ್ತು ಅಪಾರ ಬಂಧುಗಳನ್ನು ಬಿಟ್ಟು ಅಗಲಿದ್ದಾರೆ.
ಗದಗ ಜಿಲ್ಲೆಯಲ್ಲಿ ಮುಧೋಳ್ ಅವರ ಸೇವಾ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿರುವುದನ್ನು ಸ್ಮರಿಸಬಹುದಾಗಿದೆ.