ಗದಗ: ಸಮಾಜ ಕಲ್ಯಾಣಾಧಿಕಾರಿ ಖಾಜಾಹುಸೇನ್ ಮುಧೋಳ್ ಬುಧವಾರ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.

ಮೂಲತ: ಗದಗ ನಗರದವರಾದ ಖಾಜಾಹುಸೇನ್ ಜಿಲ್ಲೆಯ ಸಮಾಜ ಕಲ್ಯಾಣಾಧಿಕಾರಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಸದ್ಯ ಬೆಂಗಳೂರು ಗ್ರಾಮೀಣ ವಿಭಾಗದ ಸಮಾಜ ಕಲ್ಯಾಣಾಧಿಕಾರಿಯಾಗಿದ್ದರು. ಸದಾ ಲವಲವಿಕೆ, ಸ್ನೇಹಪರವಾಗಿದ್ದ ಖಾಜಾಹುಸೇನ ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು. ಪತ್ನಿ ಮೂವರು ಪುತ್ರರು ಹಾಗೂ ತಂದೆ-ತಾಯಿ ಸೇರಿ ಸಹೋದರ-ಸಹೋದರಿಯರು ಮತ್ತು ಅಪಾರ ಬಂಧುಗಳನ್ನು ಬಿಟ್ಟು ಅಗಲಿದ್ದಾರೆ.

ಗದಗ ಜಿಲ್ಲೆಯಲ್ಲಿ ಮುಧೋಳ್ ಅವರ ಸೇವಾ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿರುವುದನ್ನು ಸ್ಮರಿಸಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ಅಪರೂಪದ ಕರಿನಾಗರ ಪ್ರತ್ಯಕ್ಷ, ಕುತೂಹಲ ಮೂಡಿಸೊದ ಕಪ್ಪು ಬಣ್ಣದ ಉರಗ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಹೊರವಲಯದಲ್ಲಿರುವ ಜ್ಞಾನಮುದ್ರಾ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಅಪರೂಪದ…

ಸಿದ್ದರಾಮಯ್ಯ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ: ಮಾಜಿ ಸಿಎಂ ಎಚ್ಡಿಕೆ

ಸಿದ್ದರಾಮಯ್ಯ ಊಸುರವಳ್ಳಿ ಇದ್ದಂತೆ. ಅಧಿಕಾರದ ಲಾಲಸೆಯಿಂದಲೇ ಅವರು ಕಾಂಗ್ರೆಸ್ ಗೆ ಜಿಗಿದಿದ್ದಾರೆ. ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಹೇಳುವ ಮೂಲಕ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.

ನಿಮ್ಮ ಡೇಟಾ ಇದ್ದರೆ ಕೂಡಲೇ ಸೇವ್ ಮಾಡಿಕೊಳ್ಳಿ

ಫೆ.24 ರಿಂದ ಆಚೆಗೆ ತನ್ನ ಪ್ಲೇ ಮ್ಯೂಸಿಕ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸುವುದಾಗಿ ತನ್ನ ಬಳಕೆದಾರರಿಗೆ ಇ-ಮೇಲ್ ಮುಖಾಂತರ ಈಗಾಗಲೇ ತಿಳಿಸಿದೆ.