ಗದಗ: ರಾಜ್ಯ ಹೆದ್ದಾರಿ 45ರ ಪಾಪನಾಶಿ ಹಾಗೂ ಕೊರ್ಲಹಳ್ಳಿ ಬಳಿಯ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಣೆ ವಾಹನಗಳಿಗೆ ಶುಲ್ಕ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಗೂಡ್ಸ್ ಶೆಡ್ ಮತ್ತು ಗದಗ ಜಿಲ್ಲಾ ಲಾರಿ ಮಾಲೀಕರ ಸಂಘದಿಂದ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ರೈತರ ಕೃಷಿ ಉತ್ಪನ್ನಗಳು ಸೇರಿದಂತೆ ಜನಸಾಮಾನ್ಯರ ದಿನ ನಿತ್ಯದ ಜೀವನಾವಶ್ಯಕ ಅಗತ್ಯ ವಸ್ತುಗಳ ಸಾಗಾಟದಲ್ಲಿ ತೊಡಗಿರುವ ಸರಕು ಸಾಗಾಣಿಕೆ ವಾಹನಗಳಿಗೆ ನೀಡುತ್ತಿರುವ ಶುಲ್ಕ ಜನರಿಗೆ ಮತ್ತು ವಾಹನ ಮಾಲಿಕರಿಗೆ ಹೊರೆಯಾಗುತ್ತಿದ್ದು, ಕೂಡಲೇ ಸರಕು ಸಾಗಾಣಿಕೆ ಮತ್ತು ಟೋಲ್ ಸಂಗ್ರಹ ಗುತ್ತಿಗೆದಾರರ ಮಧ್ಯೆ ಚರ್ಚೆ ನಡೆಸಿ ಟೋಲ್ ಗಳಲ್ಲಿ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.

ಗದಗ ಗೂಡ್ಸ್ ಶೆಡ್ ಮತ್ತು ಗದಗ ಜಿಲ್ಲಾ ಲಾರಿ ಮಾಲಕರ ಸಂಘದ ಉಪಾಧ್ಯಕ್ಷ ಆಶೀಫ್ ಡಂಬಳ, ಕಾರ್ಯದರ್ಶಿ ಅನ್ವರ ಹುಲ್ಲೂರು, ಸಹ ಕಾರ್ಯದರ್ಶಿ ಶ್ರೀಕಾಂತ ರಾಯರಡ್ಡಿ, ಖಜಾಂಚಿ ಕಂಬಾಳಿಮಠ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ರೈತರಿಗೆ ಬೆಳೆವಿಮೆ ಮಾಹಿತಿ : ಯಾವ ಊರಿಗೆ, ಯಾವ ಬೆಳೆಗೆ, ಎಷ್ಟು ವಿಮೆ ಸಿಗಲಿದೆ..?

ಗದಗ: ಕರ್ನಾಟಕ ಸರ್ಕಾರವು 2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ(ವಿಮಾ) ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಿರುತ್ತದೆ. ಈ ಯೋಜನೆಯ ರೂಪರೇಷೆ ಮತ್ತು ವಿವರಗಳನ್ನು ಇಲ್ಲಿ ನೀಡಲಾಗಿದೆ.

ಜಾನಪದ ಕಲಾವಿದ ಪಾಗದ ನಿಧನ

ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.

ಸುಕ್ಷೇತ್ರ ಯಲಗುರೇಶ ಕಾರ್ತಿಕೋತ್ಸವ

ಆಲಮಟ್ಟಿ : ಸಮೀಪದ ಸುಕ್ಷೇತ್ರ ಯಲಗುರ ಗ್ರಾಮದ ಜಾಗೃತದೇವ ಹನುಮ ಯಲಗುರೇಶನ ಕಾರ್ತಿಕೋತ್ಸವ ಶನಿವಾರ ಜರುಗಲಿದೆ.…

ಜಕ್ಕಲಿಯಲ್ಲಿ ಟೆಂಗಿನ ಮರಕ್ಕೆ ಸಿಡಿಲು!

ಟೆಂಗಿನ ಮರಕ್ಕೆ ಸಿಡಿಲು ಬಡಿದು ದಗದಗ ಹೊತ್ತಿ ಉರಿದ ಘಟನೆ ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ನಡೆದಿದೆ.