ಗದಗ: ರಾಜ್ಯ ಹೆದ್ದಾರಿ 45ರ ಪಾಪನಾಶಿ ಹಾಗೂ ಕೊರ್ಲಹಳ್ಳಿ ಬಳಿಯ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಣೆ ವಾಹನಗಳಿಗೆ ಶುಲ್ಕ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಗೂಡ್ಸ್ ಶೆಡ್ ಮತ್ತು ಗದಗ ಜಿಲ್ಲಾ ಲಾರಿ ಮಾಲೀಕರ ಸಂಘದಿಂದ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ರೈತರ ಕೃಷಿ ಉತ್ಪನ್ನಗಳು ಸೇರಿದಂತೆ ಜನಸಾಮಾನ್ಯರ ದಿನ ನಿತ್ಯದ ಜೀವನಾವಶ್ಯಕ ಅಗತ್ಯ ವಸ್ತುಗಳ ಸಾಗಾಟದಲ್ಲಿ ತೊಡಗಿರುವ ಸರಕು ಸಾಗಾಣಿಕೆ ವಾಹನಗಳಿಗೆ ನೀಡುತ್ತಿರುವ ಶುಲ್ಕ ಜನರಿಗೆ ಮತ್ತು ವಾಹನ ಮಾಲಿಕರಿಗೆ ಹೊರೆಯಾಗುತ್ತಿದ್ದು, ಕೂಡಲೇ ಸರಕು ಸಾಗಾಣಿಕೆ ಮತ್ತು ಟೋಲ್ ಸಂಗ್ರಹ ಗುತ್ತಿಗೆದಾರರ ಮಧ್ಯೆ ಚರ್ಚೆ ನಡೆಸಿ ಟೋಲ್ ಗಳಲ್ಲಿ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.

ಗದಗ ಗೂಡ್ಸ್ ಶೆಡ್ ಮತ್ತು ಗದಗ ಜಿಲ್ಲಾ ಲಾರಿ ಮಾಲಕರ ಸಂಘದ ಉಪಾಧ್ಯಕ್ಷ ಆಶೀಫ್ ಡಂಬಳ, ಕಾರ್ಯದರ್ಶಿ ಅನ್ವರ ಹುಲ್ಲೂರು, ಸಹ ಕಾರ್ಯದರ್ಶಿ ಶ್ರೀಕಾಂತ ರಾಯರಡ್ಡಿ, ಖಜಾಂಚಿ ಕಂಬಾಳಿಮಠ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಹೊರ ರಾಜ್ಯಗಳಿಗೆ ಹೋಗಲು -ಬುರವಿಕೆಗೆ ಅನುಮತಿ

ಹೊರ ರಾಜ್ಯಗಳಲ್ಲಿ ಸಿಲುಕಿರುವ ಅಥವಾ ಸ್ವಂತ ರಾಜ್ಯಕ್ಕೆ ಸ್ಥಳಕ್ಕೆ ಹೋಗಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು,ಪ್ರವಾಸಿಗರು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ರಕ್ತದಾನ ಮಾಡಿ ಜೀವ ಉಳಿಸಿ

ಆರೋಗ್ಯವಂತ ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ಐಎಂಎ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಆರ್.ಟಿ. ಪವಾಡಶೆಟ್ಟರ್ ಹೇಳಿದರು.

ಗದಗ ಜಿಲ್ಲೆಯಲ್ಲಿ ಸೋಂಕಿನ ಸರಣಿ ಸ್ಪೋಟ!: ಇಂದು 40 ಪಾಸಿಟಿವ್..!

ದಿನಕ್ಕೆ ಗದಗ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ನಗರಕ್ಕೆ ಸೀಮಿತವಾಗಿದ್ದ ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ್ದು ತೀವ್ರ ಆತಂಕ ಸೃಷ್ಟಿಸಿದೆ.

ಬೀದಿಗೆ ಬಂದ ಕಾರ್ಮಿಕರು…!

ಲಾಕ್ ಡೌನ್ ನಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಸಕ್ಕರೆ ಕಾರ್ಖಾನೆಯೊಂದರ 350ಕ್ಕೂ ಹೆಚ್ಚು ಕಾರ್ಮಿಕರು ಸದ್ಯ ಇದರಿಂದಾಗಿ ಬೀದಿಗೆ ಬಂದಿದ್ದಾರೆ.