ಗದಗ: ಪೂರ್ಣಾವಧಿಗೆ ಬಿ.ಎಸ್.ಯಡಿಯೂರಪ್ಪ ಅವ್ರೇ ಸಿಎಂ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದರು.

ಗದಗನಲ್ಲಿ ಈ ಕುರಿತು ಮಾದ್ಯಮದವರೊಂದಿಗೆ ಮಾತನಾಡಿ, ಸರ್ಕಾರದ ಅವಧಿ ಇನ್ನೂ ಎರಡೂವರೆ ವರ್ಷ ಬಾಕಿ ಉಳಿದಿದ್ದು, ಯಡಿಯೂರಪ್ಪ ಅವ್ರೇ ಅವಧಿ ಪೂರ್ಣಗೊಳ್ಳುವವರೆಗೆ ಸಿಎಂ ಆಗಿರುತ್ತಾರೆ. ಹೀಗಾಗಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳ ಸೃಷ್ಟಿ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಪ್ರತಿಕ್ರಿಯಿಸಿದರು.

ಸಚಿವ ಸಂಪುಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಈಗಾಗಲೇ ಸಿಎಂ ಈ ಬಗ್ಗೆ ಹೇಳಿದ್ದಾರೆ. ಇನ್ನು ಎರಡು ದಿನ ಕಾಯಿರಿ. ಯಾವುದೇ ಗೊಂದಲವಿಲ್ಲದೇ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ, ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಸರ್ಕಾರ ಸುಭದ್ರವಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ಹಳ್ಳಿ ಹಕ್ಕಿ‌ ಒಂಟಿಯಾಗಲು ಬಿಡಲ್ಲ: ಸಚಿವ ಸೋಮಶೇಖರ್

ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ.…

ಫೆ. 24ರಿಂದ ಮುಳಗುಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಇದೇ ಫೆ 24 ರಿಂದ 26 ವರೆಗೆ ಗವಿಮಠಾಧ್ಯಕ್ಷರಾದ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ, ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.

ಕುರಿ ಮತ್ತು ಮೇಕೆಗಳ ಅನುಗ್ರಹ ಯೋಜನೆ ಮುಂದುವರೆಸಲು ಮನವಿ

ಕುರಿಗಾರರಿಗೆ ಅನುಕೂಲಕರವಾಗಿದ್ದ ಅನುಗ್ರಹ ಯೋಜನೆಯನ್ನು ಮುಂದುವರೆಸಬೇಕು. ಜೊತೆಗೆ ಯೋಜನೆಯಡಿ ಬಾಕಿ ಇರುವ ಇರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಯುವ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

10 ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಆಲಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲ ವಯೋಮಾನದ ಗ್ರಾಮೀಣ ಕ್ರೀಡಾಸಕ್ತರಿಗಾಗಿ ದಿ,10 ರಂದು…