ಗದಗ: ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಬೇಡ ಅನ್ನಲ್ಲ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.
ಈ ಕುರಿತು ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ,
ಸಚಿವ ಸಂಪುಟ ವಿಸ್ತರಣೆಯಾಗುತ್ತೇ ಅಂತಾ ಯಾರು ಹೇಳಿದ್ದಾರೆ. ನಾನಂತು ನೋಡಿಲ್ಲಾ. ಹಾಗೂ ಕೇಳಿಲ್ಲಾ. ಈ ಬಗ್ಗೆ ನೋಡಿ ಹೇಳುತ್ತೇನೆ ಎಂದರು.
ಸಚಿವ ಸ್ಥಾನ ಸಿಗುತ್ತೆ ಅಂದ್ರೆ ಯಾರು ಬೇಡ ಅಂತಾರೆ. ನನಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ನಿಮಗೆ ಅಸಮಾಧನವಿರಬಹುದು ಎಂದು ಮಾದ್ಯಮದವರನ್ನೆ ಪ್ರಶ್ನಿಸಿದರು.
