ಲಕ್ಷ್ಮೇಶ್ವರ: ಸರ್ಕಾರ ಅನೇಕ ಯೋಜನೆಗಳನ್ನು ಅದರಲ್ಲೂ ಮುಖ್ಯವಾಗಿ ನೀರಿಗಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಕೇವಲ ಪೈಪ್ ಹಾಕಿ ಟ್ಯಾಂಕರ್ ನಿರ್ಮಿಸಿದರೆ ಇಲಾಖೆಯ ಜವಾಬ್ದಾರಿ ಮುಗಿಯುವುದಿಲ್ಲ. ನೀರು ಸರಬರಾಜು ಆಗುತ್ತದೆಯೋ ಇಲ್ಲೋವೋ ಎನ್ನುವುದನ್ನು ಅಧಿಕಾರಿಗಳು ಮನದಟ್ಟ ಮಾಡಿಕೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಗುರಿಕಾರ ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾ.ಪಂ ಸಾಮಾನ್ಯ ಸಭೆಯೂ ಅಧ್ಯಕ್ಷ ಪರಶಪ್ಪ ಇಮ್ಮಡಿ ಅಧ್ಯಕ್ಷತೆಯಲ್ಲಿ ಜರುಗಿತು. ತಾ.ಪಂ ಸದಸ್ಯರಾದ ಗಿರಜವ್ವ ಲಮಾಣಿ, ಸುಶೀಲವ್ವ ಲಮಾಣಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕವಾಗಿ ಮೊಟ್ಟೆ ಪೂರೈಕೆ ಆಗುತ್ತಿಲ್ಲ. ಕಾರ್ಯಕರ್ತರನ್ನು ಪ್ರಶ್ನಿಸಿದರೆ ನಾವೆ ಕೈಯಿಂದ ಹಣ ಕೊಟ್ಟು ಮೊಟ್ಟೆ ತರಬೇಕಾಗಿದೆ.

ಅನುದಾನ ಬರುತ್ತಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಸಿಡಿಪಿಓ ಅವರಿಗೆ ಪ್ರಶ್ನಿಸಿದಾಗ ಗಲಿಬಿಲಗೊಂಡ ಸಿಡಿಪಿಓ, ಅನುದಾನ ಸಮರ್ಪಕವಾಗಿ ಬಿಡುಗಡೆಯಾಗದಿರುವುದರಿಂದ ಈ ಗೊಂದಲ ಉಂಟಾಯಿತು. ಈಗ ಎಲ್ಲವೂ ಸರಿಯಾಗಿದ್ದು ಮುಂಚಿತವಾಗಿ ಮೊಟ್ಟೆ ಖರೀದಿಗೆ ಹಣ ನೀಡಲಾಗುವುದು ಎಂದು ಹೇಳಿದರು.

ಪರಶಪ್ಪ ಇಮ್ಮಡಿ ಮಾತನಾಡಿ, ಪ್ರಮುಖವಾಗಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಮೇಲೆ ನಡೆದ ಚರ್ಚೆಯಲ್ಲಿ ಆದ್ರಳ್ಳಿ, ಬಟ್ಟೂರು, ಬಾಳೆಹೋಸೂರು ಮತ್ತಿತ್ತರ ಗ್ರಾಮಗಳಲ್ಲಿ ಬೇಸಿಗೆ ಪೂರ್ವದಲ್ಲಿಯೇ ನೀರಿನ ಹಾಹಾಕಾರ ತಲೆದೂರಿದೆ. ಸರಕಾರ ನೀರು ಸರಬರಾಜಿಗಾಗಿ ಕೋಟಿ ಕೋಟಿ ಹಣ ವಿನಿಯೋಗಿಸುತ್ತಿದ್ದರು, ಇಲಾಖೆಯು ಜವಾಬ್ದಾರಿಯಿಂದ ಕಾರ್ಯನಿರ್ವಹಿಸದೆ. ಇರೋದರಿಂದ ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಜಿಪಂ, ಅರಣ್ಯ ಸಾಮಾಜಿಕ ಅರಣ್ಯ, ಶಿಕ್ಷಣ ಸೇರಿದಂತೆ ಅನೇಕ ಇಲಾಖೆಗಳ ಮೇಲೆ ಚರ್ಚೆ ಜರುಗಿತು.

ಜಿ.ಪಂ ಇಲಾಖೆಯ ಶ್ರೀಧರ, ಆರ್‌ಡ್ಲೂಎಸ್ ಮಲ್ಲಿಕಾರ್ಜುನ, ಸಿ. ತೋಟಗಾರಿಕೆ ಇಲಾಖೆಯ ಸುರೇಶ ಕುಂಬಾರ, ಶಿಕ್ಷಣ ಇಲಾಖೆಯ ಆರ್.ಎಸ್.ಬುರಡಿ ಲೋಕೋಪಯೋಗಿ ಇಲಾಖೆಯ ನರೇಂದ್ರ. ಡಿ.ಬಿ, ಅರಣ್ಯ ಇಲಾಖೆಯ ಎಚ್.ಮುಲ್ಲಾ, ತಾ.ಪಂ. ಉಪಾಧ್ಯಕ್ಷೆ ಜನನಿ ಅತ್ತಿಗೇರಿ, ಸುಶೀಲವ್ವ ಲಮಾಣಿ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ವಲಸೆ ಕಾರ್ಮಿಕರ ರಕ್ಷಣೆಗಾಗಿ ಪೋಸ್ಟರ್ ನಾಳೆ ಪ್ರತಿಭಟನೆ

ಕಳೆದ ಒಂದುವರೆ ತಿಂಗಳಿಂದ ವಲಸೆ ಕಾರ್ಮಿಕರು ಊಟ ಇಲ್ಲದೆ, ವೇತನ ವಿಲ್ಲದೆ ಹೇಳಲಾರದ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಅವರೆಲ್ಲ ಮನೆಗೆ ಹೋಗಲು ಬಯಸುತ್ತಿದ್ದಾರೆ. ಆದರೆ ನಮ್ಮ ಕ್ರೂರ ಸರ್ಕಾರ, ರೈಲುಗಳನ್ನು ನಿಲ್ಲಿಸಿ, ಅಮಾನೀಯವಾಗಿ ಕಾರ್ಮಿಕರನ್ನು ಇಲ್ಲಿಯೇ ಬಂಧಿಸಿ, ನಮ್ಮ ರಾಜ್ಯವನ್ನ ಬಹಿರಂಗ ಜೈಲು ಮಾಡಲು ಹೊರಟಿದೆ.

ನರೆಗಲ್ ಗಾರ್ಡನ್ ಕಥೆ: ಲಕ್ಷ ಖರ್ಚು ಮಾಡಿದರು ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ..?

ಗದಗ: ಜಿಲ್ಲೆಯ ನರೇಗಲ್ ಪಟ್ಟಣದ 17ನೇ ವಾರ್ಡ್‌ನಲ್ಲಿ ಶ್ರೀ ಅನ್ನದಾನೇಶ್ವರ ಕಾಲೆಜು ಪಕ್ಕದಲ್ಲಿ ನಾಲ್ಕು ವರ್ಷಗಳ…

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರ: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)…

ಕೋಟುಮಚಗಿ ಬಳಿ ಕಾರು ಪಲ್ಟಿ!: ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಸಮೀಪದ ಕೋಟುಮಚಗಿ ಬಳಿ ನಡೆದಿದೆ. ಬೆಳಗಿನ ಜಾವ ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಕಾರಿನಲ್ಲಿ ಇನ್ನು ಕೆಲವರು ಇದ್ದಿರಬಹುದೆಂದು ಸಾರ್ವಜನಿಕರಿಂದ ಸಂಶಯ ವ್ಯಕ್ತವಾಗಿದೆ.