ಶಿರಹಟ್ಟಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವರ್ಷದಿಂದ ವರ್ಷಕ್ಕೆ ಇಳಿಕೆ ಕ್ರಮದಲ್ಲಿ ಸಾಗುತ್ತಿದ್ದು, ಇದಕ್ಕೆ ಶಿಕ್ಷಕರ ಅಪೂರ್ಣತೆಯೇ ಮೂಲ ಕಾರಣ ಎಂದು ಡಿಡಿಪಿಐ ಬಸವಲಿಂಗಪ್ಪ ಹೇಳಿದರು.

ಸ್ಥಳೀಯ ಡಿ.ದೇವರಾಜ ಅರಸು ಸಭಾಭವನದಲ್ಲಿ ಬುಧವಾರ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಹಾಗೂ ಶಿಕ್ಷಕರಿಗಾಗಿ ನಡೆದ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣಾ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ಲೋಪದೋಷಗಳಿಲ್ಲ. ವಿದ್ಯಾರ್ಥಿಗಳು ಶಿಕ್ಷಕರ ಶಿಕ್ಷಕ ಎಂದು ಹೇಳಬಹುದುಗಾಗಿದ್ದು, ಶಿಕ್ಷಕರು ಪಾಠ ಬೋಧನೆಯಲ್ಲಿ ಪರಿಪೂರ್ಣತೆ ಹೊಂದಿದರೆ ಮಾತ್ರ ವಿದ್ಯಾರ್ಥಿಗಳಲ್ಲಿ ಸರಿಯಾದ ಕಲಿಕೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ಶಿಕ್ಷಕರ ಬೇಜವ್ದಾರಿತನದಿಂದ ಮಕ್ಕಳು ಅದೇ ಹಾದಿಯಲ್ಲಿ ಸಾಗುತ್ತಿದ್ದು, ಶಿಕ್ಷಕರು ಕಡ್ಡಾಯವಾಗಿ ನಿಗದಿತ ಸಮಯಕ್ಕೆ ಶಾಲೆಯಲ್ಲಿ ಹಾಜರಿರಬೇಕು. ರಜೆ ಬೇಕಾದರೆ ಕಡ್ಡಾಯವಾಗಿ ಅರ್ಜಿ ಮುಖಾಂತರ ಸಲ್ಲಿಸಬೇಕು. ಅದನ್ನು ಬಿಟ್ಟು ಕೇವಲ ದೂರವಾಣಿ ಮೂಲಕ ಹೇಳಿದರೆ ಮುಖ್ಯೋಪಾಧ್ಯಯರು ರಜೆ ಮಂಜೂರು ಮಾಡಬಾರದು. ಇದಕ್ಕೆ ಅನುಗುಣವಾಗಿ ಆದೇಶವಿದ್ದು ಕಡ್ಡಾಯವಾಗಿ ಇದು ಪಾಲನೆಯಾಗಬೇಕು ಎಂದು ಹೇಳಿದರು.

ಫಲಿತಾಂಶ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದ್ದು, ಕಡಿಮೆ ಫಲಿತಾಂಶ ಮಾಡಿ ಬೀಗುವ ಬದಲು ಬಾಗಿ ಪಾಠ ಬೋಧನೆ ಮಾಡಬೇಕು. ವಿಷಯದಲ್ಲಿ ಪರಿಣಿತಗೊಂಡು ಮಕ್ಕಳ ಮನಸ್ಸಿನ ಆಳಕ್ಕಿಳಿದು ಪಾಠ ಬೋಧನೆ ಮಾಡಿದಾಗ ಮಾತ್ರ ವಿದ್ಯಾರ್ಥಿಗಳ ಪಲಿತಾಂಶ ಸುಧಾರಣೆಯಾಗಲು ಸಾಧ್ಯ ಆಗುತ್ತದೆ ಎಂದು ಹೇಳಿದರು.

ಡಿಡಿಪಿಐ ಅವರೆ ಒಪ್ಪಿಕೊಂಡಂತೆ

ಡಿಡಿಪಿಐ ಅವರ ಈ ಮಾತಿನಿಂದ ಇದೀಗ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಯ ವಿಚಾರ ಗಂಭೀರವಾಗಿ ತೆಗೆದುಕೊಂಡಂತೆ ಕಾಣುತ್ತಿದೆ. ಇನ್ನು ಮುಖ್ಯವಾಗಿ ಸ್ವತ: ಡಿಡಿಪಿಐ ಅವರೆ ಫಲಿತಾಂಶ ಇಳಿಕೆಗೆ ಶಿಕ್ಷಕರ ಅಪೂರ್ಣತೆಯೆ ಕಾರಣ ಎಂದು ಒಪ್ಪಿಕೊಂಡಿರುವುದು ಮಾತ್ರ ಅಚ್ಚರಿಯ ಸಂಗತಿ. ಇನ್ಮುಂದೆ ನಿಗದಿತ ಸಮಯಕ್ಕೆ ಶಾಲೆಗೆ ಬರುವುದು ಹಾಗು ರಜೆ ಅರ್ಜಿ ಸಲ್ಲಿಸಿಯೇ ಶಾಲೆಗೆ ಗೈರಾಗಬೇಕು. ದೂರವಾಣಿ ಮೂಲಕ ರಜೆ ಕೇಳಿದರೆ ಸಾಲದು ಎಂದು ಖಡಕ್ ಸೂಚನೆ ನೀಡಿದರು. ಆದರೆ ಇಷ್ಟು ದಿನ ಕೆಲವು ಶಿಕ್ಷಕರು ನಿಗದಿತ ಸಮಯಕ್ಕೆ ಶಾಲೆಗೆ ಬಾರದೆ ಇರುವುದು, ರಜೆ ಹೇಳದೇ ಶಾಲೆಗೆ ಗೈರಾಗುತ್ತಿದ್ದರೆ? ಎನ್ನುವುದು ಪ್ರಶ್ನೆಯಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಬುರಡಿ, ಜಿ.ಡಿ.ದಾಸರ, ಎಂ.ಬಿ.ಹೊಸಮನಿ, ಶರಣು ಗೋಗೇರಿ, ಪಿ.ಜಿ.ಯಲವಿಗಿ, ಇಓ ನಿಂಗಪ್ಪ ಓಲೇಕಾರ, ವೈ.ಎಸ್.ನದಾಫ್, ಶರೀಫ್ಸಾಬ ನದಾಫ್, ರವಿ ಬೆಂಚಳ್ಳಿ, ಎಂ.ಕೆ.ಲಮಾಣಿ, ಎಂ.ಎ.ಮಕಾಂದಾರ ಮುಂತಾದವರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *

You May Also Like

ಮೂರುಸಾವಿರಮಠ ಮತ್ತು ಆಸ್ತಿಗಳ ವಿಚಾರ: ಬಹಿರಂಗ ಚರ್ಚೆಗೆ ದಿಂಗಾಲೇಶ್ವರ ಶ್ರೀಗಳ ಆವ್ಹಾನ

ಶ್ರೀ ಜಗದ್ಗುರು ಮಾರುಸಾವಿರಮಠದ ಆಸ್ತಿ ಮತ್ತು ಉತ್ತರಾಧಿಕಾರಕ್ಕೆ ಸಂಬಂಧಪಟ್ಟ ವಿಚಾರವಾಗಿ ಹೇಳಿಕೆ ನೀಡುವ ಯಾವುದೇ ವ್ಯಕ್ತಿಗಳು ನಮ್ಮೊಂದಿಗೆ ಚರ್ಚಿಸಿ ಹೇಳಿಕೆ ನೀಡಬೇಕು ಎಂದು ಬಾಲೇಹೊಸೂರು ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಶ್ರೀಗಳು ತಿಳಿಸಿದ್ದಾರೆ.

ಬಿಜೆಪಿಯಲ್ಲಿನ ರಾಜಕೀಯ ಮೇಲಾಟಕ್ಕೆ ಕಾರಣವಾಗುತ್ತಾ ಶೀಕರಣಿ ಊಟ!

ಎರಡ್ಮೂರು ದಿನಗಳಿಂದ ಈಗಾಗಲೇ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವದ ಪ್ರಶ್ನೆ ಎದುರಾಗಿದೆ. ಈಗಾಗಲೇ ಕೆಲವು ಅತೃಪ್ತ ಶಾಸಕರು ನೀಡುತ್ತಿರುವ ಹೇಳಿಕೆಯಿಂದಾಗಿ ಸದ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವಂತಿದೆ.

ಆಶಾ ಕಾರ್ಯಕರ್ತೆಯರಿಗೆ ಜನರು ಸತ್ತ ಮೇಲೆ ಅವರಿಗೆ ದುಡ್ಡು ಕೊಡುತ್ತೀರಾ?

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಕೊರೊನಾ ಸಮಯದಲ್ಲಿ ಪ್ರತಿಭಟನೆಯಿಂದ ರಾಜ್ಯದಲ್ಲಿ ಕೆಲವು ಸಮಸ್ಯೆಗಳು ಎದುರಾಗಿವೆ.

ಚರ್ಚ್, ಮಸೀದಿಗಳಲ್ಲಿ ದೀಪ ಬೆಳಗಿಸಿ; ದಿಪಾವಳಿ ಆಚರಿಸಿ- ರಾಜು ಖಾನಪ್ಪನವರ

ಶಾಂತಿ, ಕೋಮು ಸೌಹಾರ್ಧತೆಗೆ ಜಿಲ್ಲೆ ಹೆಸರುವಾಸಿಯಾಗಿದೆ. ಇಂತಹ ಸೌಹಾರ್ಧ ತಾಣದಲ್ಲಿ ದೀಪಾವಳಿ ಹಬ್ಬವನ್ನು ಭಾವೈಕ್ಯತೆಯಿಂದ ಆಚರಿಸೋಣ. ಹೀಗಾಗಿ ಚರ್ಚ್, ದರ್ಗಾ ಮಸೀದಿಗಳಲ್ಲಿ ದೀಪ ಬೆಳಗಿಸುವ ಮೂಲಕ ನಾಡಿನಲ್ಲಿ ಕೋಮು ಸೌಹಾರ್ದತೆ ಬಲಪಡಿಸಲು ಮುಂದಾಗೋಣ ಎಂದು ಶ್ರೀರಾಮ ಸೇನೆ ಧಾರವಾಡ ವಿಭಾಗ ಸಂಚಾಲಕ ರಾಜು ಖಾನಪ್ಪನವರ ಹೇಳಿದರು.