ಲಕ್ಷ್ಮೇಶ್ವರ: ಜೋಳದ ಬೆಳೆಗೆ ಬೆಂಕಿ ಬಿದ್ದು ಮೂರು ಎಕರೆ ಪ್ರದೇಶದಲ್ಲಿ ಬೆಳೆದ ಜೋಳದ ಬೆಳೆ ಹಾನಿಯಾಗೀಡಾಗಿದ ಘಟನೆ ತಾಲೂಕಿನ ಬಡ್ನಿ ಗ್ರಾಮದಲ್ಲಿ ನಡೆದಿದೆ.

ಒಂದು ವಾರದ ಹಿಂದೆಯೆ ಅಕಾಲಿಕ ಮಳೆಯಿಂದ ಜೋಳದ ಬೆಳೆ ಸಂಪೂರ್ಣ ಬಿದ್ದು ಹಾಳಾಗಿ ಹೋಗಿತ್ತು. ಆದರೆ ಅಳಿದುಳಿದ ಅಲ್ಪ ಬೆಳೆಯಾದರು ಕೈಸೇರುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ರೈತನಿಗೆ ಇದರಿಂದ ಭಾರಿ ನಿರಾಶೆಯಾಗಿದೆ.

ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆನ್ನಲಾಗಿದೆ. ಬಡ್ನಿ ಗ್ರಾಮದ ರೈತ ಭರಮಪ್ಪ ಬೀರಪ್ಪ ಕಂಬಳೆ ಎಂಬ ರೈತನಿಗೆ ಸೇರಿದ 3 ಎಕರೆ ಬಿಳಿ ಜೋಳ ಸುಟ್ಟು ಕರಕಲಾಗಿದ್ದು, ಇನ್ನೇನು ಕಟಾವಿಗೆ ಬಂದ ಬೆಳೆ ಕೈಸೇರದಂತಾಗಿದೆ.

ಜಾನುವಾರುಗಳಿಗೆ ವರ್ಷದ ಊಟಕ್ಕೆ ಆಸರೆಯಾಗಿದ್ದ ಮೇವು ಸುಟ್ಟಿದ್ದು ದೆಡೆಯಾದರೆ, ಮನೆ ಮಂದಿಗೆಲ್ಲ ಅನ್ನಕ್ಕೆದಾರಿಯಾಗಿದ್ದ ಬೆಳೆ ಕೈಸೇರದಂತಾಗಿದ್ದು ರೈತನನ್ನು ತೀವ್ರ ಸಂಕಷ್ಟಕ್ಕೀಡು ಮಾಡಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.   

Leave a Reply

Your email address will not be published. Required fields are marked *

You May Also Like

ಕೋವಿಡ್-19 ನಿಯಂತ್ರಣ : ಜಿಲ್ಲೆಯಲ್ಲಿ 2 ವಾರ ಪ್ರತಿಬಂಧಕಾಜ್ಞೆ ಮುಂದುವರಿಕೆ

ಕೋವಿಡ್ -19 ಹರಡದಂತೆ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದನ್ವಯ ಮುಂದಿನ ಎರಡು ವಾರಗಳವರೆಗೆ ನಿಗದಿತ ಸಮಯ ಹೊರತುಪಡಿಸಿ ಉಳಿದ ಸಮಯದಲ್ಲಿ ಸಂಚಾರ ನಿಷೇಧಿಸಿದೆ.

ನಾಳೆ ಗಾಂಧಿ ಸ್ಮರಣೆ

ವಿಶ್ವವಿದ್ಯಾಲಯದಗಾಂಧಿ ಸಬರಮತಿ ಆಶ್ರಮದಲ್ಲಿ ಜ.30 ರಂದು ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಗಾಂಧಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೋಹನ್ ಲಿಂಬಿಕಾಯಿ ಅವ್ರಿಗೆ ಆಸಕ್ತಿ ಇದ್ರೆ ಕಾರಕೂನಕಿ ಜವಾಬ್ದಾರಿ ಕೊಡ್ತಾರಂತೆ ದಿಂಗಾಲೇಶ್ವರ ಶ್ರೀಗಳು!

ಹುಬ್ಬಳ್ಳಿ: ಮೂರು ಸಾವಿರ ಮಠದ ಸರ್ವನಾಶಕ್ಕೆ ಉನ್ನತ ಮಟ್ಟದ ಸಮಿತಿ ಸಿದ್ಧವಾಗಿದೆ. ದಿಂಗಾಲೇಶ್ವರ ಶ್ರೀಗಳಿಗೆ ಯಾವತ್ತು…

ಮಾ.4 ರಿಂದ ರಾಜ್ಯ ಬಜೆಟ್ ಅಧಿವೇಶನ: ಮೀಸಲಾತಿ ವಿಚಾರ ಸಂಪುಟ ಸಭೆಯಲ್ಲಿ ಚರ್ಚೆ!

ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಸಲಾಗುತ್ತಿದ್ದು, ಮಾರ್ಚ್ 4 ಮತ್ತು 5 ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.