ಗದಗ: ಬ್ಯಾಂಕಿಗೆ ಹಣ ಕಟ್ಟಿಬಾ ಅಂತಾ ಕಳಿಸಿದ ಮಾಲಿಕನ ಲಕ್ಷಾಂತರ ರೂಪಾಯಿಯೊಂದಿಗೆ ಕೆಲಸಗಾರ ನಾಪತ್ತೆಯಾಗಿದ್ದಾನೆ ಎನ್ನುವ ಆರೋಪ ಗದಗ ನಗರದಲ್ಲಿ ಕೇಳಿ ಬಂದಿದೆ.

ಮೂಲತ: ರಾಜಸ್ಥಾನ ನಿವಾಸಿ ರಾಮಸಿಂಗ್ ಗದಗ ನಗರದಲ್ಲಿ ಜೈನ್ ಟ್ರೇಡರ್ಸ್ ನಲ್ಲಿ ಕೆಲಸ ಮಾಡುತ್ತಿದ್ದ. ಜೈನ್ ಟ್ರೇಡರ್ಸ್ ಮಾಲಿಕ ವಿಕಾಸ, ಅವರ ವಿಶ್ವಾಸ ಗಳಿಸಿದ್ದ. ಹೀಗಾಗಿ ಟ್ರೇಡರ್ಸ್ ನ ವ್ಯಾಪಾರ ವಹಿವಾಟಿನ ಜವಾಬ್ದಾರಿಯನ್ನು ರಾಮಸಿಂಗ್ ರಜಪುತನಿಗೆ ವಹಿಸಿದ್ದರು. ಕಳೆದ ಎರಡ್ಮೂರು ತಿಂಗಳಿಂದ ಚನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದನಂತೆ. ಆದರೆ ಡಿಸೆಂಬರ್ 30 ರಂದು ವ್ಯಾಪಾರವಾಗಿದ್ದ 7 ಲಕ್ಷ ರೂಪಾಯಿ ಹಣವನ್ನು ಬ್ಯಾಂಕಿಗೆ ಹೋಗಿ ಕಟ್ಟಲು ವಿಕಾಸ್ ಜೈನ್ ಹೇಳಿದ್ದಾರೆ. ಇನ್ನೋರ್ವ ಕಾರ್ಮಿಕ ಇಮಾಮಸಾಬ್ ಬಿಂಕದಕಟ್ಟಿ ಹಾಗೂ ರಾಮಸಿಂಗ್ ರಜಪುತ ಇಬ್ಬರು ಸೇರಿಕೊಂಡು ಬೈಕ್‌ ಮೇಲೆ ಬ್ಯಾಂಕಿಗೆ ಬಂದಿದ್ದಾರೆ. ಗದಗ-ಪಾಲಾ ಬದಾಮಿ ರಸ್ತೆಯಲ್ಲಿರುವ ಎಕ್ಸಿಸ್ ಬ್ಯಾಂಕ್ ಬಳಿ ಬೈಕ್ ನಿಲ್ಲಿಸಿ, ಇಮಾಮಸಾಬ್ ಬಿಂಕದಕಟ್ಟಿ, ಬ್ಯಾಂಕ್ ಸ್ಟೆಂಟಮೆಂಟ್ ತರಲು ಒಳಗೆ ಹೋಗಿದ್ದಾನೆ. ಹೊರಗಡೆ ಬಂದು ನೋಡಿದರೆ ಏಳು ಲಕ್ಷ ರೂಪಾಯಿ ಹಣ ಹಾಗೂ ಬೈಕ್ ಸಮೇತವಾಗಿ ಪರಾರಿಯಾಗಿದ್ದಾನೆ. ಈ ಬಗ್ಗೆ ಮಾಲಿಕ ವಿಕಾಸ್ ಅವರಿಗೆ ಮಾಹಿತಿ ನೀಡಿದ್ದಾನೆ.

ಈತ ಹಣವನ್ನು ತೆಗೆದುಕೊಂಡು ಹೋದ ಮೇಲೆ ರಾಜಸ್ಥಾನ ರಾಜ್ಯದ, ಶಿವಾನಜಿ ಗ್ರಾಮದಲ್ಲಿ ವಾಸವಾಗಿರುವ ರಾಮಸಿಂಗ್ ರಜಪುತ ಅವರ ಪೋಷಕರೊಂದಿಗೆ ಫೋನ್ ನಲ್ಲಿ ಮಾತನಾಡಿದ್ದಾರೆ. ಆದರೆ ರಾಮಸಿಂಗ್ ಪೋಷಕರು ಇಲ್ಲಿಗೆ ಬಂದಿಲ್ಲಾ ಎಂದು ಹೇಳಿದ್ದಾರೆ. ವಿಶ್ವಾಸದಿಂದ ಆತ ಬರುತ್ತಾನೆ ಎಂದು ಸ್ವಲ್ಪ ದಿನ ಕಾದು ನೋಡಿದ್ದಾರೆ. ಯಾವಾಗ ಆತ ಬರುವ ಲಕ್ಷಣಗಳು ಕಾಣಲಿಲ್ಲವೋ ಆಗ ಗದಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಾಗಲಕೋಟೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಬಾಗಲಕೋಟೆ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ‌ 137 ಏರಿಕೆಯಾಗಿದೆ.…

ಲಕ್ಷ್ಮೇಶ್ವರ: ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯ

ಲಕ್ಷ್ಮೇಶ್ವರ: ಪಟ್ಟಣದ ಕರೇಗೋರಿ ಆಶ್ರಯ ಕಾಲೊನಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ…

ಗದಗ ಜಿಲ್ಲೆಯ 15 ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 15 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.