ರೋಣ: ಪುರಸಭೆ ಅಧ್ಯಕ್ಷೆ ವಿದ್ಯಾಶ್ರೀ ದೊಡ್ಡಮನಿ ಹಾಗೂ ಉಪಾಧ್ಯಕ್ಷ ಮಿಥುನ್ ಜಿ ಪಾಟೀಲ ಒಂದು ಮತ್ತು ಇಪತ್ಮೂರನೇ ವಾರ್ಡಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು.
ಸಮಸ್ಯೆಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿ ವಾರ್ಡ ಸದಸ್ಯ ಮಲ್ಲಯ್ಯ ಮಹಾಪುರಷಮಠ ಅವರೊಂದಿಗೆ ಚೆರ್ಚಿಸಿದರು. ಈ ವೇಳೆ ಸ್ಥಳೀಯರ ಅಹವಾಲುಗಳಿಗೆ ಸಂಬಂಧಿಸಿದಂತೆ ಶೀಘ್ರ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಉಪಾಧ್ಯಕ್ಷ ಮಿಥುನ್ ಜಿ ಪಾಟೀಲ, ಪಟ್ಟಣದ ಅಭಿವೃದ್ಧಿಗೆ ಸದಾ ಶ್ರಮಿಸುತ್ತೇವೆ. ಸ್ಥಳೀಯವಾಗಿ ಇರುವ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಹೇಳಿದರು.
ಈ ವೇಳೆ ಸ್ಥಳೀಯರ ಸಮಸ್ಯೆ ಪರಿಹರಿಸುವಂತೆ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಭಾವಸಾಬ ಬೆಟಗೇರಿ, ಹನಮಂತ, ಸಂಜಯ ದೊಡ್ಡಮನಿ ಇನ್ನಿತರರು ಉಪಸ್ಥಿತರಿದ್ದರು.