ಕಾರ್ಮಿಕರಿಗೆ ಆಹಾರ ಸಾಮಗ್ರಿ ವಿತರಣೆ

ಲಕ್ಷ್ಮೇಶ್ವರ: ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ ಆಹಾರ ಸಾಮಗ್ರಿಗಳ ಕಿಟ್‍ಗಳನ್ನು ಶಾಸಕ ರಾಮಣ್ಣ ಲಮಾಣಿ ಸಮೀಪದ ಕುಂದ್ರಳ್ಳಿ ತಾಂಡಾದಲ್ಲಿ ವಿತರಿಸಿದರು.

ಈ ವೇಳೆ ಮಾತನಾಡಿದ ಶಾಸಕ ರಾಮಣ್ಣ ಲಮಾಣಿ, ಲಾಕ್‍ಡೌನ್ ಸಮಯದಲ್ಲಿ ಬಡ ಕಾರ್ಮಿಕರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅವರ ತೊಂದರೆಗೆ ಸ್ಪಂದಿಸಿ, ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ಆಹಾರ ಸಾಮಗ್ರಿಗಳ ಕಿಟ್ ವಿತರಿಸುತ್ತಿದೆ ಎಂದರು. 130 ಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು.

ತಾಲ್ಲೂಕು ಕಾರ್ಮಿಕ ಇಲಾಖೆ ನಿರೀಕ್ಷಕಿ ಅನುರಾಧ, ಶಿರಹಟ್ಟಿ ಮಂಡಲದ ಬಿಜೆಪಿ ಘಟಕದ ಅಧ್ಯಕ್ಷ ಫಕ್ಕೀರೇಶ ರಟ್ಟಿಹಳ್ಳಿ, ಪ್ರಧಾನ ಕಾರ್ಯದರ್ಶಿ ಗಂಗಾಧರ ಮೆಣಸಿನಕಾಯಿ, ಹಾಲಪ್ಪ ಸೂರಣಗಿ, ಬಸವರಾಜ ಲಮಾಣಿ, ಕೇಶವ ಲಮಾಣಿ, ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ರಮೇಶ ಗುಡಿಮನಿ, ಗೋಪಾಲ ಲಮಾಣಿ, ಆನಂದ ಲಮಾಣಿ, ಅರ್ಜುನ ಇದ್ದರು.

Exit mobile version