ಲಕ್ಷ್ಮೇಶ್ವರ: ಕೆಲಸ ಇಲ್ಲದೆ ಹಳ್ಳಿ ಜನ ಉದ್ಯೋಗ ಅರಸಿ ಗುಳೆ ಹೋಗಬಾರದು ಎಂಬ ಉದ್ದೇಶದಿಂದ ನರೇಗಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಲ್ಲಿ ಪುರುಷರು ಮತ್ತು ಮಹಿಳೆಯರು ಇಬ್ಬರಿಗೂ ಸಮಾನ ವೇತನ ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್‍ನ ಉಪಕಾರ್ಯದರ್ಶಿ ಬಿ.ಕಲ್ಲೇಶ ಹೇಳಿದರು.

ನರೇಗಾ ಯೋಜನೆಯಡಿ ಸಮೀಪದ ಅಮರಾಪುರದಲ್ಲಿ ನಡೆದಿರುವ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.

ಯೋಜನೆಯಡಿ ಗ್ರಾಮಸ್ಥರು ಊರಿಗೆ ಉಪಯುಕ್ತವಾದ ರಸ್ತೆ, ಕೆರೆ ನಿರ್ಮಾಣ ಮತ್ತು ಹೂಳೆತ್ತುವುದು, ಬದು ನಿರ್ಮಾಣ ಮಾಡಿಕೊಳ್ಳಲು ಅವಕಾಶ ಇದೆ. ಆದ್ದರಿಂದ ಕಾರ್ಮಿಕರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.

ಊರಿನ ಕೆರೆಗಳು ತುಂಬಿದರೆ ಗ್ರಾಮಸ್ಥರಿಗೆ ಬಹಳಷ್ಟು ಅನುಕೂಲ ವಾಗುತ್ತದೆ. ಈ ನಿಟ್ಟಿನಲ್ಲಿ ಯೋಜನೆಯಡಿ ಕೆರೆಗಳ ಹೂಳೆತ್ತಲು ಹೆಚ್ಚು ಮಹತ್ವ ನೀಡಲಾಗಿದೆ ಎಂದರು.

ತಾಲ್ಲೂಕು ಪಂಚಾಯತ್‍ನ ಸಹಾಯಕ ನಿರ್ದೇಶಕ ಶಿವಕುಮಾರ ವಾಲಿ ಮಾತನಾಡಿ, ತಾಲ್ಲೂಕಿನ 14 ಗ್ರಾಮ ಪಂಚಾಯ್ತಿಗಳಲ್ಲಿ ಒಟ್ಟು 14,904 ಜಾಬ್‍ಕಾರ್ಡ್ ಇವೆ. ಈಗಾಗಲೇ ಉದ್ಯೋಗ ಖಾತ್ರಿ ಕೆಲಸಗಳನ್ನು ಆರಂಭಿಸಲಾಗಿದೆ. ದೊಡ್ಡೂರು, ಹರದಗಟ್ಟಿ, ಅಮರಾಪುರಗಳಲ್ಲಿ ನಿತ್ಯ ನೂರಾರು ಜನ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.

ಪಂಚಾಯ್ತಿ ಕಾರ್ಯದರ್ಶಿ ಎಸ್.ಬಿ. ವಡಕನಗೌಡ್ರ, ನರೇಗಾ ಎಂಜಿನಿಯರ್ ನಿಂಗರಾಜ ಅರಿಷಣದ, ಶಿಲ್ಪಾ ಲಮಾಣಿ, ಫಕ್ಕೀರೇಶ ಮಾಗಡಿ, ಎಂ.ಜೆ.ಸಾಸಲವಾಡ, ಬಸಪ್ಪ ತಳವಾರ ಇದ್ದರು.

Leave a Reply

Your email address will not be published. Required fields are marked *

You May Also Like

ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ರೈಲು ಪ್ರಾರಂಭಕ್ಕೆ ಬ್ಯಾಳಿ ಒತ್ತಾಯ

ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು

ಪಾಕ್‍ನಲ್ಲಿ ಬಸ್-ರೈಲು ಢಿಕ್ಕಿ 19 ಸಿಖ್ ಯಾತ್ರಾರ್ಥಿಗಳ ಸಾವು

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರೈಲು-ಬಸ್ ಢಿಕ್ಕಿಯಿಂದ 19 ಸಿಖ್ ಯಾತ್ರಾರ್ಥಿಗಳು ಮೃತಪಟ್ಟು…

ಗದಗ ಕ ಸಾ ಪ ಚುಣಾವಣೆಯ ವಿವರ : ಅಧ್ಯಕ್ಷರಾಗಿ ವಿವೇಕಾನಂದಗೌಡ ಪಾಟೀಲ

ಈ ಚುಣಾವಣಾ ಸ್ಪರ್ಧೆಯಲ್ಲಿ ಇದೆ ಮೊದಲ ಬಾರಿಗೆ ಒಟ್ಟು 2231 ಮತಗಳನ್ನು ಪಡೆಯುವದರ ಮುಲಕ ಗದಗ ಜಿಲ್ಲೆಯ ನರಗುಂದ, ನರೇಗಲ್ , ಲಕ್ಷ್ಮೇಶ್ವರ, ರೋಣ, ಗಜೇಂದ್ರಗಡ, ಮುಂಡರಗಿಯಲ್ಲಿ ಕೊನೆಯ ಹಂತದವರೆಗೂ ಮುನ್ನಡೆ ಕಾಯ್ದುಕೊಂಡಿದ್ದ  ವಿವೇಕಾನಂದಗೌಡ  ಪಾಟೀಲರು, ಹೊಳೆಆಲೂರ, ಶಿರಹಟ್ಟಿಯಲ್ಲಿ ಅಲ್ಪ ಹಿನ್ನಡೆ ಅನುಭವಿಸಿ, ಕ ಸಾ ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.