ಲಕ್ಷ್ಮೇಶ್ವರ: ಕೆಲಸ ಇಲ್ಲದೆ ಹಳ್ಳಿ ಜನ ಉದ್ಯೋಗ ಅರಸಿ ಗುಳೆ ಹೋಗಬಾರದು ಎಂಬ ಉದ್ದೇಶದಿಂದ ನರೇಗಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಲ್ಲಿ ಪುರುಷರು ಮತ್ತು ಮಹಿಳೆಯರು ಇಬ್ಬರಿಗೂ ಸಮಾನ ವೇತನ ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್‍ನ ಉಪಕಾರ್ಯದರ್ಶಿ ಬಿ.ಕಲ್ಲೇಶ ಹೇಳಿದರು.

ನರೇಗಾ ಯೋಜನೆಯಡಿ ಸಮೀಪದ ಅಮರಾಪುರದಲ್ಲಿ ನಡೆದಿರುವ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.

ಯೋಜನೆಯಡಿ ಗ್ರಾಮಸ್ಥರು ಊರಿಗೆ ಉಪಯುಕ್ತವಾದ ರಸ್ತೆ, ಕೆರೆ ನಿರ್ಮಾಣ ಮತ್ತು ಹೂಳೆತ್ತುವುದು, ಬದು ನಿರ್ಮಾಣ ಮಾಡಿಕೊಳ್ಳಲು ಅವಕಾಶ ಇದೆ. ಆದ್ದರಿಂದ ಕಾರ್ಮಿಕರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.

ಊರಿನ ಕೆರೆಗಳು ತುಂಬಿದರೆ ಗ್ರಾಮಸ್ಥರಿಗೆ ಬಹಳಷ್ಟು ಅನುಕೂಲ ವಾಗುತ್ತದೆ. ಈ ನಿಟ್ಟಿನಲ್ಲಿ ಯೋಜನೆಯಡಿ ಕೆರೆಗಳ ಹೂಳೆತ್ತಲು ಹೆಚ್ಚು ಮಹತ್ವ ನೀಡಲಾಗಿದೆ ಎಂದರು.

ತಾಲ್ಲೂಕು ಪಂಚಾಯತ್‍ನ ಸಹಾಯಕ ನಿರ್ದೇಶಕ ಶಿವಕುಮಾರ ವಾಲಿ ಮಾತನಾಡಿ, ತಾಲ್ಲೂಕಿನ 14 ಗ್ರಾಮ ಪಂಚಾಯ್ತಿಗಳಲ್ಲಿ ಒಟ್ಟು 14,904 ಜಾಬ್‍ಕಾರ್ಡ್ ಇವೆ. ಈಗಾಗಲೇ ಉದ್ಯೋಗ ಖಾತ್ರಿ ಕೆಲಸಗಳನ್ನು ಆರಂಭಿಸಲಾಗಿದೆ. ದೊಡ್ಡೂರು, ಹರದಗಟ್ಟಿ, ಅಮರಾಪುರಗಳಲ್ಲಿ ನಿತ್ಯ ನೂರಾರು ಜನ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.

ಪಂಚಾಯ್ತಿ ಕಾರ್ಯದರ್ಶಿ ಎಸ್.ಬಿ. ವಡಕನಗೌಡ್ರ, ನರೇಗಾ ಎಂಜಿನಿಯರ್ ನಿಂಗರಾಜ ಅರಿಷಣದ, ಶಿಲ್ಪಾ ಲಮಾಣಿ, ಫಕ್ಕೀರೇಶ ಮಾಗಡಿ, ಎಂ.ಜೆ.ಸಾಸಲವಾಡ, ಬಸಪ್ಪ ತಳವಾರ ಇದ್ದರು.

Leave a Reply

Your email address will not be published. Required fields are marked *

You May Also Like

ಜನಪದ ಜನರ ಜೀವನಾಡಿ; ಜನಪದ ಕಲಾವಿದರಿಗೆ ಹೆಚ್ಚಿನ ಗೌರವಗಳು ಸಿಗಬೇಕು: ರವಿಕಾಂತ ಅಂಗಡಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಗದಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ,…

ಸೂರ್ಯ ನಮಸ್ಕಾರವೇ ಜೀವನ ಶಕ್ತಿಯ ಆಧಾರ

ಮುಳಗುಂದ : ಸಮೀಪದ ಸೊರಟೂರ ಗ್ರಾಮದ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಂಕ್ರಾಂತಿಯ ದಿನ…

ಧಾರವಾಡ ವಿಧಾನ ಪರಿಷತ್ ಚುಣಾವಣೆ ; ಸಲೀಂ ಅಹ್ಮದ ಭರ್ಜರಿ ಜಯ

ಉತ್ತರಪ್ರಭ ಧಾರವಾಡ: ಇಂದು ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ…

ಪಕ್ಷದ ಸಿದ್ಧಾಂತ, ತತ್ವಗಳನ್ನು ಕಾರ್ಯಕರ್ತರು ಅರಿತುಕೊಳ್ಳಬೇಕು: ಸಂಕನೂರ್

ಭಿನ್ನತೆ ಹಾಗೂ ವೈಶಿಷ್ಟ್ಯತೆಯಿಂದ ಕೂಡಿರುವ ಪಕ್ಷ ಬಿಜೆಪಿಯಾಗಿದೆ. ಪಕ್ಷದ ಸಿದ್ಧಾಂತ, ತತ್ವಗಳನ್ನು ಕಾರ್ಯಕರ್ತರಿಗೆ ತಿಳಿಸಿ ಅವರಲ್ಲಿ ನಾಯಕತ್ವದ ಗುಣ ಬೆಳೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ್ ಹೇಳಿದರು.