ಮುಳಗುಂದ: ರೈತ ಸೋಮಣ್ಣ ಸುಂಕದ ಅವರ ಮನೆಯ ಬಾಗಿಲ ಲಾಕ್ ಮುರಿದು ಒಳ ನುಗ್ಗಿದ್ದ ಕಳ್ಳರು ತೀಜೊರಿಯಲ್ಲಿಟ್ಟ 1.40 ಲಕ್ಷ ರೂ ನಗದನ್ನು ದೋಚಿಕೊಂಡು ಪರಾರಿಯಾದ ಘಟನೆ ಪಟ್ಟಣದ ತಿಗಡಿಕೇರಿ ಓಣಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಕಳೆದ ವರ್ಷ ಬೆಳೆದಿದ್ದ ಶೇಂಗಾ ಬೆಳೆ ಮಾರಿ ಬಂದ ಹಣವನ್ನ ಇಟ್ಟುಕೊಂಡಿದ್ದರು. ಸ್ಥಳಕ್ಕೆ ಪಿಎಸ್ಐ ಸಚಿನ ಅಲಮೇಲಕರ, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿದರು. ಕಳ್ಳರ ಪತ್ತೆಗೆ ಶೋಧ ಮುಂದುವರೆದಿದೆ. ಈ ಕುರಿತು ಮುಳಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.