ಬೆಂಗಳೂರು : ಕೊರೊನಾ ಮಹಾಮಾರಿ ಜನರ ಬದುಕಿನ ಮೇಲೆ ಬರೆ ಎಳೆದು ಬಿಟ್ಟಿದೆ. ಈ ನಿಟ್ಟಿನಲ್ಲಿ ನಿರುದ್ಯೋಗಿಗಳಿಗೆ ಸರ್ಕಾರ ಸಹಾಯ ಹಸ್ತ ಚಾಚಿದ್ದು, ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡುತ್ತಿದೆ.


ಹೊಸ ಉದ್ಯೋಗಗಳಿಗೆ ಸಹಾಯವಾಗಲಿ ಎಂಬ ನಿಟ್ಟಿನಲ್ಲಿ ಸರ್ಕಾರ ಬೈಕ್ ಖರೀದಿಗೆ ಸಹಾಯ ಮಾಡಲು ಮುಂದಾಗಿದೆ.
ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಈ ಅವಕಾಶ ಕಲ್ಪಿಸುತ್ತಿದೆ. ಅಲ್ಲದೇ, ಹಲವು ಯುವಕರು ಈಗಾಗಲೇ ಅರ್ಜಿಗಳನ್ನು ಕೂಡ ಸಲ್ಲಿಸಿದ್ದಾರೆ. ಸದ್ಯ ರಾಜ್ಯದಾದ್ಯಂತ ಸುಮಾರು 700 ಜನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು. ಹಿಂದುಳಿದ ವರ್ಗಗಳಿಗೆ ಅಂದರೆ ಕೆಟಗರಿ 1, 2, 2ಎ, 3ಎ, 3ಬಿಗೆ ಒಳಪಟ್ಟಿರುವ ಕನಿಷ್ಠ 18 ರಿಂದ 55 ವರ್ಷ ವಯಸ್ಸಿನೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಆದರೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಹಿಂದೆ ಯಾವುದೇ ಬೈಕ್ ಖರೀದಿಸಿರಬಾರದು.
ನಿರುದ್ಯೋಗವನ್ನು ಹೊಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆಗೆ ಮುಂದಾಗಿದೆ. ಅಲ್ಲದೇ, ಬೈಕ್ ನ ಲೋನ್ ಸಂಪೂರ್ಣವಾಗಿ ಮುಟ್ಟುವವರೆಗೂ ನಿಗಮದ ಹೆಸರಿನಲ್ಲಿಯೇ ಬೈಕ್ ಇರಲಿದೆ. ಆನ್ ಲೈನ್ ಡೆಲಿವರಿ ಕೆಲಸದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಮಹಿಳೆಯರೂ ಈ ಲಾಭವನ್ನು ಪಡೆಯಬಹುದು.

Leave a Reply

Your email address will not be published. Required fields are marked *

You May Also Like

ಮಸ್ಕಿ: ನ.30 ರಂದು ಗ್ರಾಮ ಸ್ವರಾಜ್ಯ ಸಮಾವೇಶ

ಕ್ಷೇತ್ರದ ಬಿಜೆಪಿ ಪಕ್ಷದಿಂದ ನ.30ರಂದು ಪಟ್ಟಣದಲ್ಲಿ ಗ್ರಾಮ ಸ್ವರಾಜ್ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬರಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪಗೌಡ ನಕ್ಕಲದಿನ್ನಿ ಅವರು ಹೇಳಿದರು.

ನಗರ ಸಭೆ ಚುನಾವಣೆ: 6ನೇ ವಾರ್ಡನಲ್ಲಿ ಕಾಂಗ್ರೇಸಗೆ ಜಯ

ಗದಗ ಬೇಟಗೇರಿ:ನಗರ ಸಭೆ 6 ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 6ನೇ  ವಾರ್ಡನಲ್ಲಿ…

ಬಿಜೆಪಿಯಲ್ಲಿನ ರಾಜಕೀಯ ಮೇಲಾಟಕ್ಕೆ ಕಾರಣವಾಗುತ್ತಾ ಶೀಕರಣಿ ಊಟ!

ಎರಡ್ಮೂರು ದಿನಗಳಿಂದ ಈಗಾಗಲೇ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವದ ಪ್ರಶ್ನೆ ಎದುರಾಗಿದೆ. ಈಗಾಗಲೇ ಕೆಲವು ಅತೃಪ್ತ ಶಾಸಕರು ನೀಡುತ್ತಿರುವ ಹೇಳಿಕೆಯಿಂದಾಗಿ ಸದ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವಂತಿದೆ.