ಬೆಂಗಳೂರು : ಕೊರೊನಾ ಮಹಾಮಾರಿ ಜನರ ಬದುಕಿನ ಮೇಲೆ ಬರೆ ಎಳೆದು ಬಿಟ್ಟಿದೆ. ಈ ನಿಟ್ಟಿನಲ್ಲಿ ನಿರುದ್ಯೋಗಿಗಳಿಗೆ ಸರ್ಕಾರ ಸಹಾಯ ಹಸ್ತ ಚಾಚಿದ್ದು, ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡುತ್ತಿದೆ.


ಹೊಸ ಉದ್ಯೋಗಗಳಿಗೆ ಸಹಾಯವಾಗಲಿ ಎಂಬ ನಿಟ್ಟಿನಲ್ಲಿ ಸರ್ಕಾರ ಬೈಕ್ ಖರೀದಿಗೆ ಸಹಾಯ ಮಾಡಲು ಮುಂದಾಗಿದೆ.
ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಈ ಅವಕಾಶ ಕಲ್ಪಿಸುತ್ತಿದೆ. ಅಲ್ಲದೇ, ಹಲವು ಯುವಕರು ಈಗಾಗಲೇ ಅರ್ಜಿಗಳನ್ನು ಕೂಡ ಸಲ್ಲಿಸಿದ್ದಾರೆ. ಸದ್ಯ ರಾಜ್ಯದಾದ್ಯಂತ ಸುಮಾರು 700 ಜನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು. ಹಿಂದುಳಿದ ವರ್ಗಗಳಿಗೆ ಅಂದರೆ ಕೆಟಗರಿ 1, 2, 2ಎ, 3ಎ, 3ಬಿಗೆ ಒಳಪಟ್ಟಿರುವ ಕನಿಷ್ಠ 18 ರಿಂದ 55 ವರ್ಷ ವಯಸ್ಸಿನೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಆದರೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಹಿಂದೆ ಯಾವುದೇ ಬೈಕ್ ಖರೀದಿಸಿರಬಾರದು.
ನಿರುದ್ಯೋಗವನ್ನು ಹೊಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆಗೆ ಮುಂದಾಗಿದೆ. ಅಲ್ಲದೇ, ಬೈಕ್ ನ ಲೋನ್ ಸಂಪೂರ್ಣವಾಗಿ ಮುಟ್ಟುವವರೆಗೂ ನಿಗಮದ ಹೆಸರಿನಲ್ಲಿಯೇ ಬೈಕ್ ಇರಲಿದೆ. ಆನ್ ಲೈನ್ ಡೆಲಿವರಿ ಕೆಲಸದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಮಹಿಳೆಯರೂ ಈ ಲಾಭವನ್ನು ಪಡೆಯಬಹುದು.

Leave a Reply

Your email address will not be published. Required fields are marked *

You May Also Like

ಮಾಲ್, ಹೋಟೆಲ್ ಜೂ. 21 ರಿಂದ ತೆರೆಯಲು ತಾಂತ್ರಿಕ ಸಮಿತಿ ಸಲಹೆ ಒಪ್ಪಿಗೆ? ಸಲಹೆಗಳೇನ್ನು

ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಜನರು ಗುಂಪು ಗುಂಪು ಸೇರದಂತೆ ಮಾಲ್, ಹೋಟೆಲ್, ಇನ್ನಿತರ ಆರ್ಥಿಕ ಚಟುವಟಿಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಸಲಹೆ ನೀಡಿದೆ.

ರಾಜ್ಯ ಸರ್ಕಾರಕ್ಕೆ ವಿಪಕ್ಷಗಳ ಸಲಹೆ ಏನು ಗೊತ್ತಾ?

ಲಾಕ್ ಡೌನ್ ನಿಂದಾಗಿ ರಾಜ್ಯದ ಜನತೆ ಸಂಕಷ್ಟ ಎದುರಿಸುತ್ತಿದ್ದು, ಹೀಗಾಗಿ ರಾಜ್ಯಕ್ಕೆ ರೂ. 50,000ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ಒತ್ತಾಯಿಸಬೇಕು. ಕೊರೋನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಯ ಖರ್ಚು ವೆಚ್ಚದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

ಬುಲೆಟ್ ಕೊಟ್ರ ತಾಳಿ ಕಟ್ತಿನಿ ಅಂತ ಪಟ್ಟು ಹಿಡಿದ ವರನಿಗೆ ಏನಾತು ನೋಡ್ರಿ.

ಉತ್ತರಪ್ರದೇಶ್: ಪ್ರತಿಯೊಬ್ಬ ಹೆಣ್ ಮಕ್ಕಳು ಮನ್ಯಾಗ್ ತಂದಿ-ತಾಯಿ ಸಾಲಾಸೂಲಾ ಮಾಡಿ ಮದ್ವಿ ಮಾಡಿ, ಅಳಿಯಾ ಕೇಳೋವಷ್ಟು ವರದಕ್ಷಿಣೆ ಕೊಟ್ಟು ಮಗಳನ್ ಗಂನ್ ಮನಿಗೆ ಕಳಿಸಬೇಕು ಅನ್ನೋವಷ್ಟರಲ್ಲಿ ಹೈರಾಣಾಗಿ ಹೋಗುತ್ತ. ಷ್ ಅಪ್ಪಾ ಅಂತ ಮಗಳ್ ಮದ್ವಿ ಆದ್ರ ಸಾಕು ತಂದಿ-ತಾಯಿ ನಿಟ್ಟುಸಿರು ಬಿಡ್ತಾರಾ? ಆದರೆ ಇಲ್ಲೊಬ್ಬ ಹುಡುಗಿ ವರದಕ್ಷಣಿ ಅಂತ ನಂಗ್ ಬುಲೇಟ್ ಬೇಕಾಬೇಕು ಅಂತ ಪಟ್ಟು ಹಿಡಿದ ವರನಿಗೆ ತಕ್ಕ ಪಾಠಾ ಕಲಿಸ್ಯಾಳ.

ನಟ ಚಿರು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಹಿನ್ನಲೆಯಲ್ಲಿ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.