ಗದಗ: ಹಣ ಡ್ರಾ ಮಾಡಿಕೊಡುವಂತೆ ಬ್ಯಾಂಕ್ ಮ್ಯಾನೇಜರ್ ಒಬ್ಬರ ಮನೆಗೆ ನುಗ್ಗಿದ ಇಬ್ಬರು ಮ್ಯಾನೇಜರ್ ಮೇಲೆ ದರ್ಪ ತೋರಿದ ಘಟನೆ ಬಾಲೆಹೊಸೂರು ಗ್ರಾಮದಲ್ಲಿ ನಡೆದಿತ್ತು.

ಇಲ್ಲಿನ ಕೆವಿಜಿ(ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್) ವ್ಯವಸ್ಥಾಪಕ ಹನಮಂತಪ್ಪ ಅವರ ಮನೆಗೆ ‌ನುಗ್ಗಿದ ನಾಗರಾಜ್ ಚಿಗರಿ ಹಾಗೂ ನವೀನಕುಮಾರ ಕಡೆಮನಿ ಹಣ ಡ್ರಾ ಮಾಡಿಕೊಡುವಂತೆ ಬೆದರಿಕೆ ಹಾಕಿದ್ದಾರಂತೆ. ಜ.15 ರಂದು ಈ ಘಟನೆ ನಡೆದಿತ್ತು. ಈ ಬಗ್ಗೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ವ್ಯವಸ್ಥಾಪಕ ಹನಮಂತಪ್ಪ ದೂರು ಕೂಡ ದಾಖಲಿಸಿದ್ದರು. ಆದರೆ ಬೇಲ್ ಮೇಲೆ ಹೊರಬಂದ ಆರೋಪಿ ನವೀನಕುಮಾರ ಕಡೆಮನಿ ಮತ್ತೆ ಬ್ಯಾಂಕಿಗೆ ನುಗ್ಗಿ ಮ್ಯಾನೇಜರ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.

ಈ ವೇಳೆ ಸಿಬ್ಬಂದಿಗಳು ಜಗಳ ಬಿಡಿಸಲು ಮುಂದಾದಾಗ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇನ್ನು ಈ ವೇಳೆ ಮ್ಯಾನೇಜರ್ ಇದ್ದ ಕಡೆ ಕುರ್ಚಿ ಎತ್ತಿ ಹಾಕಿದ್ದರಿಂದ ಬ್ಯಾಂಕ್ ನ ಗಾಜುಗಳು ಪುಡಿಯಾದವು. ಅಷ್ಟಕ್ಕೇ ಸುಮ್ಮನಾಗದ ಆರೋಪಿ‌ ನವೀನಕುಮಾರ, ಖಾತೆಯಲ್ಲಿನ ಹಣ ಈಗಲೇ ಡ್ರಾ ಮಾಡಿಕೊಡುವಂತೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮ್ಯಾನೇಜರ್ ಹನುಮಂತಪ್ಪ ಅವರ ದೂರಿನ ಅನ್ವಯ ಆರೋಪಿ ನವೀನಕುಮಾರನನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ರೋಣದಲ್ಲಿ ಸ್ವಚ್ಛತಾ ದಿನಾಚರಣೆ ಹಾಗು ಮಾಸ್ಕ್ ವಿತರಣೆ

ರೋಣ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ದಿನಾಚರಣೆ ಹಾಗೂ ಮಾಸ್ಕ ವಿತರಣೆ ಕುರಿತು ಕಾನೂನು ಶಿಬಿರ ಕಾರ್ಯಕ್ರಮ ಜರುಗಿತು.

ಜಿಲೆಟಿನ್‌ ಸ್ಫೋಟ ದುರಂತ: ಗ್ರಾಮಸ್ಥರಿಂದ ಆಕ್ರೋಶ

ಜಿಲ್ಲೆಯ ಹುಣಸೋಡು ಅಕ್ರಮ ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೆಟಿನ್‌ ಸ್ಪೋಟಗೊಂಡ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟಗೊಂಡಿದೆ.

ನರೇಗಾ : ಗದಗ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆವ್ಹಾನ

ಗದಗ: ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ, ಗದಗ ಜಿಲ್ಲಾ ಪಂಚಾಯತಿ ಗಜೇಂದ್ರಗಡ, ಲಕ್ಷ್ಮೇಶ್ವರ ತಾಲೂಕು ಪಂಚಾಯತಿಗಳಲ್ಲಿನ…

ಗದಗ ಜಿಪಂ ಅಧ್ಯಕ್ಷರಾಗಿ ರಾಜೂಗೌಡ ಪಾಟೀಲ್ ಅವಿರೋಧ ಆಯ್ಕೆ

ಗದಗ: ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾಗಿ ರಾಜೂಗೌಡ ಕೆಂಚನಗೌಡ್ರ (ಪಾಟೀಲ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿ.ಪಂ.…