ಗದಗ: ಹಣ ಡ್ರಾ ಮಾಡಿಕೊಡುವಂತೆ ಬ್ಯಾಂಕ್ ಮ್ಯಾನೇಜರ್ ಒಬ್ಬರ ಮನೆಗೆ ನುಗ್ಗಿದ ಇಬ್ಬರು ಮ್ಯಾನೇಜರ್ ಮೇಲೆ ದರ್ಪ ತೋರಿದ ಘಟನೆ ಬಾಲೆಹೊಸೂರು ಗ್ರಾಮದಲ್ಲಿ ನಡೆದಿತ್ತು.

ಇಲ್ಲಿನ ಕೆವಿಜಿ(ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್) ವ್ಯವಸ್ಥಾಪಕ ಹನಮಂತಪ್ಪ ಅವರ ಮನೆಗೆ ‌ನುಗ್ಗಿದ ನಾಗರಾಜ್ ಚಿಗರಿ ಹಾಗೂ ನವೀನಕುಮಾರ ಕಡೆಮನಿ ಹಣ ಡ್ರಾ ಮಾಡಿಕೊಡುವಂತೆ ಬೆದರಿಕೆ ಹಾಕಿದ್ದಾರಂತೆ. ಜ.15 ರಂದು ಈ ಘಟನೆ ನಡೆದಿತ್ತು. ಈ ಬಗ್ಗೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ವ್ಯವಸ್ಥಾಪಕ ಹನಮಂತಪ್ಪ ದೂರು ಕೂಡ ದಾಖಲಿಸಿದ್ದರು. ಆದರೆ ಬೇಲ್ ಮೇಲೆ ಹೊರಬಂದ ಆರೋಪಿ ನವೀನಕುಮಾರ ಕಡೆಮನಿ ಮತ್ತೆ ಬ್ಯಾಂಕಿಗೆ ನುಗ್ಗಿ ಮ್ಯಾನೇಜರ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.

ಈ ವೇಳೆ ಸಿಬ್ಬಂದಿಗಳು ಜಗಳ ಬಿಡಿಸಲು ಮುಂದಾದಾಗ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇನ್ನು ಈ ವೇಳೆ ಮ್ಯಾನೇಜರ್ ಇದ್ದ ಕಡೆ ಕುರ್ಚಿ ಎತ್ತಿ ಹಾಕಿದ್ದರಿಂದ ಬ್ಯಾಂಕ್ ನ ಗಾಜುಗಳು ಪುಡಿಯಾದವು. ಅಷ್ಟಕ್ಕೇ ಸುಮ್ಮನಾಗದ ಆರೋಪಿ‌ ನವೀನಕುಮಾರ, ಖಾತೆಯಲ್ಲಿನ ಹಣ ಈಗಲೇ ಡ್ರಾ ಮಾಡಿಕೊಡುವಂತೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮ್ಯಾನೇಜರ್ ಹನುಮಂತಪ್ಪ ಅವರ ದೂರಿನ ಅನ್ವಯ ಆರೋಪಿ ನವೀನಕುಮಾರನನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಳ್ಳಿನ ಮೇಲೆ ಬಟ್ಟೆ ಹಾಕಿ ತಪ್ಪು ಮಾಡಿದೆ – ಕುಮಾರಸ್ವಾಮಿ!

ರಾಮನಗರ : ನಾನು ಮುಳ್ಳಿನ ಮೇಲೆ ಬಟ್ಟೆ ಹಾಕಿ ದೊಡ್ಡ ತಪ್ಪು ಮಾಡಿದೆ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕ ಪ್ರವಾಹದ ಕುರಿತು ಪ್ರಧಾನಿಯೊಂದಿಗೆ ಚರ್ಚೆ ಮಾಡಿದ್ದೇನೆ – ಸಿಎಂ!

ಶಿವಮೊಗ್ಗ : ಉತ್ತರ ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಪ್ರವಾಹದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾದಿಂದಾಗಿ ಮಲೆ ಮಹದೇಶ್ವರನಿಗೆ ಎಷ್ಟು ನಷ್ಟವಾಗಿದೆ ಗೊತ್ತಾ?

ಹುಂಡಿಯೊಂದರಲ್ಲಿಯೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿ ಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ.