ಕಲಬುರಗಿ: ಪಡಿತರ ಚೀಟಿದಾರರಿಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಗಿ, ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ತಿಳಿಸಿದ್ದಾರೆ.
ಏಪ್ರಿಲ್ 1 ರಿಂದಲೇ ನ್ಯಾಯಬೆಲೆ ಅಂಗಡಿಗಳ ಮೂಲಕ ಈ ಆಹಾರ ಧಾನ್ಯಗಳ ವಿತರಣೆ ಮಾಡಲು ಚಿಂತನೆ ನಡೆದಿದ್ದು, ಆಯಾ ಭಾಗದಲ್ಲಿನ ಬೆಳೆಗಳನ್ನು ಖರೀದಿಸುವ ಮೂಲಕ ಆಯಾ ಭಾಗದ ಆಹಾರಧಾನ್ಯಗಳನ್ನು ಪಡಿತರ ಫಲಾನುಭವಿಗಳಿಗೆ ವಿತರಿಸುವ ಉದ್ದೇಶ ಸರ್ಕಾರದ್ದಾಗಿದೆ.
