ನರೆಗಲ್: ಯಾವ ಮಕ್ಕಳು ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸರಕಾರ ಶಾಲೆಗಳಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಇದನ್ನು ಉಪಯೋಗ ಪಡಿಸಿಕೊಂಡು ಶಿಕ್ಷಣ ಪಡೆದು ಶಿಕ್ಷಣವಂತರಾಗಬೇಕು ಎಂದು ಮಹಾಂತೇಶ ಜಕ್ಕಲಿ ಹೇಳಿದರು.

ಅವರು ಸಮೀಪದ ಕೋಟುಮಚಗಿ ಗ್ರಾಮದ ಸರಕಾರಿ ಮಾದರಿಯ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ 72 ನೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹತ್ತು ಸಾವಿರ ರೂಪಾಯಿ ನಗದು ಹಾಗೂ ಒಂದು ಕಟ್ಟಿಗೆಯ ಕಪಾಟು ದೇಣಿಗೆ ನೀಡುವುದರ ಮೂಲಕ ಶಾಲಾ ಅಭಿವೃದ್ಧಿಗೆ ಆರ್ಥಿಕ ಸಹಾಯ ನೀಡಿ ಮಾತನಾಡಿದರು.

ಇದೇ ವೇಳೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಗದಗ ಗ್ರಾಮೀಣ ವಿಭಾಗಕ್ಕೆ ನಿರ್ದೇಶಕರಾಗಿ ಆಯ್ಕೆಯಾಗಿರುವ ಶಿಕ್ಷಕ ಎಸ್.ಪಿ.ಕೊಪ್ಪದ ಇವರಿಗೂ ಸನ್ಮಾನಿಸಲಾಯಿತು.

ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಮೇಶ್ ದೇವಪ್ಪ ಹಕ್ಕಿ ಧ್ವಜಾರೋಹಣ ನೆರವೇರಿಸಿದರು.

ಈ ಸಮಯದಲ್ಲಿ ಕೋಟುಮಚಗಿ ಗ್ರಾಮ ಪಂಚಾಯತಿಯ ನೂತನ ಸದಸ್ಯರಾದ ಅಕ್ಬರ್ ಸಾಬ್ ನಾಗರಾಳ, ಮಹಾದೇವಪ್ಪ ಬ್ಯಾಹಟ್ಟಿ, ಶರಣಪ್ಪ ಮನೋಹರ್, ರವಿ ಮ್ಯಾಗೇರಿ, ಮಲ್ಲಿಕಾರ್ಜುನ ಗೋಧಿ, ಜೀವನಸಾಬ ಮಾಬುಸಾಬ ಸರಕವಾಸ, ಅಕ್ಷಯ ಅತ್ತಾರ, ಸುಭಾಸ ಅಬ್ಬಿಗೇರಿ, ರಮಜಾನಬಿ ಅತ್ತಾರ, ಬಸಮ್ಮ ತೋಟಪ್ಪ ನವಲಿ, ಶರಣಮ್ಮ ಶರಣಪ್ಪ ಕಾಡರ, ಯಲ್ಲವ್ವ ಮಹೇಶ ನೀರಲಗಿ, ಸುವರ್ಣ ನೀಲನಗೌಡ ಸಂಕನಗೌಡರ, ಮಾಳವ್ವ ಶಿವಪ್ಪ ಅಲ್ಲಾಪುರ, ಬಸವಣ್ಣೆವ್ವ ಸಕ್ರಪ್ಪ ತಳವಾರ, ಶೈನಾಜಬಿ ಬೂದಿಹಾಳ ಎಸ್ಡಿಎಂಸಿ ಉಪಾಧ್ಯಕ್ಷೆ ಶಿವಲೀಲಾ ತಳವಾರ, ಉರ್ದು ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಚಮನಸಾಬ ಹಿರೇಹಾಳ, ಗ್ರಾಮದ ಹಿರಿಯರಾದ ಮಲ್ಲಿಕಾರ್ಜುನ ಗುರುಸಿದ್ದಪ್ಪ ಅಣ್ಣಿಗೇರಿ, ವೀರೇಶ ನೇಗಿಲಿ, ಶಿವಪ್ಪ ಅಬ್ಬಿಗೇರಿ, ಕೋಟುಮಚಗಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಡಿ.ಎಸ್.ಕಳಕಣ್ಣವರ ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಕೋವಿಡ್ ಲಸಿಕೆ ಪಡೆದ ಜಿ.ಎಸ್.ಪಾಟೀಲ

ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು.

ದಾವಣಗೆರೆಯಲ್ಲಿ ಕೊರೋನಾ ಸೋಂಕು ಸೆಂಚೂರಿ..!

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 100 ಗಡಿ ದಾಟಿದೆ. ಇವತ್ತು ಒಂದೇ ದಿನ 19 ಪಾಸಿಟೀವ್ ಪ್ರಕರಣ ಪತ್ತೆಯಾಗಿದ್ದು, ಇದರಿಂದ ದಾವಣಗೆರೆಯಲ್ಲಿ ಸೋಂಕಿತರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಚೆಲ್ಲುಭತ್ತ ನಿಧಾನಕ್ಕೆ ಕಾಲೂರಿದೆ

ದಾವಣಗೆರೆ ಮತ್ತು ಹೊನ್ನಾಳಿ ತಾಲ್ಲೂಕುಗಳಲ್ಲಿ ನಾಟಿಭತ್ತಕ್ಕಿಂತ ಚೆಲ್ಲುಭತ್ತಕ್ಕೆ ರೈತರು ಪ್ರಾಮುಖ್ಯ ನೀಡುತ್ತಿದ್ದು, ಕಡಿಮೆ ವೆಚ್ಚ, ಸುಲಭ ಕೃಷಿಗೆ ಹೇಳಿ ಮಾಡಿಸಿದಂತಿರುವ ಚೆಲ್ಲುಭತ್ತ ಪದ್ಧತಿ ಜಿಲ್ಲೆಯಲ್ಲಿ ನಿಧಾನಕ್ಕೆ ಕಾಲೂರುತ್ತಿದೆ.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕೆ ಸಮೀಕ್ಷೆ ವರದಿ ಜಾರಿಗೊಳಿಸಿ: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.