ಗದಗ: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಜಿಲ್ಲಾ ಹೆದ್ದಾರಿಯಿಂದ ರಾಜ್ಯ ಹೆದ್ದಾರಿಯವರೆಗೆ ಮೇಲ್ದರ್ಜೆಗೆ ಏರಿಸಲು ಮನವಿ ಮಾಡಿದ್ದು, ಜಿಲ್ಲಾ ಹೆದ್ದಾರಿಯಿಂದ ರಾಜ್ಯ ಹೆದ್ದಾರಿ ಮಾಡಲು ಪರಿವರ್ತನೆ ಮಾಡಲು ಸರ್ಕಾರಕ್ಕೆ ಮನವಿ ಮಡಿದ್ದೇವೆ ಎಂದು ಸಣ್ಣ ಕೈಗಾರಿಕಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಿ.ಸಿ.ಪಾಟೀಲ ಹೇಳಿದರು.

ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಸರ್ಕಾರ ಪ್ರಾರಂಭದಿAದಲೂ ಸಾಕಷ್ಟು ಪ್ರಕೃತಿಯ ವಿಕೋಪಗಳನ್ನು ಎದುರಿಸುತ್ತಿದೆ. ಪ್ರವಾಹದಲ್ಲಿ ಹಾನಿಗೊಳಗಾದ ರಸ್ತೆ, ಜನರು, ಪ್ರಾಣಿ ಸಂಕುಲಗಳಿಗೆ ಸೂಕ್ತ ರಕ್ಷಣೆ ಕೊಡುವ ಕೆಲಸ ಸರ್ಕಾರ ಮಾಡುತ್ತದೆ. ಅಧಿಕಾರ ವಹಿಸುಕೊಂಡ ತಕ್ಷಣವೇ ಭೀಕರ ಪ್ರವಹಾ ಹಾಗೂ ಕೋರೊನಾ ಸೊಂಕು ಸೇರಿದಂತೆ ಎಲ್ಲವನ್ನು ಯಶಸ್ವಿಯಾಗಿ ನಿಬಾಯಿಸಿದ್ದೇವೆ. ಕೊರೊನಾ ನಿಯಂತ್ರಣದಲ್ಲಿ ಪಕ್ಷಭೇಧವಿಲ್ಲದೇ ಒಟ್ಟುಗೂಡಿ ಜಿಲ್ಲಾಡಳಿತಕ್ಕೆ ಸಲಹೆಗಳನ್ನು ನೀಡಿ ಕೋರೊನಾ ಸೋಂಕು ಯಶಸ್ವಿಯಾಗಿ ನಿಭಾಯಿಸುವಕಲ್ಲಿ ಗದಗ ಪ್ರಥಮಸ್ತಾನದಲ್ಲಿದೆ ಎಂದರು.

ಬೆಣ್ಣಿ ಹಳ್ಳದ ಸ್ವಚ್ಚತಾ ಕಾರ್ಯಕ್ರಮಕ್ಕೆ ಹಣ ಬಿಡುಗಡೆಗೆ ನಿರಾವರಿ ನಿಗಮಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದ್ದು, ಅಂತಿಮ ಹಂತದಲ್ಲಿದೆ. ನಿರಾವರಿಗಾಗಿ ಈಗಾಗಲೆ 1 ಸಾವಿರ ಕೋಟಿ ಹಣ ಬಿಡುಗಡೆಯಾಗಿದ್ದು, ಟೆಂಡರ್ ಕಾಮಗಾರಿ ಕೂಡ ಪಾರಂಭವಾಗಿದೆ. ಪ್ರವಹಾದಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರ ಎ ಮತ್ತು ಬಿ ಕೆಟಗರಿಯ ಸಂತ್ರಸ್ತರಿಗಾಗಿ 5 ಲಕ್ಷ ರೂ ಹಣ ಬಿಡುಗಡೆ ಮಾಡಿದೆ. ಸಂತ್ರಸ್ತರಿಗೆ ಮೊದಲ ಹಂತದಲ್ಲಿ 1 ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದ್ದು, ಮನೆ ಕಟ್ಟಡದ ಬೆಳವಣಿಗೆ ಪೋಟೋ ಸಲ್ಲಿಸದಲ್ಲಿ ಉಳಿದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

2ನೇ ಹಂತದ ಹಣಕ್ಕಾಗಿ ಹಲವಾರು ಸಂತ್ರಸ್ತರು ಸಲ್ಲಿಸಬೇಕಾಗಿರುವ ಧಾಖಲೆಗಲನ್ನು ಸಲ್ಲಿಸಿಲ್ಲ. ಕೂಡಲೇ ಸಂತ್ರಸ್ತರು ಧಾಖಲೆಗಲನ್ನು ಸಲ್ಲಿಸಬೇಕು. ಹಾಗೂ ಸಂತ್ರಸ್ತರಿಗೆ ಎತ್ತರದ ಜಾಗದಲ್ಲಿ ಮನೆ ಕಟ್ಟಿಕೊಳ್ಳಲು ರಾಜೀವಗಾಂಧಿ ವಸತಿ ನಿಲಯ ನಿಗಮದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು.

ಬೆಣ್ಣಿಹಳ್ಳ ತೆರವುಗೊಳಿಸುವುವ ಪ್ರಸ್ತಾವನೆ ಇಗಾಗಲೇ ನಿರಾವರಿ ನಿಗಮಕ್ಕೆ ಸಲ್ಲಿಸಲಾಗಿದೆ. ಶಂಕರ ಪಾಟೀಲ, ಬಂಡಿ ಸೇರಿದಂತೆ ಹಲವರು ಸೇರಿ ಚರ್ಚಿಸಿದ್ದೇವೆ. ಬೆಣ್ಣಿ ಹಳ್ಳ ಸ್ವಚ್ಚತಾ ಕಾರ್ಯಕ್ರಮ ಪ್ರಾರಂಭ ಮಾಡುತ್ತೆವೆ. ಬೆಣ್ಣಿಹಳ್ಳ ಒತ್ತುವರಿ ಮಾಡಲು ಸರ್ಕಾರದ ಸೂಚನೆ ಬಂದಿಲ್ಲ. ಆದರೆ, ಒತ್ತುವರಿ ಮಾಡಬೇಕು ಎಂಬುದು ಮೊದಲಿನಿಂದಲೂ ನನ್ನ ಅಭಿಪ್ರಾಯವಿದೆ. ಅದಕ್ಕಾಗಿಯೇ ಒಂದು ಸಮಿತಿಯನ್ನ ರಚಿಸಬೇಕಾಗುತ್ತದೆ ಹಾಗೂ ಅದರ ಎಲ್ಲ ಅಯಾಮಗಳನ್ನು ತಿಳಿದುಕೊಂಡು ಅದಕ್ಕು ಚಾಲನೇ ನೀಡಬೇಕು ಎಂಬುದು ನನ್ನ ಮನಸ್ಸಿನಲ್ಲಿದೆ. ಮುಂದಿನ ದಿನಗಳಲ್ಲಿ ನಿರಾವರಿ ಸಚಿವರ ಜೊತೆಗೆ ಚರ್ಚಿಸಿ ಆ ಕಾರ್ಯ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಶಾಸಕ ಎಚ್.ಕೆ.ಪಾಟೀಲ, ವಿದಾನಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಮಾಜಿ ಸಚಿವ ಎಸ್.ಎಸ್.ಪಾಟೀಲ, ಜಿ.ಪಂ ಅಧ್ಯಕ್ಷ ಈರಣ್ಣ ನಾಡಗೌಡರ, ಜಿ.ಪಂ ಉಪಾಧ್ಯಕ್ಷೆ ಮಂಜುಳಾ ಹುಲ್ಲಣ್ಣವರ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಒಮಿಕ್ರಾನ ಭಿತಿ ಇಂದಲ್ಲಾ ನಾಳೆಯಿಂದ ಶುರು..!

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ನಗರಸಭೆ ಚುಣಾವಣೆಗೆ ಮತದಾನ ನಡೆಯುತ್ತಿದ್ದು, ನಗರದ 35 ವಾರ್ಡಗಳಲ್ಲಿ ನಡಿಯುತ್ತಿರುವ…

ಡೆತ್‌ನೋಟ್ ಬರೆದಿಟ್ಟು ಪೊಲೀಸ್ ಪೇದೆ ಸಾವು

ಉತ್ತರಪ್ರಭ ಸುದ್ದಿಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಮನೆಯಲ್ಲಿ ಪೊಲೀಸ್ ಪೇದೆಯೊಬ್ಬರು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ…

ರಾಷ್ಟ್ರೀಯ ಶಕ್ತಿ ಸಂರಕ್ಷಣಾ ದಿನ

 ಉತ್ತರಪ್ರಭ ಗದಗ: ತೋಂಟದಾರ್ಯ  ಇಂಜೀನಿಯರಿಂಗ್ ಕಾಲೇಜಿನ  ಇಲೇಕ್ಟ್ರೀಕಲ್ & ಇಲೇಕ್ಟ್ರಾನಿಕ್ಸ್ ವಿಭಾಗ ಮತ್ತು ಕಾಲೇಜಿನ ಇಂಟರಪುನರಶಿಪ್…

ರಂಗಭೂಮಿ ಕ್ಷೇತ್ರ: ಗದಗಿನ ಸಾವಿತ್ರಿ ಗೌಡರ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ಉತ್ತರಪ್ರಭ ಸುದ್ದಿಬೆಂಗಳೂರು: ಕರ್ನಾಟಕ ಸರ್ಕಾರ 2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. 66…