ಬೆಂಗಳೂರು: ಮಹಾಮಾರಿ ಕರೊನಾ ವೈರಸ್ನಿಂದ ಉಂಟಾದ ಕಠಿಣ ಪರಿಸ್ಥಿತಿನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶ್ವಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.
ಏಳು ದಿನಗಳ ವಿಧಾನಮಂಡಲ ಅಧಿವೇಶದ ಮೊದಲ ದಿನದಂದು ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು ಕೋವಿಡ್ ವಾರಿಯರ್ಸ್ ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಕೋವಿಡ್ನಿಂದ ಮೃತಪಟ್ಟವರಿಗೆ ಸರ್ಕಾರ ೩೦ ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಕೋವಿಡ್ ರೋಗಿಗಳಿಗೆ ಸರ್ಕಾರದಿಂದ ೨೪೮ ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಸುಮಾರು ೧.೩೬ ಲಕ್ಷ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ ಎಂದು ಸರ್ಕಾರವನ್ನು ಕಾರ್ಯವನ್ನು ರಾಜ್ಯಪಾಲ ವಜುಭಾಯಿ ವಾಲಾ ಕೊಂಡಾಡಿದರು. ಬೇಳೆಕಾಳುಗಳ ಉತ್ಪಾದನೆಯಲ್ಲಿ ಪ್ರಥಮ ಹಾಗೂ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನ ಪಡೆದಿದ್ದೇವೆ. ದೇಶದ ಮಾಹಿತಿ ತಂತ್ರಜ್ಞಾನಕ್ಕೆ ಶೇಕಡಾ ೪೦ರಷ್ಟು ಕೊಡುಗೆಯನ್ನು ನಾವು ನೀಡಿದ್ದೇವೆ. ಕರೊನಾ ಸಂಕಷ್ಟದಲ್ಲೂ ವಾಣಿಜ್ಯ ತೆರಿಗೆ ೩೦,೪೬೭ ಕೋಟಿ ರೂ. ಹಾಗು ಅಬಕಾರಿ ಇಲಾಖೆ ೧೬೭೮೮ ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ. ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಆಹಾರ ಭದ್ರತೆಯನ್ನು ಸರ್ಕಾರ ಖಾತರಿಪಡಿಸಿದೆ. ಕರೊನಾ ಲಾಕ್ಡೌನ್ ಸಮಯದಲ್ಲಿ ೯೦ ಲಕ್ಷ ಪ್ಯಾಕ್ ಮಾಡಿದ ಪೌಷ್ಟಿಕ ಆಹಾರ ಪೊಟ್ಟಣಗಳನ್ನು ಒದಗಿಸಿದೆ ಎಂದು ಮೂಲಕ ಸರ್ಕಾರ ಕಾರ್ಯಕ್ಕೆ ಫುಲ್ ಮಾರ್ಕ್ಸ್ ನೀಡಿದರು. ರೈಲುಗಳ ಮೂಲಕ ಕಾರ್ಮಿಕರನ್ನು ಅವರವರ ಸ್ವಂತ ಊರುಗಳಿಗೆ ಕಳುಹಿಸುವ ಕೆಲಸ ಮಾಡಿದೆ. ಅಸಂಘಟಿತ ಕಾರ್ಮಿಕರಿಗೆ ೫,೩೭೨ ಕೋಟಿ ರೂ. ಮೌಲ್ಯದ ಹಣಕಾಸು ನೆರವು ನೀಡಿದೆ. ಸುಮಾರು ೬೩,೫೯,೦೦೦ ಫಲಾನುಭವಿಗಳಿಗೆ ನೆರವು ಸಿಕ್ಕಿದೆ. ೧೧,೭೭೦ ಚರ್ಮ ಕುಶಲ ಕರ್ಮಿಗಳಿಗೆ ತಲಾ ೫೦೦೦ ರೂಪಾಯಿಗಳಂತೆ ಸಹಾಯ ಧನ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ನಿಧಿಯಲ್ಲಿ ೫೧ ಲಕ್ಷ ರೈತರಿಗೆ ೨೦೦೦ ರೂಪಾಯಿ ಹೆಚ್ಚುವರಿ ಮೊತ್ತದೊಂದಿಗೆ ೧೦೨೦ ಕೋಟಿ ರೂಪಾಯಿಗಳನ್ನು ಸರ್ಕಾರ ಮಂಜೂರು ಮಾಡಿದೆ ಎಂದರು.You May Also Like
ಇಂದಿನಿಂದ ಶ್ರೀ ಹೊಳಲಮ್ಮದೇವಿ ಜಾತ್ರೆ ಆರಂಭ
ತಾಲೂಕಿನ ಶ್ರೀಮಂತಗಡದ ಇತಿಹಾಸ ಪ್ರಸಿದ್ಧ ಹೊಳಲಮ್ಮದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಪ್ರಾರಂಭವಾಗುತ್ತಿದೆ. ಫೆ.27ರಂದು ರಥೋತ್ಸವ ಹಾಗೂ ಫೆ.28ರ ರವಿವಾರ ಸಂಜೆ 5ಕ್ಕೆ ಕಡುಬಿನ ಕಾಳಗ ಜರುಗುತ್ತದೆ.
- ಉತ್ತರಪ್ರಭ
- February 26, 2021
ವಿರೋಧದ ನಡುವೆಯೇ ಕೃಷಿ ಉತ್ಪನ್ನ ಮಾರುಕಟ್ಟೆ ವಿಧೇಯಕ ಅಂಗೀಕಾರ!
ಬೆಂಗಳೂರು : ವಿಪಕ್ಷಗಳ ವಿರೋಧದ ನಡುವೆಯೂ ವಿವಾದಿತ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ…
- ಉತ್ತರಪ್ರಭ
- September 26, 2020
ಶ್ರೀ ವೀರೆಶ್ವರ ಪೂಣ್ಯಾಶ್ರಮ ಅಂದಮಕ್ಕಳ ಶಾಲೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ
ಶ್ರೀ ವೀರೆಶ್ವರ ಪೂಣ್ಯಾಶ್ರಮ ಅಂದಮಕ್ಕಳ ಶಾಲೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಶಸ್ತಿ
- ಉತ್ತರಪ್ರಭ
- October 31, 2021
24 ಗಂಟೆಗಳಲ್ಲಿ ರಾಜ್ಯದಲ್ಲಿ 37 ಕೋವಿಡ್ ಪಾಸಿಟಿವ್
ಮೇ 03 ಸಂಜೆ 5 ರಿಂದ ಮೇ 04 ಸಂಜೆ 5ರ ವರೆಗೆ 37 ಹೊಸ ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ.
- ಉತ್ತರಪ್ರಭ
- May 4, 2020