ಕುಣಿಗಲ್: ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ಸಮುದಾಯ ಸುಮ್ಮನಿರಲ ಎಂದು ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ತಾಲೂಕು ಒಕ್ಕಲಿಗ ಧರ್ಮ ಮಹಾಸಭಾ ಹಮ್ಮಿಕೊಂಡಿದ್ದ ಭೈರವೈಕ್ಯ ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರ ಪುಣ್ಯಸ್ಮರಣೆ ಹಾಗೂ ಒಕ್ಕಲಿಗ ಧರ್ಮ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.

ಒಕ್ಕಲಿಗ ಸಮುದಾಯವೂ ಧ್ವನಿ ಎತ್ತದಿದ್ದರೆ ಸುಮುದಾಯಕ್ಕೆ ಬೇಕಾದ ಸವಲತ್ತು ಹಾಗೂ ಸೌಲಭ್ಯಗಳು ಸಿಗುವುದಿಲ್ಲ. ಇಡೀ ದೇಶವೇ ಜಾತಿ, ಧರ್ಮದ ವ್ಯವಸ್ಥೆಯಡಿ ನಿಂತಿದೆ. ಜಾತಿ ವ್ಯವಸ್ಥೆ ಬಗ್ಗೆ ವಿಸ್ತೃತ ಚರ್ಚೆಗಳು ನಡೆಯಬೇಕಿದೆ. ಎಲ್ಲರೂ ಒಂದು ಜಾತಿ, ಒಂದು ಧರ್ಮವನ್ನು ಸ್ವೀಕರಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಆರು ತಿಂಗಳಿAದ ಸುಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದು, ಸಮುದಾಯ ಸೂಕ್ಷತ್ರ‍್ಮವಾಗಿ ಗಮನಿಸುತ್ತಿದೆ. ಅದು ಮುಂದುವರಿದರೆ ಮುಂದಿನ ವಿದ್ಯಮಾನಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಸರಕಾರ ಎಚ್ಚರಿಕೆಯಿಂದ ನಡೆದು ಕೊಳ್ಳಬೇಕು ಎಂದರು.

ಏರುಪೇರುಗಳಾದ ಸಂದರ್ಭದಲ್ಲಿ ಧ್ವನಿ ಇಲ್ಲದೇ ಯಾರೂ ಏನನ್ನೂ ಕೊಡಲ್ಲ. ಕುಣಿಗಲ್‌ನ ಇಂದಿನ ಒಕ್ಕಲಿಗ ಧರ್ಮ ಸಮಾವೇಶದಿಂದಲೇ ಒಕ್ಕಲಿಗರ ಧ್ವನಿ ಕೇಳತೊಡಗಲಿದೆ. ಆಡಳಿತ ನಡೆಸುವ ವರ್ಗ, ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ಯಾವುದೇ ನಿರ್ಧಾರ ಕೈಗೊಂಡಿದ್ದು, ಸರ್ಕಾರ ಇಂತಹ ದುಸ್ಸಾಹಸಕ್ಕೆ ಕೈಹಾಕುವುದು ಬಿಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖಾ ಮಠದ ಮಂಗಳಾನAದನಾಥ ಸ್ವಾಮೀಜಿ, ಅರೆಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ, ಒಕ್ಕಲಿಗ ಮಹಾ ಸಭಾದ ಅಧ್ಯಕ್ಷ ಕೃಷ್ಣೆಗೌಡ ಮುಂತಾದವರಿದ್ದರು.

Leave a Reply

Your email address will not be published. Required fields are marked *

You May Also Like

ಜಕ್ಕಲಿಯಲ್ಲಿ ಟೆಂಗಿನ ಮರಕ್ಕೆ ಸಿಡಿಲು!

ಟೆಂಗಿನ ಮರಕ್ಕೆ ಸಿಡಿಲು ಬಡಿದು ದಗದಗ ಹೊತ್ತಿ ಉರಿದ ಘಟನೆ ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ನಡೆದಿದೆ.

ರೋಣ ಎಪಿಎಮ್‌ಸಿ ಅಧ್ಯಕ್ಷರಾಗಿ ರಾಜಣ್ಣ,ಉಪಾಧ್ಯಕ್ಷರಾಗಿ ಶಿವಾನಂದ ಆಯ್ಕೆ

ಕೃಷಿ ಉತ್ಪನ್ನ ಮಾರುಕಟ್ಟೆ(ಕೇಂದ್ರ ಕಚೇರಿ ಹೊಳೆಆಲೂರ) ಸಮಿತಿಯ ಕೊನೆಯ ಅವಧಿಗೆ ನೂತನ ಅಧ್ಯಕ್ಷರಾಗಿ ರೋಣ ರೈತ ಕ್ಷೇತ್ರದ ಸದಸ್ಯ ಅಂದಾನಪ್ಪ ಉರ್ಫ ರಾಜಣ್ಣ ಹೂಲಿ,ಉಪಾಧ್ಯಕ್ಷರಾಗಿ ಹೊಳೆಆಲೂರ ಕ್ಷೇತ್ರದ ಸದಸ್ಯ ಶಿವಾನಂದ ಅರಹುಣಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಲೆನಾಡ ಜನರ ನಿದ್ದೆಗೆಡಿಸಿದ ಪಾದರಾಯನಪುರ!

ಪಾದರಾಯನಪುರದ ಗಲಾಟೆ ಮಲೆನಾಡಿನಲ್ಲಿ ಭಯ ಹುಟ್ಟಿಸುತ್ತಿದೆ. ಕೊರೊನಾ ದೇಶ ಹಾಗೂ ರಾಜ್ಯದಲ್ಲಿ ವಕ್ಕರಿಸಿದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ಒಂದು ಕೇಸ್ ಕೂಡ ಇರಲಿಲ್ಲ. ಆದರೆ, ಸದ್ಯ ಈ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಸಂಸದರು ದನ ಕಾಯುತ್ತಿದ್ದಾರೆಯೇ? ಪ್ರಧಾನಿಯನ್ನು ರಾಜ್ಯಕ್ಕೆ ಕರೆಯಿಸಿ..!

ರಾಯಚೂರು : ರಾಜ್ಯ ಸರ್ಕಾರಕ್ಕೆ ಮಾನವೀಯತೆ ಇಲ್ಲ ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.