ಕುಣಿಗಲ್: ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ಸಮುದಾಯ ಸುಮ್ಮನಿರಲ ಎಂದು ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ತಾಲೂಕು ಒಕ್ಕಲಿಗ ಧರ್ಮ ಮಹಾಸಭಾ ಹಮ್ಮಿಕೊಂಡಿದ್ದ ಭೈರವೈಕ್ಯ ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರ ಪುಣ್ಯಸ್ಮರಣೆ ಹಾಗೂ ಒಕ್ಕಲಿಗ ಧರ್ಮ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.

ಒಕ್ಕಲಿಗ ಸಮುದಾಯವೂ ಧ್ವನಿ ಎತ್ತದಿದ್ದರೆ ಸುಮುದಾಯಕ್ಕೆ ಬೇಕಾದ ಸವಲತ್ತು ಹಾಗೂ ಸೌಲಭ್ಯಗಳು ಸಿಗುವುದಿಲ್ಲ. ಇಡೀ ದೇಶವೇ ಜಾತಿ, ಧರ್ಮದ ವ್ಯವಸ್ಥೆಯಡಿ ನಿಂತಿದೆ. ಜಾತಿ ವ್ಯವಸ್ಥೆ ಬಗ್ಗೆ ವಿಸ್ತೃತ ಚರ್ಚೆಗಳು ನಡೆಯಬೇಕಿದೆ. ಎಲ್ಲರೂ ಒಂದು ಜಾತಿ, ಒಂದು ಧರ್ಮವನ್ನು ಸ್ವೀಕರಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಆರು ತಿಂಗಳಿAದ ಸುಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದು, ಸಮುದಾಯ ಸೂಕ್ಷತ್ರ‍್ಮವಾಗಿ ಗಮನಿಸುತ್ತಿದೆ. ಅದು ಮುಂದುವರಿದರೆ ಮುಂದಿನ ವಿದ್ಯಮಾನಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಸರಕಾರ ಎಚ್ಚರಿಕೆಯಿಂದ ನಡೆದು ಕೊಳ್ಳಬೇಕು ಎಂದರು.

ಏರುಪೇರುಗಳಾದ ಸಂದರ್ಭದಲ್ಲಿ ಧ್ವನಿ ಇಲ್ಲದೇ ಯಾರೂ ಏನನ್ನೂ ಕೊಡಲ್ಲ. ಕುಣಿಗಲ್‌ನ ಇಂದಿನ ಒಕ್ಕಲಿಗ ಧರ್ಮ ಸಮಾವೇಶದಿಂದಲೇ ಒಕ್ಕಲಿಗರ ಧ್ವನಿ ಕೇಳತೊಡಗಲಿದೆ. ಆಡಳಿತ ನಡೆಸುವ ವರ್ಗ, ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ಯಾವುದೇ ನಿರ್ಧಾರ ಕೈಗೊಂಡಿದ್ದು, ಸರ್ಕಾರ ಇಂತಹ ದುಸ್ಸಾಹಸಕ್ಕೆ ಕೈಹಾಕುವುದು ಬಿಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖಾ ಮಠದ ಮಂಗಳಾನAದನಾಥ ಸ್ವಾಮೀಜಿ, ಅರೆಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ, ಒಕ್ಕಲಿಗ ಮಹಾ ಸಭಾದ ಅಧ್ಯಕ್ಷ ಕೃಷ್ಣೆಗೌಡ ಮುಂತಾದವರಿದ್ದರು.

Leave a Reply

Your email address will not be published. Required fields are marked *

You May Also Like

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ…

ಅಗರಬತ್ತಿ ಮಾರುವ ಕುಟುಂಬದಲ್ಲಿ ಸಾಗರನ ಸಾಧನೆಯ ಸುವಾಸನೆ

ಸಾಧೆನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸಾಧಿಸಬೇಕು ಎನ್ನುವ ಛಲವೊಂದಿದ್ದರೆ, ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಅಗರಬತ್ತಿ ಮಾರುವ ಕುಟುಂಬವೊಂದವರ ಕುವರನ ಕಥೆ ತಾಜಾ ಉದಾಹರಣೆ.

ಕಾಣೆಯಾಗಿದ್ದ ಸಹೋದರಿ – ಸಹೋದರನನ್ನು ಒಂದುಗೂಡಿಸಿದ ಕೊರೊನಾ!

ಬಳ್ಳಾರಿ: ಹಲವು ವರ್ಷಗಳಿಂದ ದೂರವಾಗಿದ್ದ ಅಣ್ಣ – ತಂಗಿಯನ್ನು ಮಹಾಮಾರಿ ಒಂದುಗೂಡಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ…

ಈ ವರ್ಷ ಮುಂಗಾರು ಮಳೆ ರಾಜ್ಯವನ್ನು ಯಾವಾಗ ಪ್ರವೇಶಿಸಲಿದೆ ಗೊತ್ತಾ?

ನೈರುತ್ಯ ಮುಂಗಾರು ಮಳೆ ಜೂ. 1ಕ್ಕೆ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.